ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು

ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್
ದೀಪಿಕಾ ಪಡುಕೋಣೆ
Follow us
|

Updated on:Mar 15, 2023 | 12:01 PM

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಕೇವಲ ಬಾಲಿವುಡ್ ಮಾತ್ರವಲ್ಲ ಹಾಲಿವುಡ್ ಮಂದಿಗೂ ಪರಿಚಿತರು. ಅವರು ಇಂಗ್ಲಿಷ್​ನ ‘ಎಕ್​ಎಕ್ಸ್​ಎಕ್ಸ್​: ರಿಟರ್ನ್​ ಆಫ್ ಕ್ಸಾಂಡರ್ ಕೇಜ್​’ ಸಿನಿಮಾದಲ್ಲಿ ನಟಿಸಿದ್ದರು. ಈ ಮೂಲಕ ಹಾಲಿವುಡ್​​ಗೂ ಕಾಲಿಟ್ಟಿದ್ದರು.. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ ಮಿಂಚಿದ್ದರು. ಆದರೆ, ಅವರಿಗೆ ಅವಮಾನ ಆಗಿದೆ. ಈ ಬಗ್ಗೆ ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಈ ವೇದಿಕೆ ಮೇಲೆ ಆಸ್ಕರ್ ಗೆದ್ದಿತು. ಈ ಹಾಡಿನ ಪರ್ಫಾರ್ಮೆನ್ಸ್​​ಗೂ ಮೊದಲು ದೀಪಿಕಾ ಪಡುಕೋಣೆ ಅವರು ವೇದಿಕೆ ಏರಿ ಹಾಡಿನ ಬಗ್ಗೆ ವಿವರಣೆ ನೀಡಿದ್ದರು.

ಇದನ್ನೂ ಓದಿ:  ‘ಪ್ರಾಜೆಕ್ಟ್​ ಕೆ’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ದೀಪಿಕಾ ಪಡುಕೋಣೆ; ಸ್ಟಾರ್​ ಹೀರೋಗಿಂತ ಹೆಚ್ಚು ರೆಮ್ಯುನರೇಷನ್

ದೀಪಿಕಾ ಆಸ್ಕರ್ ವೇದಿಕೆ ಏರಿದ ಫೋಟೋ ವೈರಲ್ ಆಗಿದೆ. ಅನೇಕರು ಅವರನ್ನು ದೀಪಿಕಾ ಎಂದು ಗುರುತಿಸಲೇ ಇಲ್ಲ. ಬದಲಿಗೆ ಬ್ರೇಜಿಲ್ ಮಾಡೆಲ್, ಡಿಸೈನರ್ ಕಮಿಲಾ ಆಲ್ವ್ಸ್​ ಮೆಕ್ಕಾನಹೇ ಹೆಸರನ್ನು ಸೇರಿಸಲಾಗಿದೆ. ಆಸ್ಕರ್ ವೇದಿಕೆ ಏರಿದ್ದು ಕಮಿಲಾ ಆಲ್ವ್ಸ್ ಎಂದು ಅನೇಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಇದರಿಂದ ದೀಪಿಕಾಗೆ ಅವಮಾನ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ಅಂದಹಾಗೆ ಕಮಿಲಾ ಅವರು ಹಾಲಿವುಡ್​ನ ಖ್ಯಾತ ನಟ ಮ್ಯಾಥೀವ್ ಮೆಕ್ಕಾನಹೇ ಅವರನ್ನು ಮದುವೆ ಆಗಿದ್ದಾರೆ.

ಇದನ್ನೂ ಓದಿ: Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಆಸ್ಕರ್ ವೇದಿಕೆ ಮೇಲೆ ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಈ ಹಾಡಿನ ಬಗ್ಗೆ ವಿವರಣೆ ನೀಡಿದ್ದರು. ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದರು. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.  ಆಸ್ಕರ್ ವೇದಿಕೆ ಏರುವಾಗ ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಅವರನ್ನು ಬೇರೆ ಹೆಸರಲ್ಲಿ ಕರೆದಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Wed, 15 March 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ