AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devara Collection: ಬಾಕ್ಸ್ ಆಫೀಸ್​ನಲ್ಲಿ ‘ದೇವರ’ ಕಮಾಲ್; ದಾಖಲೆಗಳೆಲ್ಲ ಉಡೀಸ್

‘ದೇವರ’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 77 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ತೆಲುಗು ಭಾಷೆಯಿಂದ 68 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ಹಾಗೂ ಮಲಯಾಳಂನಿಂದ ತಲಾ 30 ಲಕ್ಷ ರೂಪಾಯಿ ಮತ್ತು ತಮಿಳಿನಿಂದ 80 ಲಕ್ಷ ರೂಪಾಯಿ ಹರಿದು ಬಂದಿದೆ.

Devara Collection: ಬಾಕ್ಸ್ ಆಫೀಸ್​ನಲ್ಲಿ ‘ದೇವರ’ ಕಮಾಲ್; ದಾಖಲೆಗಳೆಲ್ಲ ಉಡೀಸ್
ದೇವರ
ರಾಜೇಶ್ ದುಗ್ಗುಮನೆ
|

Updated on: Sep 28, 2024 | 8:36 AM

Share

ಜೂನಿಯರ್ ಎನ್​ಟಿಆರ್ ನಟನೆಯ, ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿದೆ. ಈ ಚಿತ್ರ ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ಹೊರತಾಗಿಯೂ ಜನರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಕಾರಣದಿಂದ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? ಮುಂದಿನ ದಿನಗಳಲ್ಲಿ ಕಲೆಕ್ಷನ್ ಹೇಗಿರಬಹುದು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ದೇವರ’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 77 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ತೆಲುಗು ಭಾಷೆಯಿಂದ 68 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ಹಾಗೂ ಮಲಯಾಳಂನಿಂದ ತಲಾ 30 ಲಕ್ಷ ರೂಪಾಯಿ ಮತ್ತು ತಮಿಳಿನಿಂದ 80 ಲಕ್ಷ ರೂಪಾಯಿ ಹರಿದು ಬಂದಿದೆ.

ಇನ್ನು, ವಿಶ್ವ ಬಾಕ್ಸ್ ಆಫೀಸ್​ನಲ್ಲೂ ‘ದೇವರ’ ಅಬ್ಬರಿಸಿದೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 140 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಅಂದರೆ, ಭಾರತದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಎಷ್ಟು ಗಳಿಕೆ ಮಾಡಿದೆಯೋ ಸುಮಾರು ಅಷ್ಟೇ ದೊಡ್ಡ ಮೊತ್ತವನ್ನು ವಿದೇಶದಲ್ಲೂ ಸಿನಿಮಾ ಮಾಡಿದೆ.

ಇದನ್ನೂ ಓದಿ: ವಿಶೇಷ ವಸ್ತು ಹಿಡಿದು ಹಿಡಿದು ‘ದೇವರ’ ಸಿನಿಮಾ ನೋಡಿದ ಪ್ರಶಾಂತ್ ನೀಲ್ ಪತ್ನಿ

‘ದೇವರ’ ಸಿನಿಮಾ ಬಗ್ಗೆ ಜನರಿಗೆ ನಿರೀಕ್ಷೆ ಸೃಷ್ಟಿ ಆಗಲು ಹಲವು ಕಾರಣಗಳು ಇದ್ದವು. ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ಸಿನಿಮಾ ಸೋಲೋ ರಿಲೀಸ್ ಕಂಡಿದೆ. ಈ ಕಾರಣಕ್ಕೂ ನಿರೀಕ್ಷೆ ಹೆಚ್ಚಿತ್ತು. ಸಿನಿಮಾದಲ್ಲಿ ಅದ್ದೂರಿ ಸೆಟ್​ಗಳಿದ್ದವು. ಆದರೆ, ಕಥೆಯಲ್ಲಿ ಗಟ್ಟಿತನ ಇಲ್ಲದ ಕಾರಣ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ