AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದ ಸೀಕ್ವೆಲ್​ನಲ್ಲಿ ನಟಿಸಲಿದ್ದಾರೆ ಬಾಲಿವುಡ್​ನ ಈ ಸ್ಟಾರ್ ಹೀರೋ

ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂಬ ಚರ್ಚೆಯ ಬಗ್ಗೆ ಕೊರಟಲಾ ಶಿವಗೆ ಯಾವುದೇ ನಂಬಿಕೆ ಇಲ್ಲ. ಈ ಕಾರಣದಿಂದಲೇ ಅವರು ಬಾಲಿವುಡ್​ನಿಂದ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರು.  

‘ದೇವರ’ ಚಿತ್ರದ ಸೀಕ್ವೆಲ್​ನಲ್ಲಿ ನಟಿಸಲಿದ್ದಾರೆ ಬಾಲಿವುಡ್​ನ ಈ ಸ್ಟಾರ್ ಹೀರೋ
ದೇವರ
Follow us
ರಾಜೇಶ್ ದುಗ್ಗುಮನೆ
|

Updated on: Oct 10, 2024 | 10:42 AM

‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 500 ಕೋಟಿ ರೂಪಾಯಿ ಗಳಿಕೆ ಮಾಡುವುದರಲ್ಲಿದೆ. ಈ ಚಿತ್ರವನ್ನು ತಂಡ ಸೂಪರ್ ಹಿಟ್ ಎಂದು ಕರೆದುಕೊಂಡಿದೆ. ಆದರೆ, ಇಂಡಸ್ಟ್ರಿ ಮಂದಿ ಚಿತ್ರದ ಬಗ್ಗೆ ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿದರೆ ಯಾರೊಬ್ಬರೂ ಎರಡನೇ ಪಾರ್ಟ್ ಶೂಟ್ ಮಾಡೋ ಸಾಹಸಕ್ಕೆ ಮುಂದಾಗುವುದಿಲ್ಲ. ಆದರೆ, ಕೊರಟಾಲ ಶಿವ ‘ದೇವರ: ಪಾರ್ಟ್​ 2’ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.

‘ಎರಡನೇ ಭಾಗದಲ್ಲಿ ಯಾರಾದರೂ ಸ್ಟಾರ್ ಹೀರೋ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ’ ಎಂದು ಕೊರಟಾಲ ಶಿವಗೆ ಕೇಳಲಾಗಿದೆ. ಇದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಉತ್ತರಿಸಿದ್ದಾರೆ. ಅವರಿಗೆ ಅತಿಥಿ ಪಾತ್ರಗಳ ಬಗ್ಗೆ ನಂಬಿಕೆ ಇಲ್ಲವಂತೆ. ‘ನಾನು ದೊಡ್ಡ ಕಲಾವಿದರನ್ನೇ ಹಾಕಿಕೊಳ್ಳುತ್ತೇನೆ. ಅವರದ್ದು ಅತಿಥಿ ಪಾತ್ರ ಎಂದು ಹೇಳಲ್ಲ. ಎಲ್ಲವೂ ಪ್ರಮುಖ ಪಾತ್ರಗಳೇ. ಮುಂದಿನ ದಿನಗಳಲ್ಲಿ ಒಂದಾದ ಮೇಲೆ ಒಂದರಂತೆ ರಿವೀಲ್ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ನನ್ನ ಬಳಿ ನನ್ನದೇ ಆದ ಲಿಸ್ಟ್ ಇದೆ. ಅದು ಸಂಭವಿಸುತ್ತದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ರಣವೀರ್ ಸಿಂಗ್ ಅಥವಾ ರಣಬೀರ್ ಕಪೂರ್ ಅವರನ್ನು ದೇವರ ಚಿತ್ರದಲ್ಲಿ ನೋಡಬೇಕು. ನಾನು ತೆಲುಗು ಅಥವಾ ತಮಿಳು ಇಂಡಸ್ಟ್ರಿಯವರ ಯಾವುದೇ ಹೆಸರನ್ನು ತೆಗೆದುಕೊಳ್ಳಲ್ಲ. ಹಾಗೆ ಮಾಡಿದರೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಳ್ಳುತ್ತವೆ’ ಎಂದಿದ್ದಾರೆ ಅವರು.

ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂಬ ಚರ್ಚೆಯ ಬಗ್ಗೆ ಕೊರಟಲಾ ಶಿವಗೆ ಯಾವುದೇ ನಂಬಿಕೆ ಇಲ್ಲ. ಈ ಕಾರಣದಿಂದಲೇ ಅವರು ಬಾಲಿವುಡ್​ನಿಂದ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರು.

ಇದನ್ನೂ ಓದಿ: ‘ದೇವರ’ ಬಗ್ಗೆ ಮೌನ ತಾಳಿದ ಮಹೇಶ್ ಬಾಬು; ಸಿನಿಮಾ ಇಷ್ಟವಾಗಿಲ್ವಾ?

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್, ಜಾನ್ವಿ ಕಪೂರ್, ಪ್ರಕಾಶ್ ರಾಜ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 27ರಂದು ರಿಲೀಸ್ ಆಗಿದೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ