ಜೂ. ಎನ್​ಟಿಆರ್​-ಜಾನ್ವಿ ನಡುವೆ 14 ವರ್ಷ ವಯಸ್ಸಿನ ಅಂತರ; ಟ್ರೋಲ್ ಆಯ್ತು ರೊಮ್ಯಾನ್ಸ್

‘ನಾಟು ನಾಟು’ ಹಾಡಿನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಧೂಳೆಬ್ಬಿಸಿದ್ದರು. ಆದರೆ ಈಗ ‘ದೇವರ: ಪಾರ್ಟ್​ 1’ ಸಿನಿಮಾದ ಹೊಸ ಹಾಡು ಟ್ರೋಲ್​ ಆಗುತ್ತಿದೆ. ತಮಗಿಂತ 14 ವರ್ಷ ಕಿರಿಯ ನಟಿ ಜಾನ್ವಿ ಕಪೂರ್​ ಜೊತೆ ಜೂ. ಎನ್​ಟಿಆರ್​ ಅವರು ಡ್ಯಾನ್ಸ್​ ಮಾಡಿರುವುದೇ ಟ್ರೋಲ್​ಗೆ ಕಾರಣ ಆಗಿದೆ.

ಜೂ. ಎನ್​ಟಿಆರ್​-ಜಾನ್ವಿ ನಡುವೆ 14 ವರ್ಷ ವಯಸ್ಸಿನ ಅಂತರ; ಟ್ರೋಲ್ ಆಯ್ತು ರೊಮ್ಯಾನ್ಸ್
ಜೂನಿಯರ್ ಎನ್​ಟಿಆರ್​, ಜಾನ್ವಿ ಕಪೂರ್​
Follow us
|

Updated on: Aug 06, 2024 | 10:26 PM

ಬಾಲಿವುಡ್​ನಲ್ಲಿ ಈಗಾಗಲೇ ಹೆಸರು ಮಾಡಿರುವ ನಟಿ ಜಾನ್ವಿ ಕಪೂರ್​ ಅವರು ಈಗ ಸೌತ್​ ಸಿನಿಮಾ ಇಂಡಸ್ಟ್ರಿಯಲ್ಲೂ ತಮ್ಮ ಛಾಪು ಮೂಡಿಸಲು ಬರುತ್ತಿದ್ದಾರೆ. ಟಾಲಿವುಡ್​ನ ‘ದೇವರ: ಪಾರ್ಟ್​ 1’ ಸಿನಿಮಾಗೆ ಜಾನ್ವಿ ಕಪೂರ್​ ನಾಯಕಿ ಆಗಿದ್ದಾರೆ. ಜೂನಿಯರ್​ ಎನ್​ಟಿಆರ್​ ಮತ್ತು ಜಾನ್ವಿ ಕಪೂರ್​ ಅವರು ಜೋಡಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್​ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ. ಇಬ್ಬರ ನಡುವೆ ಇರುವ ವಯಸ್ಸಿನ ಅಂತರದ ಬಗ್ಗೆ ನೆಟ್ಟಿಗರು ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ.

‘ದೇವರ: ಪಾರ್ಟ್​ 1’ ಸಿನಿಮಾದಿಂದ ಹೊಸ ಹಾಡು ಬಿಡುಗಡೆ ಮಾಡಲಾಗಿದೆ. ಈ ಹಾಡಿನಲ್ಲಿ ಜೂನಿಯರ್​ ಎನ್​ಟಿಆರ್​ ಮತ್ತು ಜಾನ್ವಿ ಕಪೂರ್​ ಅವರು ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡಿದ್ದಾರೆ. ಅಪ್ಪಟ ಅಭಿಮಾನಿಗಳು ಈ ಹಾಡನ್ನು ಇಷ್ಟಪಡುತ್ತಿದ್ದಾರೆ. ಆದರೆ ನೆಟ್ಟಿಗರು ಯಾಕೋ ಮೆಚ್ಚಿಕೊಂಡಿಲ್ಲ. ಅದಕ್ಕೆ ಮುಖ್ಯ ಕಾರಣ ಆಗಿರುವುದು ನಟ-ನಟಿ ನಡುವೆ ಇರುವ ವಯಸ್ಸಿನ ಅಂತರ.

ಇದನ್ನೂ ಓದಿ: ಜಾನ್ವಿ ಕಪೂರ್ ವೃತ್ತಿ ಜೀವನದಲ್ಲಿ ಮತ್ತೊಂದು ಸೋಲು; ಎಷ್ಟೊಂದು ಹೀನಾಯ ಕಲೆಕ್ಷನ್

ಜೂನಿಯರ್​ ಎನ್​ಟಿಆರ್​ ಅವರಿಗೆ ಈಗ 41 ವರ್ಷ ವಯಸ್ಸು. ಅವರಿಗೆ ಜೋಡಿಯಾಗಿ 27ರ ಪ್ರಾಯದ ಜಾನ್ವಿ ಕಪೂರ್​ ನಟಿಸಿದ್ದಾರೆ. ಇಬ್ಬರ ನಡುವೆ ಬರೋಬ್ಬರಿ 14 ವರ್ಷಗಳ ವಯಸ್ಸಿನ ಅಂತರ ಇದೆ. ಹೊಸ ಹಾಡಿನಲ್ಲಿ ಈ ಜೋಡಿ ರೊಮ್ಯಾಂಟಿಕ್​ ಆಗಿ ಡ್ಯಾನ್ಸ್ ಮಾಡಿದೆ. ವಯಸ್ಸಿನ ಅಂತರದ ಕಾರಣದಿಂದ ಜಾನ್ವಿ ಕಪೂರ್​ ಮತ್ತು ಜೂನಿಯರ್​ ಎನ್​ಟಿಆರ್​ ಕೆಮಿಸ್ಟ್ರಿ ಚೆನ್ನಾಗಿ ಕಾಣುತ್ತಿಲ್ಲ ಎಂಬ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ. ಈ ಬಗ್ಗೆ ಜನರು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಇನ್ನು, ಜೂನಿಯರ್​ ಎನ್​ಟಿಆರ್​ ಅವರು ಅತ್ಯುತ್ತಮ ಡ್ಯಾನ್ಸರ್​ ಎಂಬುದರಲ್ಲಿ ಅನುಮಾನವೇ ಇಲ್ಲ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಲ್ಲಿ ಅವರು ಸೂಪರ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಆದರೆ ಈಗ ‘ದೇವರ: ಪಾರ್ಟ್​ 1’ ಸಿನಿಮಾದ ರೊಮ್ಯಾಂಟಿಕ್​ ಹಾಡಿನಲ್ಲಿ ಅವರ ಡ್ಯಾನ್ಸ್​ ಸ್ಟೆಪ್ಸ್​ ನೋಡಿದ ಜನರಿಗೆ ಕಿಂಚಿತ್ತೂ ಇಷ್ಟ ಆಗಿಲ್ಲ. ಇದರಿಂದ ಸಿನಿಮಾಗೆ ಸ್ವಲ್ಪ ನೆಗೆಟಿವ್​ ಆಗುವ ಸೂಚನೆ ಕಾಣಿಸಿದೆ. ಈ ಬಗ್ಗೆ ಚಿತ್ರತಂಡದವರು ಪ್ರತಿಕ್ರಿಯೆ ನೀಡಿಲ್ಲ. ಕೊರಟಾಲ ಶಿವ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್