AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬಂತು ‘ದೇವರ’ ಚಿತ್ರದ ಸಾಂಗ್; ಜೂ. ಎನ್​ಟಿಆರ್​-ಜಾನ್ವಿ ಸಖತ್ ರೊಮ್ಯಾಂಟಿಕ್

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ. ಅದಕ್ಕೂ ಮೊದಲು ‘ಸ್ವಾತಿಮುತ್ತೇ ಸಿಕ್ಕಂಗೈತೆ..’ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

ಕನ್ನಡದಲ್ಲೂ ಬಂತು ‘ದೇವರ’ ಚಿತ್ರದ ಸಾಂಗ್; ಜೂ. ಎನ್​ಟಿಆರ್​-ಜಾನ್ವಿ ಸಖತ್ ರೊಮ್ಯಾಂಟಿಕ್
ಜೂ. ಎನ್​​ಟಿಆರ್​-ಜಾನ್ವಿ
ರಾಜೇಶ್ ದುಗ್ಗುಮನೆ
|

Updated on:Aug 06, 2024 | 7:02 AM

Share

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ರಿಲೀಸ್​ಗೆ ಬಾಕಿ ಇರೋದು ಇನ್ನು ಕೆಲವೇ ವಾರಗಳು ಮಾತ್ರ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಈಗ ಪ್ರಚಾರ ಆರಂಭಿಸಲಾಗಿದೆ. ಈ ಚಿತ್ರದ ಎರಡನೇ ಹಾಡನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡು ಕನ್ನಡದಲ್ಲೂ ಇದ್ದು ಕೇಳುಗರಿಗೆ ಇಷ್ಟವಾಗಿದೆ. ಜೂನಿಯರ್ ಎನ್​ಟಿಆರ್​ ಹಾಗೂ ಜಾನ್ವಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

‘ದೇವರ’ ಸಿನಿಮಾಗೆ ಖ್ಯಾತ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಈಗಾಗಲೇ ‘ದೇವರ’ ತಂಡದಿಂದ ‘ಫಿಯರ್‌..’ ಹಾಡು ಬಿಡುಗಡೆಯಾಗಿದೆ. ಆ ಹಾಡಿನ ಮೂಲಕ ಪ್ರಚಾರ ಕೆಲಸ ಆರಂಭಿಸಿದ್ದ ಚಿತ್ರತಂಡ ಇದೀಗ ಎರಡನೇ ಹಾಡು ಬಿಡುಗಡೆ ಮಾಡಿದೆ. ಶಿಲ್ಪಾ ರಾವ್ ಕಂಠಸಿರಿಯಲ್ಲಿ ‘ಸ್ವಾತಿಮುತ್ತೇ ಸಿಕ್ಕಂಗೈತೆ..’ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

ಈ ಹಾಡಿನಲ್ಲಿ ಜಾನ್ವಿ ಕಪೂರ್‌ ಗ್ಲಾಮರಸ್‌ ಅವತಾರದಲ್ಲಿ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾನ್ವಿ ಜೋಡಿಯ ಕೆಮಿಸ್ಟ್ರಿಯೂ ನೋಡುಗರಿಗೆ ಇಷ್ಟ ಆಗಿದೆ. ವರದರಾಜ್‌ ಚಿಕ್ಕಬಳ್ಳಾಪುರ ಸಾಹಿತ್ಯ ಇರುವ ಈ ಹಾಡಿಗೆ ಬಾಸ್ಕೋ ಮಾರ್ಟಿಸ್ ಅವರ ನೃತ್ಯ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ‘ದೇವರ’ ಚಿತ್ರದಲ್ಲಿ ಹೇಗಿದೆ ನೋಡಿ ಜೂ. ಎನ್​ಟಿಆರ್- ಜಾನ್ವಿ ಕಪೂರ್ ಕೆಮಿಸ್ಟ್ರಿ

‘ದೇವರ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ರಿಲೀಸ್‌ ಆಗಲಿದೆ. ಯುವಸುಧಾ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ ಮಿಕ್ಕಿಲಿನೇನಿ ಸುಧಾಕರ್ ಹಾಗೂ ಹರಿಕೃಷ್ಣ ಕೆ. ‘ದೇವರ’ ಚಿತ್ರವನ್ನು ನಿರ್ಮಿಸಿದ್ದಾರೆ. ಬಾಲಿವುಡ್‌ ನಟಿ ಜಾನ್ವಿ ಕಪೂರ್‌ ಈ ಚಿತ್ರದ ಮೂಲಕ ದಕ್ಷಿಣಕ್ಕೆ ಕಾಲಿಡುತ್ತಿದ್ದಾರೆ. ಖಳ ನಟನಾಗಿ ಸೈಫ್‌ ಅಲಿಖಾನ್‌ ಚಿತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ, ನರೇನ್ ಸೇರಿ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಆರ್. ರತ್ನವೇಲು ಛಾಯಾಗ್ರಹಣ, ಸಾಬು ಸಿರಿಲ್ ಪ್ರೊಡಕ್ಷನ್‌ ಡಿಸೈನ್‌ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Tue, 6 August 24

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು