AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರಬಂದಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ

ನಟಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ನಡುವೆ ಕಿರಿಕ್ ಆದ ಬಗ್ಗೆ ಸುದ್ದಿಯಾಗಿತ್ತು. ದೀಪಿಕಾ ಅವರು ‘ಸ್ಪಿರಿಟ್’ ಸಿನಿಮಾದಿಂದ ಹೊರನಡೆದ ಬಳಿಕ ಅನೇಕ ಬಗೆಯ ಚರ್ಚೆ ಶುರುವಾಗಿತ್ತು. ಅವರ ನಿರ್ಧಾರಕ್ಕೆ ನಿಜವಾದ ಕಾರಣ ಏನು ಎಂಬುದು ಈಗ ತಿಳಿದುಬಂದಿದೆ.

‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರಬಂದಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
Deepika Padukone, Sandeep Reddy Vanga
ಮದನ್​ ಕುಮಾರ್​
|

Updated on: Jul 23, 2025 | 8:25 PM

Share

ನಿರ್ದೇಶಕ ಸಂದೀಪ್ ರೆಡ್ಡಿ ವಂಗ (Sandeep Reddy Vanga) ಅವರು ಸ್ಟಾರ್ ಡೈರೆಕ್ಟರ್ ಆಗಿ ಬೆಳೆದಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ಯಶಸ್ಸಿನಿಂದ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಪ್ರಭಾಸ್ ಜೊತೆ ‘ಸ್ಪಿರಿಟ್’ ಸಿನಿಮಾ (Spirit Movie) ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ (Deepika Padukone) ನಾಯಕಿ ಆಗಬೇಕಿತ್ತು. ಆದರೆ ಅವರು ಚಿತ್ರತಂಡದಿಂದ ಹೊರಬಂದರು. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಈಗಾಗಲೇ ಹಲವು ಅಂತೆ-ಕಂತೆಗಳು ಹೊರಬಂದಿವೆ. ಆದರೆ ಈಗ ಅಸಲಿ ಕಾರಣ ಬಹಿರಂಗ ಆಗಿದೆ.

ದೀಪಿಕಾ ಪಡುಕೋಣೆ ಅವರು ‘ಸ್ಪಿರಿಟ್’ ಸಿನಿಮಾದ ಕಥೆ ಕೇಳಿ ಇಷ್ಟಪಟ್ಟಿದ್ದು ನಿಜ. ಇನ್ನೇನು ಒಪ್ಪಂದ ಕೂಡ ಆಗಬೇಕಿತ್ತು. ಬಳಿಕ ಅವರಿಗೆ ಅಲ್ಲು ಅರ್ಜುನ್ ನಟನೆಯ ಹೊಸ ಸಿನಿಮಾದಿಂದ ಆಫರ್ ಬಂತು. ಆ ಕಥೆ ಮತ್ತು ಪಾತ್ರ ಅವರಿಗೆ ತುಂಬಾ ಇಷ್ಟ ಆಯಿತು. ಒಂದೇ ಸಮಯಕ್ಕೆ ಎರಡೂ ಸಿನಿಮಾವನ್ನು ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವರು ಒಂದನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯ ಆಯಿತು.

ಈ ಕಾರಣದಿಂದಾಗಿ ದೀಪಿಕಾ ಪಡುಕೋಣೆ ಅವರು ಪ್ರಭಾಸ್ ಜೊತೆಗಿನ ಸಿನಿಮಾವನ್ನು ಬಿಟ್ಟು ಅಲ್ಲು ಅರ್ಜುನ್ ಜೊತೆಗಿನ ಸಿನಿಮಾವನ್ನು ಆಯ್ಕೆ ಮಾಡಿಕೊಂಡರು ಎಂದು ಹೇಳಲಾಗುತ್ತಿದೆ. ಈ ಸಿನಿಮಾಗೆ ಅಟ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ ಜೊತೆ ದೀಪಿಕಾ ಅವರು ‘ಕಲ್ಕಿ 2898 ಎಡಿ’ ಸಿನಿಮಾ ಮಾಡಿದ್ದರು. ಆದರೆ ಅಲ್ಲು ಅರ್ಜುನ್ ಜೊತೆ ಇದು ಅವರಿಗೆ ಮೊದಲ ಅವಕಾಶ. ಅವರ ನಿರ್ಧಾರಕ್ಕೆ ಇದು ಕೂಡ ಪ್ರಮುಖ ಕಾರಣ ಎನ್ನಲಾಗಿದೆ.

ಇದನ್ನೂ ಓದಿ
Image
ಇತಿಹಾಸ ಬರೆದ ದೀಪಿಕಾ ಪಡುಕೋಣೆ, ಹಾಲಿವುಡ್ ವಾಕ್ ಆಫ್ ಫೇಮ್ ಪಡೆದ ನಟಿ
Image
ತಂದೆ ಬರ್ತ್​ಡೇಗೆ ಹೊಸ ಬ್ಯಾಡ್ಮಿಂಟನ್ ಸ್ಕೂಲ್ ಆರಂಭಿಸಿದ ನಟಿ ದೀಪಿಕಾ
Image
ದೀಪಿಕಾಳಿಂದ ದೂರವಾದ ಬಗ್ಗೆ ನನಗೆ ಬೇಸರ ಇಲ್ಲ; ಮಾಜಿ ಬಾಯ್​ಫ್ರೆಂಡ್ ಹೇಳಿಕೆ
Image
ಹೊಸ ಸಿನಿಮಾಕ್ಕೆ ದೀಪಿಕಾ ಪಡೆಯುತ್ತಿದ್ದಾರೆ ದಾಖಲೆ ಮೊತ್ತದ ಸಂಭಾವನೆ, ಮೊತ್ತ

ಈ ಸತ್ಯ ಗೊತ್ತಾಗುವುದಕ್ಕೂ ಮುನ್ನ ಹಲವು ಗಾಸಿಪ್​ಗಳು ಹರಿದಾಡಿದವು. ದೀಪಿಕಾ ಪಡುಕೋಣೆ ಅವರು ದಿನಕ್ಕೆ ಕೇವಲ 8 ಗಂಟೆ ಮಾತ್ರ ಶೂಟಿಂಗ್ ಮಾಡಬೇಕು ಎಂದು ಷರತ್ತು ಹಾಕಿದರು. ಅವರು ಕಥೆ ಲೀಕ್ ಮಾಡಿದರು ಎಂಬಿತ್ಯಾದಿ ಗಾಸಿಪ್ ಕೇಳಿಬಂದವು. ಆದರೆ ಈಗ ಪ್ರಾಕ್ಟಿಕಲ್ ಕಾರಣ ಏನು ಎಂಬುದು ಗೊತ್ತಾಗಿದೆ. ದೀಪಿಕಾ ಹೊರನಡೆದ ಬಳಿಕ ‘ಸ್ಪಿರಿಟ್’ ಸಿನಿಮಾಗೆ ತೃಪ್ತಿ ದಿಮ್ರಿ ಅವರು ನಾಯಕಿ ಆದರು.

ಇದನ್ನೂ ಓದಿ: ಅಂದುಕೊಂಡಂತೆ ನಡೆದಿದ್ದರೆ ಮಲ್ಯ ಸೊಸೆ ಆಗಿರುತ್ತಿದ್ದರು ದೀಪಿಕಾ; ಕೊನೆಗೆ ಆಗಿದ್ದೇನು?

ದೀಪಿಕಾ ಪಡುಕೋಣೆ ಅವರ ನಿರ್ಧಾರದ ಬಗ್ಗೆ ಅಭಿಮಾನಿಗಳಿಗೆ ಖುಷಿ ಇದೆ. ಅಲ್ಲು ಅರ್ಜುನ್ ಮತ್ತು ಅಟ್ಲಿ ಕಾಂಬಿನೇಷನ್​ನ ಸಿನಿಮಾ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಹೀರೋಯಿನ್ ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಸಿನಿಮಾಗೆ ಹೇಗೆ ತಯಾರಿ ನಡೆಯತ್ತಿದೆ ಎಂಬುದರ ಝಲಕ್ ತೋರಿಸಲು ವಿಡಿಯೋ ರಿಲೀಸ್ ಮಾಡಲಾಗಿದೆ. ಅದನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ