AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಹೈಕೋರ್ಟ್​ನಲ್ಲಿ ಸುಶಾಂತ್​ ಸಿಂಗ್​ ತಂದೆಗೆ ಹಿನ್ನಡೆ

‘ನ್ಯಾಯ್​ ದಿ ಜಸ್ಟೀಸ್’​ ಸಿನಿಮಾ ಶುಕ್ರವಾರ (ಜೂನ್​ 11) ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಸುಶಾಂತ್​ ಜೀವನ ಆಧರಿಸಿದ ಈ ಸಿನಿಮಾ ಸಿದ್ಧಗೊಂಡಿದೆಯಂತೆ.

ದೆಹಲಿ ಹೈಕೋರ್ಟ್​ನಲ್ಲಿ ಸುಶಾಂತ್​ ಸಿಂಗ್​ ತಂದೆಗೆ ಹಿನ್ನಡೆ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 10, 2021 | 7:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಸಾವಿನ ವಿಚಾರ ಸಾಕಷ್ಟು ವಿವಾದ ಹುಟ್ಟು ಹಾಕಿದೆ. ಅವರ ಸಾವಿನ ಬಗ್ಗೆ ಸಾಕಷ್ಟು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ, ಪ್ರಕರಣದ ತನಿಖೆ ಸಿಬಿಐಗೆ ವಹಿಸಲಾಗಿದೆ. ಈ ಪ್ರಕರಣದ ಬಗ್ಗೆ ಇನ್ನೂ ತನಿಖೆ ಪ್ರಗತಿಯಲ್ಲಿರುವಾಗಲೇ ಕೆಲವರು ಸುಶಾಂತ್​ ಸಾವಿನ ಬಗ್ಗೆ ಸಿನಿಮಾ ಮಾಡಿದ್ದಾರೆ. ಇದಕ್ಕೆ ತಡೆ ನೀಡುವಂತೆ ಸುಶಾಂತ್​ ಸಿಂಗ್ ತಂದೆ ದೆಹಲಿ ಹೈಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ.

‘ನ್ಯಾಯ್​ ದಿ ಜಸ್ಟೀಸ್’​ ಸಿನಿಮಾ ಶುಕ್ರವಾರ (ಜೂನ್​ 11) ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಸುಶಾಂತ್​ ಜೀವನ ಆಧರಿಸಿದ ಈ ಸಿನಿಮಾ ಸಿದ್ಧಗೊಂಡಿದೆಯಂತೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಶಾಂತ್ ತಂದೆ ಕೃಷ್ಣ ಕಿಶೋರ್​ ಸಿಂಗ್​, ‘ಈ ಸಿನಿಮಾವನ್ನು ಸುಶಾಂತ್​ ಕುಟುಂಬದ ಅನುಮತಿ ಇಲ್ಲದೆ ಸಿದ್ಧಪಡಿಸಲಾಗಿದೆ. ಮಗನ ಆತ್ಮಹತ್ಯೆಯಲ್ಲಿ ಪಾತ್ರವಿದೆ ಎಂದು ಆರೋಪಿಸಲ್ಪಟ್ಟ ವ್ಯಕ್ತಿಗಳನ್ನು ಚಿತ್ರದಲ್ಲಿ ವಿಶ್ವಾಸಾರ್ಹರು ಎಂದು ತೋರಿಸಲಾಗಿದೆ’ ಎಂಬುದಾಗಿ ಆರೋಪಿಸಿ, ದೆಹಲಿ ಕೋರ್ಟ್​​ ಮೆಟ್ಟಿಲೇರಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

‘ಸಾಕಷ್ಟು ಸಿನಿಮಾ ನಿರ್ಮಾತೃರು, ವೆಬ್​ ಸೀರಿಸ್​ ತಯಾರಕರು, ಬರಹಗಾರರು ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಸಿನಿಮಾಗೆ ತಡೆ ನೀಡಬೇಕು’ ಎಂದು ಕೃಷ್ಣ ಸಿಂಗ್​ ಕೋರಿದ್ದರು. ಅಲ್ಲದೆ, ಮಗನ ಇಮೇಜ್​ ಹಾಳು ಮಾಡಿದ್ದಕ್ಕೆ 2 ಕೋಟಿ ರೂಪಾಯಿ ನೀಡುವಂತೆ ಆದೇಶಿಸಬೇಕು ಎಂದು ಕೋರ್ಟ್​ ಬಳಿ ಮನವಿ ಮಾಡಿದ್ದರು.

‘ನ್ಯಾಯ್​: ದಿ ಜಸ್ಟೀಸ್’​ ಮಾತ್ರವಲ್ಲದೆ, ಸುಶಾಂತ್​ ಸಿಂಗ್​ ಬಗ್ಗೆ ಹಲವು ಚಿತ್ರಗಳು ಸಿದ್ಧಗೊಂಡಿವೆ. ‘ಸೂಸೈಡ್​ ಆರ್​ ಮರ್ಡರ್​: ಎ ಸ್ಟಾರ್​ ವಾಸ್​ ಲಾಸ್ಟ್​’ ‘ಶಶಾಂಕ್​’ ಮತ್ತು ಇನ್ನೂ ಹೆಸರಿಡದ ಸಿನಿಮಾ ಸುಶಾಂತ್​ ಜೀವನ ಆಧರಿಸಿ ಸಿದ್ಧಗೊಂಡಿದೆ. ಈಗ ನ್ಯಾಯಾಲಯ ನೀಡಿರುವ ಈ ತೀರ್ಪಿನಿಂದ ಸುಸಾಂತ್​ ಸಿಂಗ್​ ಕುಟುಂಬಕ್ಕೆ ಹಿನ್ನಡೆ ಉಂಟಾದಂತಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!