AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ದೇವರ: ಚಾಪ್ಟರ್ 1’ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಯಿತು. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. 90ರ ದಶಕದಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಸಿನಿಮಾ ನಾಲ್ಕು ದಿನಗಳಲ್ಲಿ ಮಾಡಿದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 12:10 PM

Share

‘ದೇವರ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಅಬ್ಬರದ ಗಳಿಕೆ ಮಾಡಿತ್ತು. ಆದರೆ, ದಿನ ಕಳೆದಂತೆ ಸಿನಿಮಾದ ಗಳಿಕೆ ತಗ್ಗುತ್ತಿದೆ. ಭಾನುವಾರಕ್ಕೆ (ಸೆಪ್ಟೆಂಬರ್ 29) ಹೋಲಿಕೆ ಮಾಡಿದರೆ ಸೋಮವಾರದ (ಸೆಪ್ಟೆಂಬರ್ 30) ಗಳಿಕೆಯಲ್ಲಿ ಶೇ.68 ಇಳಿಕೆ ಕಂಡಿದೆ. ಚಿತ್ರದ ವಿಶ್ವ ಬಾಕ್ಸ್ ಆಫೀಸ್​ ಕಲೆಕ್ಷನ್ 325 ಕೋಟಿ ರೂಪಾಯಿ ಆಗಿದೆ. ಸಿನಿಮಾದ ಒಟ್ಟಾರೆ ಗಳಿಕ 500 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ.

ಬಾಕ್ಸ್ ಆಫೀಸ್ ವರದಿ ಪ್ರಕಾರ ಈ ಚಿತ್ರ ಸೋಮವಾರ 12.5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ಯವಾಗಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಿಂದ ಇಷ್ಟು ಗಳಿಕೆ ಆಗಿದೆ. ಭಾನುವಾರ ಈ ಸಿನಿಮಾ ಸುಮಾರು 40 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಸದ್ಯ ಸೋಮವಾರದ ಪರೀಕ್ಷೆಯಲ್ಲಿ ಸಿನಿಮಾ ಸೋತಿದೆ ಎಂದೇ ಹೇಳಬಹುದು.

ಸೋಮವಾರ ತೆಲುಗು ವರ್ಷನ್​ನಿಂದ 8 ಕೋಟಿ ರೂಪಾಯಿ ಹರಿದು ಬಂದಿದೆ. ಭಾನುವಾರ 27 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಹಿಂದಿಯಿಂದ ಸೋಮವಾರ 4 ಕೋಟಿ ರೂಪಾಯಿ ಹಾಗೂ ಭಾನುವಾರ 10 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ (ಅಕ್ಟೋಬರ್ 2) ಗಾಂಧೀ ಜಯಂತಿ ಪ್ರಯುಕ್ತ ಸಿನಿಮಾ ಮತ್ತಷ್ಟು ಗಳಿಕೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

2018ರಲ್ಲಿ ರಿಲೀಸ್ ಆದ ‘ಅರವಿಂದ ಸಮೇತ’ ಬಳಿಕ ಜೂನಿಯರ್ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ‘ದೇವರ’ ಸಿನಿಮಾದಲ್ಲಿ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್​ ಇನ್ನಷ್ಟೇ ಬರಬೇಕಿದೆ. ಸದ್ಯ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಕೂಡ ಇದ್ದು, 2025ರಲ್ಲಿ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ