Sreeleela: ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಶ್ರೀಲೀಲಾ; ಇಲ್ಲಿದೆ ಇಂಟರೆಸ್ಟಿಂಗ್​ ಅಪ್​ಡೇಟ್​

Allu Arjun | Tollywood News: ಟಾಲಿವುಡ್​ ಪ್ರೇಕ್ಷಕರಿಗೆ ಶ್ರೀಲೀಲಾ ಹೆಚ್ಚು ಇಷ್ಟ ಆಗಿದ್ದಾರೆ. ಪರಿಣಾಮವಾಗಿ ಒಂದಕ್ಕಿಂತ ಮತ್ತೊಂದು ದೊಡ್ಡ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

Sreeleela: ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಶ್ರೀಲೀಲಾ; ಇಲ್ಲಿದೆ ಇಂಟರೆಸ್ಟಿಂಗ್​ ಅಪ್​ಡೇಟ್​
ಶ್ರೀಲೀಲಾ, ಅಲ್ಲು ಅರ್ಜುನ್
Follow us
| Updated By: ಮದನ್​ ಕುಮಾರ್​

Updated on:Nov 28, 2022 | 1:31 PM

ನಟಿ ಶ್ರೀಲೀಲಾ (Sreeleela) ಅವರು ಕನ್ನಡದಲ್ಲಿ ಮಿಂಚುವುದರ ಜೊತೆಗೆ ಪರಭಾಷೆಯಲ್ಲೂ ನಟಿಸಿದ್ದಾರೆ. ಕನ್ನಡದ ‘ಕಿಸ್​’, ‘ಭರಾಟೆ’, ‘ಬೈಟೂ ಲವ್​’ ಸಿನಿಮಾಗಳಲ್ಲಿ ಜನರನ್ನು ರಂಜಿಸಿದ ಈ ಸುಂದರಿಗೆ ತೆಲುಗು ಮಂದಿ ಮಣೆ ಹಾಕುತ್ತಿದ್ದಾರೆ. ಟಾಲಿವುಡ್​ನಲ್ಲಿ ಬ್ಯಾಕ್​ ಟು ಬ್ಯಾಕ್​ ಆಫರ್​ಗಳನ್ನು ಪಡೆದುಕೊಳ್ಳುತ್ತ ಶ್ರೀಲೀಲಾ ಮುಂದುವರಿಯುತ್ತಿದ್ದಾರೆ. ಅಚ್ಚರಿ ಎಂದರೆ ಅವರೀಗ ಅಲ್ಲು ಅರ್ಜನ್​ (Allu Arjun) ಜೊತೆ ನಟಿಸಿದ್ದಾರೆ! ಇಂಥ ಚಾನ್ಸ್​ ಸಿಕ್ಕಿದ್ದಕ್ಕೆ ಅವರ ಫ್ಯಾನ್ಸ್​ ಖುಷಿ ಆಗಿದ್ದಾರೆ. ಆದರೆ ಶ್ರೀಲೀಲಾ ಅವರು ಅಲ್ಲು ಅರ್ಜುನ್​ ಜೊತೆ ತೆರೆ ಹಂಚಿಕೊಂಡಿರುವುದು ಸಿನಿಮಾಗಾಗಿ ಅಲ್ಲ. ಬದಲಿಗೆ, ಒಂದು ಜಾಹೀರಾತಿನಲ್ಲಿ ಇವರಿಬ್ಬರು ಜೋಡಿ ಆಗಿದ್ದಾರೆ. ಒಟಿಟಿ (OTT) ಸಂಸ್ಥೆಯೊಂದರ ಜಾಹೀರಾತಿನ ಸಲುವಾಗಿ ಅಲ್ಲು ಅರ್ಜುನ್​ ಮತ್ತು ಶ್ರೀಲೀಲಾ ಅವರು ಜೊತೆಯಾಗಿ ಕ್ಯಾಮೆರಾ ಎದುರಿಸಿದ್ದಾರೆ.

ಅಲ್ಲು ಅರ್ಜುನ್​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಡಿಮ್ಯಾಂಡ್​ ಇದೆ. ಅವರ ಜೊತೆ ನಟಿಸಬೇಕು ಎಂಬ ಆಸೆ ಬಹುತೇಕ ಎಲ್ಲ ನಟಿಯರಿಗೂ ಇರುತ್ತದೆ. ಕೆಲವರು ಸಿನಿಮಾದಲ್ಲಿ ತೆರೆ ಹಂಚಿಕೊಂಡರೆ, ಇನ್ನೂ ಕೆಲವರು ಜಾಹೀರಾತಿನಲ್ಲಿ ಒಟ್ಟಿಗೆ ನಟಿಸುತ್ತಾರೆ. ಈಗ ಶ್ರೀಲೀಲಾ ಕೂಡ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗಿದ್ದಾರೆ.

ಇತ್ತೀಚೆಗೆ ಈ ಜಾಹೀರಾತಿನ ಶೂಟಿಂಗ್​ ಮುಗಿದಿದೆ. ಇದನ್ನು ದೊಡ್ಡ ಮಟ್ಟದಲ್ಲಿ ಚಿತ್ರೀಕರಿಸಲಾಗಿದೆ. ಖ್ಯಾತ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಇದಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ರವಿ ಕೆ. ಚಂದ್ರನ್​ ಛಾಯಾಗ್ರಹಣ ಮಾಡಿದ್ದಾರೆ. ಶೀಘ್ರದಲ್ಲೇ ಈ ಜಾಹೀರಾತು ಬಿತ್ತರ ಆಗಲಿದೆ.

ಇದನ್ನೂ ಓದಿ
Image
ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು
Image
ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​
Image
‘ಬೈ ಟೂ ಲವ್​’ ನೋಡಿ ಪ್ರೇಕ್ಷಕರು ಎಮೋಷನಲ್​ ಆಗುತ್ತಿದ್ದಾರೆ: ಶ್ರೀಲೀಲಾ
Image
ಸ್ಯಾಡ್​ ಮ್ಯೂಸಿಕ್​ ಕೇಳಿದ್ರೆ ಗಳಗಳನೆ ಅಳ್ತಾರೆ ನಟಿ ಶ್ರೀಲೀಲಾ; ‘ಮಹಾನಟಿ’ ಎಂಬ ಹೊಗಳಿಕೆ

ಶ್ರೀಲೀಲಾ ಅವರು ತೆಲುಗಿನಲ್ಲಿ ಮೊದಲು ನಟಿಸಿದ ಸಿನಿಮಾ ‘ಪೆಳ್ಳಿ ಸಂದಡಿ’. ಈ ಚಿತ್ರದಲ್ಲಿ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡರು. ಟಾಲಿವುಡ್​ ಪ್ರೇಕ್ಷಕರಿಗೆ ಅವರು ಹೆಚ್ಚು ಇಷ್ಟ ಆಗಿದ್ದಾರೆ. ಪರಿಣಾಮವಾಗಿ ಒಂದಕ್ಕಿಂತ ಮತ್ತೊಂದು ದೊಡ್ಡ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ರವಿ ತೇಜಾ ನಟನೆಯ ‘ಧಮಾಕಾ’ ಸಿನಿಮಾಗೆ ಶ್ರೀಲೀಲಾ ನಾಯಕಿ ಆಗಿದ್ದಾರೆ. ಆ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಹಲವು ಚಿತ್ರತಂಡಗಳ ಜೊತೆ ಅವರು ಮಾತುಕತೆ ನಡೆಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅವರ ಚಾರ್ಮ್​ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಅವರು ಯಾವೆಲ್ಲ ಪ್ರಾಜೆಕ್ಟ್​ ಒಪ್ಪಿಕೊಳ್ಳಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಲ್ಲಿ ನಿರ್ಮಾಣ ಆಗಿದೆ.

ಇನ್ನು, ಅಲ್ಲು ಅರ್ಜುನ್​ ಅವರು ಬಹುನಿರೀಕ್ಷಿತ ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ಇನ್ನಷ್ಟೇ ಪಾಲ್ಗೊಳ್ಳಬೇಕಿದೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಲೇ ಇವೆ. ಅದರ ನಡುವೆಯೇ ಅವರು ಶ್ರೀಲೀಲಾ ಜೊತೆ ಜಾಹೀರಾತಿನಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:33 pm, Sun, 27 November 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು