ಜ್ಯೂ.ಎನ್​ಟಿಆರ್​ ಜತೆ ನಟಿಸೋ ಅವಕಾಶ ಯಾವ ಹೀರೋಯಿನ್​ಗೆ? ಕೇಳಿ ಬರುತ್ತಿದೆ ಹಲವು ಜನಪ್ರಿಯರ ಹೆಸರು

ಅವರ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಯಾರು ನಾಯಕಿ ಆಗಬಹುದು ಎನ್ನುವ ಚರ್ಚೆ ಜೋರಾಗಿದೆ.

ಜ್ಯೂ.ಎನ್​ಟಿಆರ್​ ಜತೆ ನಟಿಸೋ ಅವಕಾಶ ಯಾವ ಹೀರೋಯಿನ್​ಗೆ? ಕೇಳಿ ಬರುತ್ತಿದೆ ಹಲವು ಜನಪ್ರಿಯರ ಹೆಸರು
jr ntr
Follow us
| Updated By: ರಾಜೇಶ್ ದುಗ್ಗುಮನೆ

Updated on: May 24, 2022 | 7:00 AM

ಹೀರೋ ಅಂದಮೇಲೆ ಅಲ್ಲೊಂದು ಹೀರೋಯಿನ್ ಇರಲೇ ಬೇಕು. ಈ ನಿಯಮ ಬಹುತೇಕ ಸಿನಿಮಾಗಳಲ್ಲಿ ಬಳಕೆ ಆಗುತ್ತದೆ. ಸಾಮಾನ್ಯವಾಗಿ ಸ್ಟಾರ್ ನಟರ ಸಿನಿಮಾ ಎಂದಾಗ ಹೀರೋಯಿನ್ ಆಯ್ಕೆ ವೇಳೆ ಗ್ಲಾಮರ್​ಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಯಾರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ನಿರ್ದೇಶಕರು ಹಾಗೂ ನಿರ್ಮಾಪಕರು ತಲೆಕೆಡಿಸಿಕೊಳ್ಳುತ್ತಾರೆ. ಈಗ ಜ್ಯೂ.ಎನ್​ಟಿಆರ್ (Jr. NTR) ಮುಂದಿನ ಚಿತ್ರಕ್ಕೆ (Jr. NTR 30) ನಾಯಕಿ ಯಾರು ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಅಷ್ಟೇ ಅಲ್ಲ, ಜನಪ್ರಿಯರ ಹೀರೋಯಿನ್​ಗಳ ಹೆಸರು ಕೇಳಿ ಬರುತ್ತಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಜ್ಯೂ.ಎನ್​ಟಿಆರ್ ಪಾತ್ರ ಪ್ರೇಕ್ಷಕರಿಗೆ ಸಖತ್​ ಇಷ್ಟವಾಗಿತ್ತು. ಅವರ ಬಗ್ಗೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಮತ್ತು ಅವರ ಪಾತ್ರ ರೀಚ್ ಆಗಿತ್ತು. ಆದರೆ, ಜ್ಯೂ.ಎನ್​ಟಿಆರ್​ಗೆ ಜತೆಯಾಗಿ ಯಾವ ಹೀರೋಯಿನ್​ ಕೂಡ ಕಾಣಿಸಿಕೊಂಡಿರಲಿಲ್ಲ. ಇದು ಅವರ ಫ್ಯಾನ್ಸ್​ಗೆ ಸ್ವಲ್ಪ ಬೇಸರ ತರಿಸಿದ್ದಂತೂ ನಿಜ. ಈ ಕಾರಣಕ್ಕೆ, ಅವರ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಯಾರು ನಾಯಕಿ ಆಗಬಹುದು ಎನ್ನುವ ಚರ್ಚೆ ಜೋರಾಗಿದೆ.

ಆಲಿಯಾ ಭಟ್ ಅಥವಾ ಶ್ರದ್ಧಾ ಕಪೂರ್ ಇಬ್ಬರಲ್ಲಿ ಒಬ್ಬರು ಚಿತ್ರಕ್ಕೆ ನಾಯಕಿ ಆಗಲಿದ್ದಾರೆ ಎಂದು ವರದಿ ಆಗಿತ್ತು. ಇಬ್ಬರೂ ಈಗಾಗಲೇ ದಕ್ಷಿಣದಲ್ಲಿ ಹೆಸರು ಮಾಡಿದ್ದಾರೆ. ‘ಸಾಹೋ’ ಮೂಲಕ ಶ್ರದ್ಧಾ ತೆಲುಗಿಗೆ ಕಾಲಿಟ್ಟರೆ, ‘ಆರ್​ಆರ್​ಆರ್​’ ಮೂಲಕ ಆಲಿಯಾ ದಕ್ಷಿಣದತ್ತ ಮುಖ ಮಾಡಿದ್ದಾರೆ. ಜ್ಯೂ.ಎನ್​ಟಿಆರ್ ಸಿನಿಮಾದಲ್ಲಿ ನಟಿಸೋಕೆ ಇಬ್ಬರೂ ಹಿಂದೇಟು ಹಾಕಿದ್ದಾರೆ ಎನ್ನಲಾಗುತ್ತಿದೆ. ಸದ್ಯ ದೀಪಿಕಾ ಪಡುಕೋಣೆ ಹಾಗೂ ಸಾಯಿ ಪಲ್ಲವಿ ಹೆಸರು ಕೇಳಿ ಬರುತ್ತಿದೆ. ಇಬ್ಬರಲ್ಲಿ ಒಬ್ಬರು ಜ್ಯೂ.ಎನ್​ಟಿಆರ್​ಗೆ ಜೊತೆಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ಜ್ಯೂ.ಎನ್​ಟಿಆರ್ ಫಸ್ಟ್​ ಲುಕ್​ ಬಗ್ಗೆ ಹೊರಬಿತ್ತು ಅಚ್ಚರಿಯ ವಿಚಾರ; ಪ್ರಶಾಂತ್ ನೀಲ್ ಹೀಗೆ ಮಾಡಿದ್ದೇಕೆ?
Image
Bagheera Movie: ನೆರವೇರಿತು ‘ಬಘೀರಾ’ ಮುಹೂರ್ತ; ಪ್ರಶಾಂತ್ ನೀಲ್ ಕತೆಗೆ ಶ್ರೀಮುರುಳಿ ನಾಯಕ
Image
Jr NTR Birthday: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್
Image
ಲೈವ್​ನಲ್ಲಿ ಹೆಂಡತಿಗೆ ಕಿಸ್ ಮಾಡಿದ ಬಿಗ್ ಬಾಸ್ ಸ್ಪರ್ಧಿ; ಸಿಟ್ಟಾದ ಪತ್ನಿ, ವೈರಲ್ ಆಯ್ತು ವಿಡಿಯೋ

ಇದನ್ನೂ ಓದಿ: ಜ್ಯೂ.ಎನ್​ಟಿಆರ್ ಫಸ್ಟ್​ ಲುಕ್​ ಬಗ್ಗೆ ಹೊರಬಿತ್ತು ಅಚ್ಚರಿಯ ವಿಚಾರ; ಪ್ರಶಾಂತ್ ನೀಲ್ ಹೀಗೆ ಮಾಡಿದ್ದೇಕೆ?

ದೀಪಿಕಾಗೆ ದೇಶ ಮಟ್ಟದಲ್ಲಿ ಖ್ಯಾತಿ ಇದೆ. ಅವರು ನಟನೆ ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಈಗಾಗಲೇ ಪ್ರಭಾಸ್ ಜತೆ ಅವರು ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ದಕ್ಷಿಣ ಭಾರತಕ್ಕೆ ಅವರ ಕಂಬ್ಯಾಕ್ ಆಗುತ್ತಿದೆ. ಈ ಮಧ್ಯೆ ಅವರಿಗೆ ಜ್ಯೂ.ಎನ್​ಟಿಆರ್​ ಸಿನಿಮಾದ ಆಫರ್ ಹೋಗಿದೆ ಎಂದು ವರದಿ ಆಗಿದೆ. ಸಾಯಿ ಪಲ್ಲವಿ ಅವರು ನ್ಯಾಚುರಲ್ ಬ್ಯೂಟಿ ಎಂದೇ ಫೇಮಸ್ ಆದವರು. ಅವರನ್ನು ಈ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಆಲೋಚನೆಯೂ ನಿರ್ದೇಶಕರಿಗೆ ಇದೆ ಎನ್ನಲಾಗುತ್ತಿದೆ. ಅಂತಿಮವಾಗಿ ಯಾರು ಫೈನಲ್ ಆಗಲಿದ್ದಾರೆ ಅನ್ನೋದು ಸದ್ಯದಲ್ಲೇ ತಿಳಿಯಲಿದೆ.

ಇತ್ತೀಚೆಗೆ ‘ಜ್ಯೂ.ಎನ್​ಟಿಆರ್​ 30’ ಮೋಷನ್ ಪೋಸ್ಟರ್ ರಿಲೀಸ್ ಆಗಿತ್ತು. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾ ಯಾವ ಕಥೆಯನ್ನು ಹೊಂದಿರಲಿದೆ ಅನ್ನೋದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ