AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಕರ್​ಗಳಿಂದಾಗಿ ರಾತ್ರಿ ನಿದ್ದೆಯಿಲ್ಲದಂತಾಗಿದೆ: ಆತಂಕ ಹೊರ ಹಾಕಿದ ನಟಿ

ಹ್ಯಾಕರ್​ಗಳು ಮಾಡಿರುವ ಕೆಲಸದಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದೇನೆ, ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ ಎಂದು ನಟಿ ದೇವಯಾನಿ ಶರ್ಮಾ ಅಳಲು ತೋಡಿಕೊಂಡಿದ್ದಾರೆ.

ಹ್ಯಾಕರ್​ಗಳಿಂದಾಗಿ ರಾತ್ರಿ ನಿದ್ದೆಯಿಲ್ಲದಂತಾಗಿದೆ: ಆತಂಕ ಹೊರ ಹಾಕಿದ ನಟಿ
ಮಂಜುನಾಥ ಸಿ.
|

Updated on: May 08, 2024 | 5:28 PM

Share

ಮಹಿಳೆಯರು, ವಿಶೇಷವಾಗಿ ಸಿನಿಮಾ ನಟಿಯರು ಆನ್​ಲೈನ್​ನಲ್ಲಿ ಪ್ರತಿದಿನ ನಿಂದನೆ, ದೌರ್ಜನ್ಯ ಅನುಭವಿಸುತ್ತಿದ್ದಾರೆ. ಟ್ರೋಲರ್​ಗಳಿಂದ ನಿಂದನೆ, ವೈಯಕ್ತಿಕ ತೇಜೋವಧೆ, ಅಶ್ಲೀಲ ಕಮೆಂಟ್​ಗಳ ಜೊತೆಗೆ ಇತ್ತೀಚೆಗೆ ನಟಿಯರ ಚಿತ್ರಗಳನ್ನು ಬಳಸಿ ನಕಲಿ ಚಿತ್ರ, ವಿಡಿಯೋಗಳನ್ನು ಹರಿಬಿಡುವ ಚಾಳಿ ಹೆಚ್ಚಾಗುತ್ತಿದೆ. ಹಲವು ನಟಿಯರು ಈ ಆನ್​ಲೈನ್ ದೌರ್ಜನ್ಯಕ್ಕೆ ಗುರಿಯಾಗಿದ್ದಾರೆ. ಇದೀಗ ದೇವಯಾನಿ ಶರ್ಮಾ ಇದೇ ರೀತಿಯ ಸಂಕಟವನ್ನು ಎದುರಿಸುತ್ತಿದ್ದಾರೆ. ದುರುಳರು ದೇವಯಾನಿಯ ಮೊಬೈಲ್ ಹ್ಯಾಕ್ (Mobile Hack) ಮಾಡಿ ಅವರ ಖಾಸಗಿ ಮಾಹಿತಿ, ಚಿತ್ರಗಳನ್ನು ಸಹ ಕದ್ದಿದ್ದಾರಂತೆ.

ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ದೇವಯಾನಿ ಶರ್ಮಾ, ‘ಕೆಲವು ದಿನಗಳ ಹಿಂದೆ ನನ್ನ ಮೊಬೈಲ್ ಅನ್ನು ಯಾರೋ ಹ್ಯಾಕ್ ಮಾಡಿದ್ದರು. ಅಥವಾ ಕ್ಲೋನ್ ಮಾಡಿದ್ದರು. ನನ್ನ ಮೊಬೈಲ್​ನಲ್ಲಿದ್ದ ನನ್ನ ಖಾಸಗಿ ಮಾಹಿತಿಗಳನ್ನು ಕದಿಯಲಾಗಿದೆ. ನನ್ನನ್ನು ಬ್ಲಾಕ್ ಮೇಲ್ ಮಾಡಲೆಂದು ಅಥವಾ ನನ್ನನ್ನು ಹೆದರಿಸಲೆಂದು ಹೀಗೆ ಮಾಡಲಾಗಿದೆ ಎಂದು ಊಹಿಸುತ್ತಿದ್ದೇನೆ. ಈಗ ಮತ್ತೆ ನನ್ನ ವಾಟ್ಸ್​ಆಪ್​​ ಅನ್ನು ಹ್ಯಾಕ್​ ಮಾಡಲಾಗಿದೆ. ನನ್ನ ಮೊಬೈಲ್​ನ ಸೆಟ್ಟಿಂಗ್ಸ್​ಗಳನ್ನು ಬದಲು ಮಾಡಲಾಗಿದೆ. ನನ್ನ ಮೊಬೈಲ್ ಫೋನ್ ಮೊದಲಿನಂತೆ ಇಲ್ಲ ಎಂಬುದು ನನಗೆ ಖಾತ್ರಿಯಾಗಿದೆ’ ಎಂದಿದ್ದಾರೆ ದೇವಯಾನಿ ಶರ್ಮಾ.

‘ನನ್ನ ಮೊಬೈಲ್ ಬಳಸಿ ಬೇರೆ ಯಾರಿಗಾದರೂ ಸಂದೇಶ ಕಳುಹಿಸಲಾಗಿದೆಯೇ ಎಂಬುದು ನನಗೆ ಗೊತ್ತಿಲ್ಲ. ಒಂದೊಮ್ಮೆ ಹಾಗೆ ಯಾರಿಗಾದರೂ ಸಂದೇಶ ಬಂದಿದ್ದರೆ ದಯವಿಟ್ಟು ಅದನ್ನು ನಿರ್ಲಕ್ಷಿಸಿ ನಿಮಗೆ ನಾನು ಸಂದೇಶ ಕಳಿಸಿಲ್ಲ. ಈ ಬೆಳವಣಿಗೆಯಿಂದ ನನ್ನ ಮಾನಸಿಕ ಆರೋಗ್ಯ ಹಾಳಾಗಿದೆ. ರಾತ್ರಿ ವೇಳೆ ನಿದ್ದೆ ಬರುತ್ತಿಲ್ಲ. ನಾನು ಮೂರು ಬಾರಿ ಮುಂಬೈನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ವ್ಯವಸ್ಥೆಯ ಮೇಲೆ ನಂಬಿಕೆ ಇದೆ, ಪೊಲೀಸರು ಪ್ರಕರಣದ ತನಿಖೆ ನಡೆಸುವರೆಂಬ ವಿಶ್ವಾಸವಿದೆ’ ಎಂದಿದ್ದಾರೆ.

ಇದನ್ನೂ ಓದಿ:ನಟಿ ರಾಗಿಣಿ ದ್ವಿವೇದಿ ಡಿಫರೆಂಟ್​ ಫ್ಯಾಷನ್​ ಕಂಡು ವಾವ್​ ಎಂದ ಫ್ಯಾನ್ಸ್​

‘ಯಾರಿಗಾದರೂ ನನ್ನ ಮೊಬೈಲ್ ಸಂಖ್ಯೆಯಿಂದ ಚಿತ್ರ ವಿಚಿತ್ರ ಸಂದೇಶಗಳು ಬಂದರೆ ಅದನ್ನು ನಿರ್ಲಕ್ಷಿಸಿ, ನಾನು ಈಗಾಗಲೇ ಈ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದೇನೆ ಹಾಗೂ ಪರಿಹಾರ ಮಾಡಿಕೊಳ್ಳಲಿದ್ದೇನೆ. ನನ್ನ ಹೆಸರು ಹಾಳು ಮಾಡಲು, ನನ್ನ ವೃತ್ತಿಯನ್ನು ಹಾಳುಗೆಡವಲು ಮಾಡಿರುವ ಸ್ಪಷ್ಟ ಹುನ್ನಾರ ಇದೆಂದು ನನಗೆ ಖಾತ್ರಿ ಆಗಿದೆ. ಕಲಾವಿದರ ಜೀವನ ಕಷ್ಟ, ಈ ರೀತಿಯ ಘಟನೆಗಳು ಅವರ ಜೀವನವನ್ನು ಇನ್ನಷ್ಟು ಕಠಿಣಗೊಳಿಸುತ್ತವೆ. ಆದಷ್ಟು ಬೇಗ ಈ ಸಮಸ್ಯೆಯಿಂದ ಹೊರಗೆ ಬರುವ ನಂಬಿಕೆ ನನಗೆ ಇದೆ’ ಎಂದಿದ್ದಾರೆ ದೇವಯಾನಿ.

ದೇವಯಾನಿ ಶರ್ಮಾ, ತೆಲುಗಿನ ‘ಅನಗನಗಾ’ ಹಾಗೂ ‘ರೊಮ್ಯಾಂಟಿಕ್’ ಸಿನಿಮಾಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಬಳಿಕ ಹಿಂದಿಯ ‘ಸೇವ್ ದಿ ಟೈಗರ್ಸ್’ ಸಿನಿಮಾದಲ್ಲಿಯೂ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆ ಆದ ಮಾಧವನ್, ಅಜಯ್ ದೇವಗನ್ ನಟನೆಯ ‘ಶೈತಾನ್’ ನಲ್ಲಿ ದೇವಯಾನಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ನಟನೆಗೆ ಪ್ರಶಂಸೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು