Devara Collection: ಬಾಕ್ಸ್ ಆಫೀಸ್​ನಲ್ಲಿ ‘ದೇವರ’ ಕಮಾಲ್; ದಾಖಲೆಗಳೆಲ್ಲ ಉಡೀಸ್

‘ದೇವರ’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 77 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ತೆಲುಗು ಭಾಷೆಯಿಂದ 68 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ಹಾಗೂ ಮಲಯಾಳಂನಿಂದ ತಲಾ 30 ಲಕ್ಷ ರೂಪಾಯಿ ಮತ್ತು ತಮಿಳಿನಿಂದ 80 ಲಕ್ಷ ರೂಪಾಯಿ ಹರಿದು ಬಂದಿದೆ.

Devara Collection: ಬಾಕ್ಸ್ ಆಫೀಸ್​ನಲ್ಲಿ ‘ದೇವರ’ ಕಮಾಲ್; ದಾಖಲೆಗಳೆಲ್ಲ ಉಡೀಸ್
ದೇವರ
Follow us
|

Updated on: Sep 28, 2024 | 8:36 AM

ಜೂನಿಯರ್ ಎನ್​ಟಿಆರ್ ನಟನೆಯ, ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿದೆ. ಈ ಚಿತ್ರ ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ಹೊರತಾಗಿಯೂ ಜನರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಕಾರಣದಿಂದ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? ಮುಂದಿನ ದಿನಗಳಲ್ಲಿ ಕಲೆಕ್ಷನ್ ಹೇಗಿರಬಹುದು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ದೇವರ’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 77 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ತೆಲುಗು ಭಾಷೆಯಿಂದ 68 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ಹಾಗೂ ಮಲಯಾಳಂನಿಂದ ತಲಾ 30 ಲಕ್ಷ ರೂಪಾಯಿ ಮತ್ತು ತಮಿಳಿನಿಂದ 80 ಲಕ್ಷ ರೂಪಾಯಿ ಹರಿದು ಬಂದಿದೆ.

ಇನ್ನು, ವಿಶ್ವ ಬಾಕ್ಸ್ ಆಫೀಸ್​ನಲ್ಲೂ ‘ದೇವರ’ ಅಬ್ಬರಿಸಿದೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 140 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಅಂದರೆ, ಭಾರತದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಎಷ್ಟು ಗಳಿಕೆ ಮಾಡಿದೆಯೋ ಸುಮಾರು ಅಷ್ಟೇ ದೊಡ್ಡ ಮೊತ್ತವನ್ನು ವಿದೇಶದಲ್ಲೂ ಸಿನಿಮಾ ಮಾಡಿದೆ.

ಇದನ್ನೂ ಓದಿ: ವಿಶೇಷ ವಸ್ತು ಹಿಡಿದು ಹಿಡಿದು ‘ದೇವರ’ ಸಿನಿಮಾ ನೋಡಿದ ಪ್ರಶಾಂತ್ ನೀಲ್ ಪತ್ನಿ

‘ದೇವರ’ ಸಿನಿಮಾ ಬಗ್ಗೆ ಜನರಿಗೆ ನಿರೀಕ್ಷೆ ಸೃಷ್ಟಿ ಆಗಲು ಹಲವು ಕಾರಣಗಳು ಇದ್ದವು. ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ಸಿನಿಮಾ ಸೋಲೋ ರಿಲೀಸ್ ಕಂಡಿದೆ. ಈ ಕಾರಣಕ್ಕೂ ನಿರೀಕ್ಷೆ ಹೆಚ್ಚಿತ್ತು. ಸಿನಿಮಾದಲ್ಲಿ ಅದ್ದೂರಿ ಸೆಟ್​ಗಳಿದ್ದವು. ಆದರೆ, ಕಥೆಯಲ್ಲಿ ಗಟ್ಟಿತನ ಇಲ್ಲದ ಕಾರಣ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ