AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷಗಳ ದಾಂಪತ್ಯ ಅಂತ್ಯ; ಧನಶ್ರೀಗೆ ಒಂದು ದಿನಕ್ಕೆ ಸಿಕ್ಕ ಹಣ ಇಷ್ಟೊಂದಾ?

ಧನಶ್ರೀ ವರ್ಮ ಮತ್ತು ಯಜುವೇಂದ್ರ ಚಾಹಲ್ ಅವರ ವಿಚ್ಛೇದನದಲ್ಲಿ ಧನಶ್ರೀಗೆ 4.75 ಕೋಟಿ ರೂಪಾಯಿ ಜೀವನಾಂಶ ಸಿಕ್ಕಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಮೊತ್ತವನ್ನು ದಿನನಿತ್ಯದ ಗಳಿಕೆಯಾಗಿ ಲೆಕ್ಕಾಚಾರ ಮಾಡಲಾಗಿದೆ. 2020ರಲ್ಲಿ ವಿವಾಹವಾದ ಈ ದಂಪತಿ ನಾಲ್ಕು ವರ್ಷಗಳ ಬಳಿಕ ಬೇರ್ಪಟ್ಟಿದ್ದಾರೆ. ವಿಚ್ಛೇದನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ನಾಲ್ಕು ವರ್ಷಗಳ ದಾಂಪತ್ಯ ಅಂತ್ಯ; ಧನಶ್ರೀಗೆ ಒಂದು ದಿನಕ್ಕೆ ಸಿಕ್ಕ ಹಣ ಇಷ್ಟೊಂದಾ?
ಚಾಹಲ್-ಧನಶ್ರೀ
ರಾಜೇಶ್ ದುಗ್ಗುಮನೆ
|

Updated on: Mar 21, 2025 | 3:06 PM

Share

ಡ್ಯಾನ್ಸರ್, ಇನ್​ಫ್ಲ್ಯುಯೆನ್ಸರ್ ಧನಶ್ರೀ ವರ್ಮ ಹಾಗೂ ಕ್ರಿಕೆಟರ್ ಯಜುವೇಂದ್ರ ಚಾಹಲ್ ಸಂಸಾರ ಕೊನೆ ಆಗಿದೆ. ಇಬ್ಬರೂ ಅಧಿಕೃತವಾಗಿ ಬೇರೆ ಆಗಿದ್ದಾರೆ. ಮಾರ್ಚ್​ 20ರಂದು ಈ ಜೋಡಿ ಕೋರ್ಟ್​ಗೆ ಆಗಮಿಸಿತ್ತು. ಅಲ್ಲಿ ಅವರು ವಿಚ್ಛೇದನ ಪಡೆದರು. ಈ ಬೆನ್ನಲ್ಲೇ ಧನಶ್ರೀ ವರ್ಮಾಗೆ  (Dhanshree Verma) ಸಿಕ್ಕ ಜೀವನಾಂಶದ ವಿಚಾರ ಚರ್ಚೆ ಆಗುತ್ತಿದೆ. ಚಹಲ್​ನಿಂದ ವಿಚ್ಛೇದನ ಪಡೆಯುತ್ತಿರುವುದಕ್ಕೆ ಧನಶ್ರೀಗೆ 4.75 ಕೋಟಿ ರೂಪಾಯಿ ಜೀವನಾಂಶ ಸಿಕ್ಕಿದೆ. ಇದನ್ನು ಕೆಲವರು ದಿನದ ಲೆಕ್ಕಕ್ಕೆ ಕೌಂಟ್ ಮಾಡಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಧನಶ್ರೀ ಹಾಗೂ ಚಾಹಲ್ 2020ರ ಡಿಸೆಂಬರ್​ನಲ್ಲಿ ವಿವಾಹ ಆದರು. ಗುರುಗ್ರಾಮದಲ್ಲಿ ಈ ವಿವಾಹ ನಡೆಯಿತು. ವೃತ್ತಿಯಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿರೋ ಧನಶ್ರೀ ನಾಲ್ಕು ವರ್ಷದ ಮೂರು ತಿಂಗಳ ಕಾಲ ಚಹಲ್ ಜೊತೆ ಸಂಸಾರ ನಡೆಸಿದರು. ಈಗ ಇವರು ಬೇರೆ ಆಗಿದ್ದಾರೆ. ಇದಕ್ಕಾಗಿ ಅವರು ಪಡೆಯುತ್ತಿರುವ ಹಣ ಬೋರಬ್ಬರಿ 4.75 ಕೋಟಿ ರೂಪಾಯಿ.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕೆಲವರು ಧನಶ್ರೀ ಅವರ ಒಂದು ದಿನದ ಗಳಿಕೆ ಎಷ್ಟಾಯಿತು ಎಂಬ ಲೆಕ್ಕಾಚಾರವನ್ನು ತೆಗೆದು ತೋರಿಸಿದ್ದಾರೆ. ಒಂದು ಅಂದಾಜಿನ ಪ್ರಕಾರ ಹೇಳುವಾದಾದರೆ ಧನಶ್ರೀ ಅವರು ಚಹಲ್ ಜೊತೆ 1,550 ದಿನ ವಾಸ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಸಿಕ್ಕಿದ್ದು ಸುಮಾರು ಐದು ಕೋಟಿ. 1550 ದಿನವನ್ನು 4.75 ಕೋಟಿ ರೂಪಾಯಿನಲ್ಲಿ ಡಿವೈಡ್ ಮಾಡಿದಾಗ ಒಂದು ದಿನಕ್ಕೆ ಬರುವ ಮೊತ್ತ ಬರೋಬ್ಬರಿ 30 ಸಾವಿರ ರೂಪಾಯಿ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್​ಗಳ ಸುರಿಮಳೆ ಹರಿದು ಬಂದಿದೆ. ಅಂದಹಾಗೆ ಈ ರೀತಿ ಸಿಗುವ ಹಣಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

ಇದನ್ನೂ ಓದಿ
Image
ಟಿ ಶರ್ಟ್ ಮೇಲಿನ ಸಾಲುಗಳ ಮೂಲಕ ಧನಶ್ರೀಗೆ ಟಾಂಗ್; ಚಾಹಲ್​ಗೂ ಕೌಂಟರ್

ಇದನ್ನೂ ಓದಿ: ಟಿ ಶರ್ಟ್ ಮೇಲಿನ ಸಾಲುಗಳ ಮೂಲಕ ಧನಶ್ರೀಗೆ ಟಾಂಗ್ ಕೊಟ್ಟ ಚಾಹಲ್; ಕೌಂಟರ್ ಕೊಟ್ಟ ವರ್ಮಾ

ಧನಶ್ರೀ ಅವರು ಡ್ಯಾನ್ಸ್ ಕ್ಲಾಸ್ ನಡೆಸುತ್ತಾ ಇದ್ದರು. ಡ್ಯಾನ್ಸ್ ಕಲಿಯುವ ಉದ್ದೇಶದಿಂದ ಚಾಹಲ್ ಅವರು ಈ ಕ್ಲಾಸ್​ಗೆ ಸೇರಿಕೊಂಡರು. ಈ ವೇಳೆ ಧನಶ್ರೀ ಹಾಗೂ ಚಾಹಲ್ ಮಧ್ಯೆ ಪ್ರೀತಿ ಮೂಡಿತು. ಆ ಬಳಿಕ ಕುಟುಂಬದವರ ಒಪ್ಪಿಗೆ ಪಡೆದು ಇಬ್ಬರೂ ವಿವಾಹ ಆದರು.  ವಿಚ್ಛೇದನಕ್ಕೆ ಕಾರಣ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ