AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್​ಗೆ ಬರ್ತ್​ಡೇ ಸಂಭ್ರಮ; ಮಧ್ಯರಾತ್ರಿಯಿಂದಲೇ ಶುರುವಾಗಿದೆ ಸಂಭ್ರಮಾಚರಣೆ

Dhananjay Birthday: 2018ರಲ್ಲಿ ರಿಲೀಸ್ ಆದ ‘ಟಗರು’ ಸಿನಿಮಾ ಧನಂಜಯ್ ಅವರ ವೃತ್ತಿಜೀವನವನ್ನೇ ಬದಲಿಸಿತು. ಈ ಚಿತ್ರದಿಂದ ಡಾಲಿ ಎಂದೇ ಫೇಮಸ್ ಆದರು. ಅವರು ಮಾಡಿದ ವಿಲನ್ ಪಾತ್ರ ಗಮನ ಸೆಳೆಯಿತು. ಬಳಿಕ ಅವರು ‘ಭೈರವ ಗೀತ’ ಚಿತ್ರದಿಂದ ತೆಲುಗಿಗೂ ಕಾಲಿಟ್ಟರು.

ಡಾಲಿ ಧನಂಜಯ್​ಗೆ ಬರ್ತ್​ಡೇ ಸಂಭ್ರಮ; ಮಧ್ಯರಾತ್ರಿಯಿಂದಲೇ ಶುರುವಾಗಿದೆ ಸಂಭ್ರಮಾಚರಣೆ
ಧನಂಜಯ್
TV9 Web
| Edited By: |

Updated on: Aug 23, 2023 | 6:30 AM

Share

ನಟ ಡಾಲಿ ಧನಂಜಯ್ (Dhananjay) ಅವರಿಗೆ ಇಂದು (ಆಗಸ್ಟ್ 23) ಜನ್ಮದಿನದ ಸಂಭ್ರಮ. ಅವರು 38ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ, ಪುನೀತ್ ರಾಜ್​ಕುಮಾರ್ ನಿಧನ ಸೇರಿ ಹಲವು ಕಾರಣಗಳಿಂದ ಅಭಿಮಾನಿಗಳ ಜೊತೆ ಹುಟ್ಟಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ಈ ವರ್ಷ ಅಭಿಮಾನಿಗಳ ಜೊತೆಗೂಡಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್​ನಲ್ಲಿ ಸೆಲೆಬ್ರೇಷನ್ ಮಾಡಲಾಗಿದೆ. ಅವರ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ.

ಧನಂಜಯ್ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಕಾರಣಕ್ಕೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಆಗಸ್ಟ್ 22ರ ರಾತ್ರಿ 11:30ರಿಂದ ಸಂಭ್ರಮಾಚರಣೆ ಮಾಡಲಾಯಿತು. ಇಂದು ಬೆಳಗ್ಗೆ 11 ಗಂಟೆಗೆ ನಂದಿ ಲಿಂಕ್ ಗ್ರೌಂಡ್​ಗೆ ಧನಂಜಯ್ ಬರಲಿದ್ದು, ‘ಡಾಲಿ ಉತ್ಸವ’ ಜೋರಾಗಿ ನಡೆಯಲಿದೆ.

ಧನಂಜಯ್ ಅವರು ಐಟಿ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದವರು. ನಟನೆಯ ಮೇಲಿನ ಆಸಕ್ತಿಯಿಂದ ಅವರು ಕೆಲಸ ಬಿಟ್ಟರು. ‘ಜಯನಗರ 4th ಬ್ಲಾಕ್’ ಕಿರುಚಿತ್ರದಲ್ಲಿ ನಟಿಸಿದರು. 2013ರಲ್ಲಿ ರಿಲೀಸ್ ಆದ ‘ಡೈರೆಕ್ಟರ್ ಸ್ಪೆಷಲ್’ ಸಿನಿಮಾ ಮೂಲಕ ದೊಡ್ಡ ಪರದೆಗೆ ಕಾಲಿಟ್ಟರು. ಹಲವು ವರ್ಷಗಳ ಸ್ಟ್ರಗಲ್ ಬಳಿಕ ಅವರಿಗೆ ದೊಡ್ಡ ಗೆಲುವು ಸಿಕ್ಕಿತು.

2018ರಲ್ಲಿ ರಿಲೀಸ್ ಆದ ‘ಟಗರು’ ಸಿನಿಮಾ ಧನಂಜಯ್ ಅವರ ವೃತ್ತಿಜೀವನವನ್ನೇ ಬದಲಿಸಿತು. ಈ ಚಿತ್ರದಿಂದ ಡಾಲಿ ಎಂದೇ ಫೇಮಸ್ ಆದರು. ಅವರು ಮಾಡಿದ ವಿಲನ್ ಪಾತ್ರ ಗಮನ ಸೆಳೆಯಿತು. ಬಳಿಕ ಅವರು ‘ಭೈರವ ಗೀತ’ ಚಿತ್ರದಿಂದ ತೆಲುಗಿಗೂ ಕಾಲಿಟ್ಟರು. ಕೇವಲ ವಿಲನ್ ಮಾತ್ರವಲ್ಲದೆ ಪೊಲೀಸ್ ಪಾತ್ರಗಳಲ್ಲೂ ಅವರು ಜನಮನ ಸೆಳೆದರು.

2021ರಲ್ಲಿ ರಿಲೀಸ್ ಆದ ‘ಪುಷ್ಪ’ ಚಿತ್ರದಲ್ಲಿ ಜಾಲಿ ರೆಡ್ಡಿ ಪಾತ್ರ ಮಾಡಿ ಮತ್ತಷ್ಟು ಫೇಮಸ್ ಆದರು ಧನಂಜಯ್. ಅವರ 25ನೇ ಸಿನಿಮಾ ‘ಗುರುದೇವ ಹೊಯ್ಸಳ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಅವರು ‘ಪುಷ್ಪ 2’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಹೊಸ ಸಿನಿಮಾಗಳು ಘೋಷಣೆ ಆಗಿವೆ.

ಇದನ್ನೂ ಓದಿ: ತಂದೆಯ ಜೊತೆ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ಡಾಲಿ ಧನಂಜಯ್

ನಿರ್ಮಾಪಕನಾಗಿಯೂ ಧನಂಜಯ್ ಫೇಮಸ್ ಆಗಿದ್ದಾರೆ. ‘ಬಡವ ರಾಸ್ಕಲ್’ ಚಿತ್ರ ನಿರ್ಮಾಣ ಮಾಡಿ ದೊಡ್ಡ ಯಶಸ್ಸು ಕಂಡರು. ಬಳಿಕ ‘ಹೆಡ್ ಬುಷ್’ ಸಿನಿಮಾ ನಿರ್ಮಾಣ ಮಾಡಿದರು. ಈಗ ‘ಟಗರು ಪಲ್ಯ’ ಚಿತ್ರವನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ. ಗೀತ ಸಾಹಿತಿ ಆಗಿಯೂ ಧನಂಜಯ್ ಅವರು ಫೇಮಸ್ ಆಗಿದ್ದಾರೆ. ‘ಉಡುಪಿ ಹೋಟೆಲು..’ ಮೊದಲಾದ ಸಾಂಗ್ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ