‘ದೇವರ’ ಚಿತ್ರದ ಸೀಕ್ವೆಲ್​ನಲ್ಲಿ ನಟಿಸಲಿದ್ದಾರೆ ಬಾಲಿವುಡ್​ನ ಈ ಸ್ಟಾರ್ ಹೀರೋ

ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂಬ ಚರ್ಚೆಯ ಬಗ್ಗೆ ಕೊರಟಲಾ ಶಿವಗೆ ಯಾವುದೇ ನಂಬಿಕೆ ಇಲ್ಲ. ಈ ಕಾರಣದಿಂದಲೇ ಅವರು ಬಾಲಿವುಡ್​ನಿಂದ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರು.  

‘ದೇವರ’ ಚಿತ್ರದ ಸೀಕ್ವೆಲ್​ನಲ್ಲಿ ನಟಿಸಲಿದ್ದಾರೆ ಬಾಲಿವುಡ್​ನ ಈ ಸ್ಟಾರ್ ಹೀರೋ
ದೇವರ
Follow us
|

Updated on: Oct 10, 2024 | 10:42 AM

‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 500 ಕೋಟಿ ರೂಪಾಯಿ ಗಳಿಕೆ ಮಾಡುವುದರಲ್ಲಿದೆ. ಈ ಚಿತ್ರವನ್ನು ತಂಡ ಸೂಪರ್ ಹಿಟ್ ಎಂದು ಕರೆದುಕೊಂಡಿದೆ. ಆದರೆ, ಇಂಡಸ್ಟ್ರಿ ಮಂದಿ ಚಿತ್ರದ ಬಗ್ಗೆ ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿದರೆ ಯಾರೊಬ್ಬರೂ ಎರಡನೇ ಪಾರ್ಟ್ ಶೂಟ್ ಮಾಡೋ ಸಾಹಸಕ್ಕೆ ಮುಂದಾಗುವುದಿಲ್ಲ. ಆದರೆ, ಕೊರಟಾಲ ಶಿವ ‘ದೇವರ: ಪಾರ್ಟ್​ 2’ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.

‘ಎರಡನೇ ಭಾಗದಲ್ಲಿ ಯಾರಾದರೂ ಸ್ಟಾರ್ ಹೀರೋ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ’ ಎಂದು ಕೊರಟಾಲ ಶಿವಗೆ ಕೇಳಲಾಗಿದೆ. ಇದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಉತ್ತರಿಸಿದ್ದಾರೆ. ಅವರಿಗೆ ಅತಿಥಿ ಪಾತ್ರಗಳ ಬಗ್ಗೆ ನಂಬಿಕೆ ಇಲ್ಲವಂತೆ. ‘ನಾನು ದೊಡ್ಡ ಕಲಾವಿದರನ್ನೇ ಹಾಕಿಕೊಳ್ಳುತ್ತೇನೆ. ಅವರದ್ದು ಅತಿಥಿ ಪಾತ್ರ ಎಂದು ಹೇಳಲ್ಲ. ಎಲ್ಲವೂ ಪ್ರಮುಖ ಪಾತ್ರಗಳೇ. ಮುಂದಿನ ದಿನಗಳಲ್ಲಿ ಒಂದಾದ ಮೇಲೆ ಒಂದರಂತೆ ರಿವೀಲ್ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ನನ್ನ ಬಳಿ ನನ್ನದೇ ಆದ ಲಿಸ್ಟ್ ಇದೆ. ಅದು ಸಂಭವಿಸುತ್ತದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ರಣವೀರ್ ಸಿಂಗ್ ಅಥವಾ ರಣಬೀರ್ ಕಪೂರ್ ಅವರನ್ನು ದೇವರ ಚಿತ್ರದಲ್ಲಿ ನೋಡಬೇಕು. ನಾನು ತೆಲುಗು ಅಥವಾ ತಮಿಳು ಇಂಡಸ್ಟ್ರಿಯವರ ಯಾವುದೇ ಹೆಸರನ್ನು ತೆಗೆದುಕೊಳ್ಳಲ್ಲ. ಹಾಗೆ ಮಾಡಿದರೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಳ್ಳುತ್ತವೆ’ ಎಂದಿದ್ದಾರೆ ಅವರು.

ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂಬ ಚರ್ಚೆಯ ಬಗ್ಗೆ ಕೊರಟಲಾ ಶಿವಗೆ ಯಾವುದೇ ನಂಬಿಕೆ ಇಲ್ಲ. ಈ ಕಾರಣದಿಂದಲೇ ಅವರು ಬಾಲಿವುಡ್​ನಿಂದ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರು.

ಇದನ್ನೂ ಓದಿ: ‘ದೇವರ’ ಬಗ್ಗೆ ಮೌನ ತಾಳಿದ ಮಹೇಶ್ ಬಾಬು; ಸಿನಿಮಾ ಇಷ್ಟವಾಗಿಲ್ವಾ?

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್, ಜಾನ್ವಿ ಕಪೂರ್, ಪ್ರಕಾಶ್ ರಾಜ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 27ರಂದು ರಿಲೀಸ್ ಆಗಿದೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್