‘ಆಚಾರ್ಯ ಸಿನಿಮಾ ಸೋತಾಗ ಬೆನ್ನಿಗೆ ನಿಂತಿದ್ದು ಚಿರಂಜೀವಿ; ಭಾವುಕರಾದ ‘ದೇವರ’ ನಿರ್ದೇಶಕ

‘ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ ಹಾಗೂ ರಾಮ್ ಚರಣ್ ನಟಿಸಿದ್ದರು. ಅಪ್ಪ-ಮಗನ ಕಾಂಬಿನೇಷನ್ ಅನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ಅವರಿಂದ ಸಾಧ್ಯವಾಗಲೇ ಇಲ್ಲ. ಈ ವಿಚಾರದಲ್ಲಿ ಚಿರಂಜೀವಿ ಹಾಗೂ ರಾಮ್ ಚರಣ್ ಫ್ಯಾನ್ಸ್​ಗೆ ಸಖತ್ ಬೇಸರ ಇತ್ತು. ಈ ಬಗ್ಗೆ ಕೊರಟಾಲ ಶಿವ ಮಾತನಾಡಿದ್ದಾರೆ.

‘ಆಚಾರ್ಯ ಸಿನಿಮಾ ಸೋತಾಗ ಬೆನ್ನಿಗೆ ನಿಂತಿದ್ದು ಚಿರಂಜೀವಿ; ಭಾವುಕರಾದ ‘ದೇವರ’ ನಿರ್ದೇಶಕ
ಚಿರಂಜೀವಿ-ಕೊರಟಾಲ ಶಿವ
Follow us
|

Updated on: Sep 25, 2024 | 8:58 AM

‘ಆಚಾರ್ಯ’ ಸಿನಿಮಾ ಮಾಡಿ ದೊಡ್ಡ ಮಟ್ಟದ ಫ್ಲಾಪ್ ಕೊಟ್ಟ ಕುಖ್ಯಾತಿ ನಿರ್ದೇಶಕ ಕೊರಟಾಲ ಶಿವ ಅವರಿಗೆ ಸಿಕ್ಕಿತ್ತು. ಈಗ ಎರಡು ವರ್ಷಗಳ ಬಳಿಕ ಅವರು ‘ದೇವರ’ ಸಿನಿಮಾ ನಿರ್ದೇಶನ ಮಾಡಿ ತೆರೆಗೆ ತರುತ್ತಿದ್ದಾರೆ. ಈ ಸಿನಿಮಾಗೆ ಜೂನಿಯರ್​ ಎನ್​ಟಿಆರ್ ಅವರು ಹೀರೋ ಆದರೆ, ಜಾನ್ವಿ ಕಪೂರ್ ನಾಯಕಿ. ಈ ಚಿತ್ರದಿಂದ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ. ‘ಆಚಾರ್ಯ’ ಸಿನಿಮಾ ಸೋತಾಗ ಎಲ್ಲದಕ್ಕೂ ಅವರೇ ಕಾರಣ ಎನ್ನುವ ಆರೋಪ ಎದುರಾಯಿತು. ಕೊರಟಾಲ ಶಿವ ವಿರುದ್ಧ ಎಲ್ಲರೂ ತಿರುಗಿ ಬಿದ್ದರು. ಆದರೆ, ಆ ಸಂದರ್ಭದಲ್ಲಿ ಬೆಂಬಲಕ್ಕೆ ನಿಂತಿದ್ದು ಚಿರಂಜೀವಿ ಎನ್ನುವ ಮಾತನ್ನು ಅವರು ಹೇಳಿದ್ದಾರೆ.

‘ಆಚಾರ್ಯ’ ಸಿನಿಮಾದಲ್ಲಿ ಚಿರಂಜೀವಿ ಹಾಗೂ ರಾಮ್ ಚರಣ್ ಇಬ್ಬರೂ ನಟಿಸಿದ್ದರು. ನಿಜಕ್ಕೂ ಇದೊಂದು ಅಪರೂಪದ ಕಾಂಬಿನೇಷನ್ ಆಗಿತ್ತು. ಆದರೆ, ಈ ಕಾಂಬಿನೇಷನ್ ಅನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ಅವರಿಂದ ಸಾಧ್ಯವಾಗಲೇ ಇಲ್ಲ. ಈ ವಿಚಾರದಲ್ಲಿ ಚಿರಂಜೀವಿ ಹಾಗೂ ರಾಮ್ ಚರಣ್ ಫ್ಯಾನ್ಸ್​ಗೆ ಸಖತ್ ಬೇಸರ ಇತ್ತು. ಈ ಬಗ್ಗೆ ಕೊರಟಾಲ ಶಿವ ಮಾತನಾಡಿದ್ದಾರೆ.

‘ಇತ್ತೀಚಿಗಿನ ದಿನಗಳಲ್ಲಿ ನಿರ್ದೇಶಕರು ಉದ್ಯಮ ಗಮನದಲ್ಲಿ ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಅವರಿಗೆ ಕ್ರಿಯೇಟಿವ್​ನೆಸ್ ಬೇಕಾಗಿಲ್ಲ. ಇದರಿಂದ ಸಿನಿಮಾಗಳು ಸೋಲುತ್ತಿವೆ’ ಎಂದಿದ್ದರು ಚಿರಂಜೀವಿ. ಇದು ಕೊರಟಾಲ ಶಿವ ಬಗ್ಗೆ ಹೇಳಿದ ಮಾತು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಹಾಗಿಲ್ಲ ಎನ್ನಲಾಗುತ್ತಿದೆ.

‘ಆಚಾರ್ಯ ಸಿನಿಮಾ ರಿಲೀಸ್ ಆದ ಬಳಿಕ ನನಗೆ ಕರೆ ಮಾಡಿದ ಮೊದಲ ವ್ಯಕ್ತಿ ಚಿರಂಜೀವಿ. ಶಿವ ನೀವು ಮತ್ತು ಬೌನ್ಸ್ ಬ್ಯಾಕ್ ಆಗುತ್ತೀರಿ ಎನ್ನುವ ನಂಬಿಕೆ ಇದೆ ಎಂದು ಸ್ಫೂರ್ತಿ ತುಂಬಿದ್ದರು ಎಂದು’ ಶಿವ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

‘ಆಚಾರ್ಯ ರಿಲೀಸ್ ಆದ ಮೂರೇ ದಿನದಲ್ಲಿ ದೇವರ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡೆ. ಆ ಬಳಿಕ ಕೆಲವೇ ದಿನದಲ್ಲಿ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ. ಹೀಗಾಗಿ ಆಚಾರ್ಯ ಸೋಲಿನ ಎಫೆಕ್ಟ್ ನನ್ನ ಮೇಲಾಗಿಲ್ಲ. ನಾವು ಮುಂದಿನ ಪರೀಕ್ಷೆಗೆ ಬೇಗ ಸಿದ್ಧನಾಗಿದ್ದೆ’ ಎಂದಿದ್ದಾರೆ ಅವರು. ‘ದೇವರ’ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ