ಧನುಷ್ ವಿಚ್ಛೇದನಕ್ಕೆ ಕಾರಣವಾಯ್ತು ಪರಸ್ತ್ರೀ ಸಹವಾಸ; ಗಾಯಕಿಯ ಶಾಕಿಂಗ್ ಆರೋಪ

2017ರಲ್ಲಿ ಸುಚಿತ್ರಾ ಅವರು ಒಂದು ಗಂಭೀರ ಆರೋಪ ಮಾಡಿದ್ದರು. ತಮ್ಮ ಸೋಶಿಯಲ್ ಮೀಡಿಯಾ ಖಾತೆ ಹ್ಯಾಕ್ ಆಗಿದೆ ಎಂದಿದ್ದ ಅವರು, ಧನುಷ್ ಸಹಾಯಕ ತಮ್ಮ ಜೊತೆ ಬೇರೆ ರೀತಿಯಲ್ಲಿ ನಡೆದುಕೊಂಡಿದ್ದ ಎಂದು ಕೂಡ ಅವರು ಆರೋಪಿಸಿದ್ದರು. ಈಗ ಅವರು ಹೊಸ ಆರೋಪ ಮಾಡಿದ್ದರು.

ಧನುಷ್ ವಿಚ್ಛೇದನಕ್ಕೆ ಕಾರಣವಾಯ್ತು ಪರಸ್ತ್ರೀ ಸಹವಾಸ; ಗಾಯಕಿಯ ಶಾಕಿಂಗ್ ಆರೋಪ
ಐಶ್ವರ್ಯಾ-ಧನುಷ್
Follow us
| Updated By: ರಾಜೇಶ್ ದುಗ್ಗುಮನೆ

Updated on: May 14, 2024 | 9:41 AM

ನಟ ಧನುಷ್ (Dhanush) ಹಾಗೂ ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದಿದ್ದಾರೆ. ಹಲವು ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿಕೊಂಡಿದ್ದ ಇವರು ಬೇರೆ ಆಗಿದ್ದು ಅನೇಕರಿಗೆ ಶಾಕಿಂಗ್ ಎನಿಸಿದೆ. ಇವರು ಬೇರೆ ಆಗೋಕೆ ಕಾರಣ ಏನು ಎಂಬುದು ಈಗಲೂ ರಿವೀಲ್ ಆಗಿಲ್ಲ. ಈ ಮಧ್ಯೆ ತಮಿಳು ರೇಡಿಯೋ ಜಾಕಿ ಹಾಗೂ ಗಾಯಕಿ ಸುಚಿತ್ರಾ ಕಾರ್ತಿಕ್ ಅವರು ಈಗ ದೊಡ್ಡ ಬಾಂಬ್ ಹಾಕಿದ್ದಾರೆ. ಧನುಷ್ ಪರಸ್ತ್ರೀ ಸಹವಾಸ ಮಾಡಿದ್ದರು ಎಂದು ಅವರು ಆರೋಪಿಸಿದ್ದಾರೆ.

2017ರಲ್ಲಿ ಸುಚಿತ್ರಾ ಅವರು ಒಂದು ಗಂಭೀರ ಆರೋಪ ಮಾಡಿದ್ದರು. ತಮ್ಮ ಸೋಶಿಯಲ್ ಮೀಡಿಯಾ ಖಾತೆ ಹ್ಯಾಕ್ ಆಗಿದೆ ಎಂದಿದ್ದ ಅವರು, ಧನುಷ್ ಸಹಾಯಕ ತಮ್ಮ ಜೊತೆ ಬೇರೆ ರೀತಿಯಲ್ಲಿ ನಡೆದುಕೊಂಡಿದ್ದ ಎಂದು ಕೂಡ ಅವರು ಆರೋಪಿಸಿದ್ದರು. ಆ ಬಳಿಕ ಸುಚಿತ್ರಾ ಅವರು ಧನುಷ್ ಬಗ್ಗೆಯೂ ಆರೋಪಿಸಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದರು. ಇದರಿಂದ ತಮಿಳು ಸಿನಿಮಾ ರಂಗದಲ್ಲಿ ಕಾಸ್ಟಿಂಗ್​ಕೌಚ್ ವಿಚಾರ ಚರ್ಚೆಗೆ ಬಂದಿತ್ತು. ಆ ಬಳಿಕ ಧನುಷ್ ಅವರ ಕೆಲವು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಲೀಕ್ ಮಾಡಿದ್ದರು. ಈಗ ಅವರು ಧನುಷ್ ವಿರುದ್ಧ ಕೂಗಾಡಿದ್ದಾರೆ.

‘ಧನುಷ್ ಮತ್ತು ಐಶ್ವರ್ಯಾ ವಿಚ್ಛೇದನ ಇಬ್ಬರೂ ಸರಿ ಇಲ್ಲ. ಐಶ್ವರ್ಯಾ ಒಳ್ಳೆಯ ತಾಯಿ ಅಲ್ಲ. ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ. ನನಗೆ ಧನುಷ್ ಮೇಲೆ ಸಿಟ್ಟಿದೆ. ಅದನ್ನು ಬೇರೆ ರೀತಿಯಲ್ಲಿ ತೀರಿಸಿಕೊಳ್ಳುತ್ತೇನೆ. ರೀಲ್ಸ್ ಮಾಡೋ ತಾಯಿಗಳು ನನಗೆ ಇಷ್ಟ ಆಗುವುದಿಲ್ಲ. ಧನುಷ್ ಓರ್ವ ಒಳ್ಳೆಯ ತಂದೆ’ ಎಂದಿದ್ದಾರೆ ಸುಚಿತ್ರಾ.

‘ಮದುವೆ ಆದ ಬಳಿಕ ಯಾರಾದರೂ ಡೇಟ್​​ಗೆ ಹೋಗುತ್ತಾರಾ? ಧನುಷ್ ಹೋಗಿದ್ದರು. ಓಪನ್ ಆಗಿ ಧನುಷ್ ಮೋಸ ಮಾಡಿದ್ದಾರೆ. ದೆವ್ವ ಹಾಗೂ ಆಳ ಸಮುದ್ರದಲ್ಲಿ ದೆವ್ವವೇ ಬೆಸ್ಟ್. ಧನುಷ್ ನಿಜಕ್ಕೂ ಉತ್ತಮ. ನನಗೆ ಅವರ ಮೇಲೆ ದ್ವೇಷ ಇಲ್ಲ. ನನಗೆ ಪ್ರ್ಯಾಂಕ್ ಮಾಡಿ ನನ್ನ ಜೀವನವೇ ನಾಶ ಮಾಡಿದರು’ ಎಂದಿದ್ದಾರೆ ಸುಚಿತ್ರಾ. ಈ ಮೂಲಕ ಪರಸ್ತ್ರೀ ಸಹವಾಸದಿಂದ ವಿಚ್ಛೇದನ ಆಯಿತೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ.

ಇದನ್ನೂ ಓದಿ: ಒಂದು ಕೋಟಿ ರೂಪಾಯಿ ದೇಣಿಗೆಯನ್ನು ಕಾರ್ತಿ ಕೈಗೆ ನೀಡಿದ ನಟ ಧನುಷ್​

ಧನುಷ್ ಹಾಗೂ ಐಶ್ವರ್ಯಾ ಕೆಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಬೇರೆ ಆಗುವ ಬಗ್ಗೆ ಇವರು ಘೋಷಣೆ ಮಾಡಿದ್ದರು. ಇತ್ತೀಚೆಗೆ ಧನುಷ್ ಹಾಗೂ ಐಶ್ವರ್ಯಾ ಅವರು ವಿಚ್ಛೇದನ ಪಡೆಯೋ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಶೀಘ್ರವೇ ಇಬ್ಬರೂ ಬೇರೆ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ