ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ದೇವರ: ಚಾಪ್ಟರ್ 1’ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಯಿತು. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. 90ರ ದಶಕದಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಸಿನಿಮಾ ನಾಲ್ಕು ದಿನಗಳಲ್ಲಿ ಮಾಡಿದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?
ಜೂನಿಯರ್ ಎನ್​ಟಿಆರ್
Follow us
|

Updated on: Oct 01, 2024 | 12:10 PM

‘ದೇವರ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಅಬ್ಬರದ ಗಳಿಕೆ ಮಾಡಿತ್ತು. ಆದರೆ, ದಿನ ಕಳೆದಂತೆ ಸಿನಿಮಾದ ಗಳಿಕೆ ತಗ್ಗುತ್ತಿದೆ. ಭಾನುವಾರಕ್ಕೆ (ಸೆಪ್ಟೆಂಬರ್ 29) ಹೋಲಿಕೆ ಮಾಡಿದರೆ ಸೋಮವಾರದ (ಸೆಪ್ಟೆಂಬರ್ 30) ಗಳಿಕೆಯಲ್ಲಿ ಶೇ.68 ಇಳಿಕೆ ಕಂಡಿದೆ. ಚಿತ್ರದ ವಿಶ್ವ ಬಾಕ್ಸ್ ಆಫೀಸ್​ ಕಲೆಕ್ಷನ್ 325 ಕೋಟಿ ರೂಪಾಯಿ ಆಗಿದೆ. ಸಿನಿಮಾದ ಒಟ್ಟಾರೆ ಗಳಿಕ 500 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ.

ಬಾಕ್ಸ್ ಆಫೀಸ್ ವರದಿ ಪ್ರಕಾರ ಈ ಚಿತ್ರ ಸೋಮವಾರ 12.5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ಯವಾಗಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಿಂದ ಇಷ್ಟು ಗಳಿಕೆ ಆಗಿದೆ. ಭಾನುವಾರ ಈ ಸಿನಿಮಾ ಸುಮಾರು 40 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಸದ್ಯ ಸೋಮವಾರದ ಪರೀಕ್ಷೆಯಲ್ಲಿ ಸಿನಿಮಾ ಸೋತಿದೆ ಎಂದೇ ಹೇಳಬಹುದು.

ಸೋಮವಾರ ತೆಲುಗು ವರ್ಷನ್​ನಿಂದ 8 ಕೋಟಿ ರೂಪಾಯಿ ಹರಿದು ಬಂದಿದೆ. ಭಾನುವಾರ 27 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಹಿಂದಿಯಿಂದ ಸೋಮವಾರ 4 ಕೋಟಿ ರೂಪಾಯಿ ಹಾಗೂ ಭಾನುವಾರ 10 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ (ಅಕ್ಟೋಬರ್ 2) ಗಾಂಧೀ ಜಯಂತಿ ಪ್ರಯುಕ್ತ ಸಿನಿಮಾ ಮತ್ತಷ್ಟು ಗಳಿಕೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

2018ರಲ್ಲಿ ರಿಲೀಸ್ ಆದ ‘ಅರವಿಂದ ಸಮೇತ’ ಬಳಿಕ ಜೂನಿಯರ್ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ‘ದೇವರ’ ಸಿನಿಮಾದಲ್ಲಿ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್​ ಇನ್ನಷ್ಟೇ ಬರಬೇಕಿದೆ. ಸದ್ಯ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಕೂಡ ಇದ್ದು, 2025ರಲ್ಲಿ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ