AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ದೇವರ: ಚಾಪ್ಟರ್ 1’ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಯಿತು. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. 90ರ ದಶಕದಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಸಿನಿಮಾ ನಾಲ್ಕು ದಿನಗಳಲ್ಲಿ ಮಾಡಿದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 12:10 PM

Share

‘ದೇವರ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಅಬ್ಬರದ ಗಳಿಕೆ ಮಾಡಿತ್ತು. ಆದರೆ, ದಿನ ಕಳೆದಂತೆ ಸಿನಿಮಾದ ಗಳಿಕೆ ತಗ್ಗುತ್ತಿದೆ. ಭಾನುವಾರಕ್ಕೆ (ಸೆಪ್ಟೆಂಬರ್ 29) ಹೋಲಿಕೆ ಮಾಡಿದರೆ ಸೋಮವಾರದ (ಸೆಪ್ಟೆಂಬರ್ 30) ಗಳಿಕೆಯಲ್ಲಿ ಶೇ.68 ಇಳಿಕೆ ಕಂಡಿದೆ. ಚಿತ್ರದ ವಿಶ್ವ ಬಾಕ್ಸ್ ಆಫೀಸ್​ ಕಲೆಕ್ಷನ್ 325 ಕೋಟಿ ರೂಪಾಯಿ ಆಗಿದೆ. ಸಿನಿಮಾದ ಒಟ್ಟಾರೆ ಗಳಿಕ 500 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ.

ಬಾಕ್ಸ್ ಆಫೀಸ್ ವರದಿ ಪ್ರಕಾರ ಈ ಚಿತ್ರ ಸೋಮವಾರ 12.5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ಯವಾಗಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಿಂದ ಇಷ್ಟು ಗಳಿಕೆ ಆಗಿದೆ. ಭಾನುವಾರ ಈ ಸಿನಿಮಾ ಸುಮಾರು 40 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಸದ್ಯ ಸೋಮವಾರದ ಪರೀಕ್ಷೆಯಲ್ಲಿ ಸಿನಿಮಾ ಸೋತಿದೆ ಎಂದೇ ಹೇಳಬಹುದು.

ಸೋಮವಾರ ತೆಲುಗು ವರ್ಷನ್​ನಿಂದ 8 ಕೋಟಿ ರೂಪಾಯಿ ಹರಿದು ಬಂದಿದೆ. ಭಾನುವಾರ 27 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಹಿಂದಿಯಿಂದ ಸೋಮವಾರ 4 ಕೋಟಿ ರೂಪಾಯಿ ಹಾಗೂ ಭಾನುವಾರ 10 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ (ಅಕ್ಟೋಬರ್ 2) ಗಾಂಧೀ ಜಯಂತಿ ಪ್ರಯುಕ್ತ ಸಿನಿಮಾ ಮತ್ತಷ್ಟು ಗಳಿಕೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

2018ರಲ್ಲಿ ರಿಲೀಸ್ ಆದ ‘ಅರವಿಂದ ಸಮೇತ’ ಬಳಿಕ ಜೂನಿಯರ್ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ‘ದೇವರ’ ಸಿನಿಮಾದಲ್ಲಿ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್​ ಇನ್ನಷ್ಟೇ ಬರಬೇಕಿದೆ. ಸದ್ಯ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಕೂಡ ಇದ್ದು, 2025ರಲ್ಲಿ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK