AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಹೈಕೋರ್ಟ್​ನಲ್ಲಿ ಸುಶಾಂತ್​ ಸಿಂಗ್​ ತಂದೆಗೆ ಹಿನ್ನಡೆ

‘ನ್ಯಾಯ್​ ದಿ ಜಸ್ಟೀಸ್’​ ಸಿನಿಮಾ ಶುಕ್ರವಾರ (ಜೂನ್​ 11) ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಸುಶಾಂತ್​ ಜೀವನ ಆಧರಿಸಿದ ಈ ಸಿನಿಮಾ ಸಿದ್ಧಗೊಂಡಿದೆಯಂತೆ.

ದೆಹಲಿ ಹೈಕೋರ್ಟ್​ನಲ್ಲಿ ಸುಶಾಂತ್​ ಸಿಂಗ್​ ತಂದೆಗೆ ಹಿನ್ನಡೆ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 10, 2021 | 7:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಸಾವಿನ ವಿಚಾರ ಸಾಕಷ್ಟು ವಿವಾದ ಹುಟ್ಟು ಹಾಕಿದೆ. ಅವರ ಸಾವಿನ ಬಗ್ಗೆ ಸಾಕಷ್ಟು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ, ಪ್ರಕರಣದ ತನಿಖೆ ಸಿಬಿಐಗೆ ವಹಿಸಲಾಗಿದೆ. ಈ ಪ್ರಕರಣದ ಬಗ್ಗೆ ಇನ್ನೂ ತನಿಖೆ ಪ್ರಗತಿಯಲ್ಲಿರುವಾಗಲೇ ಕೆಲವರು ಸುಶಾಂತ್​ ಸಾವಿನ ಬಗ್ಗೆ ಸಿನಿಮಾ ಮಾಡಿದ್ದಾರೆ. ಇದಕ್ಕೆ ತಡೆ ನೀಡುವಂತೆ ಸುಶಾಂತ್​ ಸಿಂಗ್ ತಂದೆ ದೆಹಲಿ ಹೈಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ.

‘ನ್ಯಾಯ್​ ದಿ ಜಸ್ಟೀಸ್’​ ಸಿನಿಮಾ ಶುಕ್ರವಾರ (ಜೂನ್​ 11) ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಸುಶಾಂತ್​ ಜೀವನ ಆಧರಿಸಿದ ಈ ಸಿನಿಮಾ ಸಿದ್ಧಗೊಂಡಿದೆಯಂತೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಶಾಂತ್ ತಂದೆ ಕೃಷ್ಣ ಕಿಶೋರ್​ ಸಿಂಗ್​, ‘ಈ ಸಿನಿಮಾವನ್ನು ಸುಶಾಂತ್​ ಕುಟುಂಬದ ಅನುಮತಿ ಇಲ್ಲದೆ ಸಿದ್ಧಪಡಿಸಲಾಗಿದೆ. ಮಗನ ಆತ್ಮಹತ್ಯೆಯಲ್ಲಿ ಪಾತ್ರವಿದೆ ಎಂದು ಆರೋಪಿಸಲ್ಪಟ್ಟ ವ್ಯಕ್ತಿಗಳನ್ನು ಚಿತ್ರದಲ್ಲಿ ವಿಶ್ವಾಸಾರ್ಹರು ಎಂದು ತೋರಿಸಲಾಗಿದೆ’ ಎಂಬುದಾಗಿ ಆರೋಪಿಸಿ, ದೆಹಲಿ ಕೋರ್ಟ್​​ ಮೆಟ್ಟಿಲೇರಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

‘ಸಾಕಷ್ಟು ಸಿನಿಮಾ ನಿರ್ಮಾತೃರು, ವೆಬ್​ ಸೀರಿಸ್​ ತಯಾರಕರು, ಬರಹಗಾರರು ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಸಿನಿಮಾಗೆ ತಡೆ ನೀಡಬೇಕು’ ಎಂದು ಕೃಷ್ಣ ಸಿಂಗ್​ ಕೋರಿದ್ದರು. ಅಲ್ಲದೆ, ಮಗನ ಇಮೇಜ್​ ಹಾಳು ಮಾಡಿದ್ದಕ್ಕೆ 2 ಕೋಟಿ ರೂಪಾಯಿ ನೀಡುವಂತೆ ಆದೇಶಿಸಬೇಕು ಎಂದು ಕೋರ್ಟ್​ ಬಳಿ ಮನವಿ ಮಾಡಿದ್ದರು.

‘ನ್ಯಾಯ್​: ದಿ ಜಸ್ಟೀಸ್’​ ಮಾತ್ರವಲ್ಲದೆ, ಸುಶಾಂತ್​ ಸಿಂಗ್​ ಬಗ್ಗೆ ಹಲವು ಚಿತ್ರಗಳು ಸಿದ್ಧಗೊಂಡಿವೆ. ‘ಸೂಸೈಡ್​ ಆರ್​ ಮರ್ಡರ್​: ಎ ಸ್ಟಾರ್​ ವಾಸ್​ ಲಾಸ್ಟ್​’ ‘ಶಶಾಂಕ್​’ ಮತ್ತು ಇನ್ನೂ ಹೆಸರಿಡದ ಸಿನಿಮಾ ಸುಶಾಂತ್​ ಜೀವನ ಆಧರಿಸಿ ಸಿದ್ಧಗೊಂಡಿದೆ. ಈಗ ನ್ಯಾಯಾಲಯ ನೀಡಿರುವ ಈ ತೀರ್ಪಿನಿಂದ ಸುಸಾಂತ್​ ಸಿಂಗ್​ ಕುಟುಂಬಕ್ಕೆ ಹಿನ್ನಡೆ ಉಂಟಾದಂತಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ