ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು

ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್
ದೀಪಿಕಾ ಪಡುಕೋಣೆ

Updated on: Mar 15, 2023 | 12:01 PM

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಕೇವಲ ಬಾಲಿವುಡ್ ಮಾತ್ರವಲ್ಲ ಹಾಲಿವುಡ್ ಮಂದಿಗೂ ಪರಿಚಿತರು. ಅವರು ಇಂಗ್ಲಿಷ್​ನ ‘ಎಕ್​ಎಕ್ಸ್​ಎಕ್ಸ್​: ರಿಟರ್ನ್​ ಆಫ್ ಕ್ಸಾಂಡರ್ ಕೇಜ್​’ ಸಿನಿಮಾದಲ್ಲಿ ನಟಿಸಿದ್ದರು. ಈ ಮೂಲಕ ಹಾಲಿವುಡ್​​ಗೂ ಕಾಲಿಟ್ಟಿದ್ದರು.. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ ಮಿಂಚಿದ್ದರು. ಆದರೆ, ಅವರಿಗೆ ಅವಮಾನ ಆಗಿದೆ. ಈ ಬಗ್ಗೆ ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಈ ವೇದಿಕೆ ಮೇಲೆ ಆಸ್ಕರ್ ಗೆದ್ದಿತು. ಈ ಹಾಡಿನ ಪರ್ಫಾರ್ಮೆನ್ಸ್​​ಗೂ ಮೊದಲು ದೀಪಿಕಾ ಪಡುಕೋಣೆ ಅವರು ವೇದಿಕೆ ಏರಿ ಹಾಡಿನ ಬಗ್ಗೆ ವಿವರಣೆ ನೀಡಿದ್ದರು.

ಇದನ್ನೂ ಓದಿ:  ‘ಪ್ರಾಜೆಕ್ಟ್​ ಕೆ’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ದೀಪಿಕಾ ಪಡುಕೋಣೆ; ಸ್ಟಾರ್​ ಹೀರೋಗಿಂತ ಹೆಚ್ಚು ರೆಮ್ಯುನರೇಷನ್

ದೀಪಿಕಾ ಆಸ್ಕರ್ ವೇದಿಕೆ ಏರಿದ ಫೋಟೋ ವೈರಲ್ ಆಗಿದೆ. ಅನೇಕರು ಅವರನ್ನು ದೀಪಿಕಾ ಎಂದು ಗುರುತಿಸಲೇ ಇಲ್ಲ. ಬದಲಿಗೆ ಬ್ರೇಜಿಲ್ ಮಾಡೆಲ್, ಡಿಸೈನರ್ ಕಮಿಲಾ ಆಲ್ವ್ಸ್​ ಮೆಕ್ಕಾನಹೇ ಹೆಸರನ್ನು ಸೇರಿಸಲಾಗಿದೆ. ಆಸ್ಕರ್ ವೇದಿಕೆ ಏರಿದ್ದು ಕಮಿಲಾ ಆಲ್ವ್ಸ್ ಎಂದು ಅನೇಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಇದರಿಂದ ದೀಪಿಕಾಗೆ ಅವಮಾನ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ಅಂದಹಾಗೆ ಕಮಿಲಾ ಅವರು ಹಾಲಿವುಡ್​ನ ಖ್ಯಾತ ನಟ ಮ್ಯಾಥೀವ್ ಮೆಕ್ಕಾನಹೇ ಅವರನ್ನು ಮದುವೆ ಆಗಿದ್ದಾರೆ.

ಇದನ್ನೂ ಓದಿ: Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಆಸ್ಕರ್ ವೇದಿಕೆ ಮೇಲೆ ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಈ ಹಾಡಿನ ಬಗ್ಗೆ ವಿವರಣೆ ನೀಡಿದ್ದರು. ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದರು. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.  ಆಸ್ಕರ್ ವೇದಿಕೆ ಏರುವಾಗ ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಅವರನ್ನು ಬೇರೆ ಹೆಸರಲ್ಲಿ ಕರೆದಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Wed, 15 March 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us