AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಧನುಶ್-ಐಶ್ವರ್ಯಾ ವಿಚ್ಛೇದನ, 20 ವರ್ಷದ ದಾಂಪತ್ಯ ಅಂತ್ಯ

Dhanush and Aishwarya: ರಜನೀಕಾಂತ್ ಪುತ್ರಿ ಐಶ್ವರ್ಯಾ ಹಾಗೂ ನಟ ಧನುಶ್​ಗೆ ಅಧಿಕೃತವಾಗಿ ವಿಚ್ಛೇದನ ದೊರೆತಿದೆ. ಚೆನ್ನೈ ಫ್ಯಾಮಿಲಿ ಕೋರ್ಟ್ ಇವರಿಗೆ ವಿಚ್ಛೇದನ ಮಂಜೂರು ಮಾಡಿದೆ. ಇವರ 20 ವರ್ಷದ ದಾಂಪತ್ಯ ಅಂತ್ಯವಾಗಿದೆ.

ನಟ ಧನುಶ್-ಐಶ್ವರ್ಯಾ ವಿಚ್ಛೇದನ, 20 ವರ್ಷದ ದಾಂಪತ್ಯ ಅಂತ್ಯ
ಮಂಜುನಾಥ ಸಿ.
|

Updated on: Nov 28, 2024 | 11:39 AM

Share

ತಮಿಳಿನ ಸ್ಟಾರ್ ನಟ ಧನುಶ್ ಹಾಗೂ ರಜನೀಕಾಂತ್​ರ ಪುತ್ರಿ ಐಶ್ವರ್ಯಾ ಅವರಿಗೆ ವಿಚ್ಛೇದನ ಮಂಜೂರಾಗಿದೆ. ಎರಡು ವರ್ಷದ ಹಿಂದೆಯೇ ಈ ಜೋಡಿ ತಾವು ದೂರಾಗುತ್ತಿರುವುದಾಗಿ ಹೇಳಿ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡಿದ್ದರು. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ನಿನ್ನೆ ಧನುಶ್ ಹಾಗೂ ಐಶ್ವರ್ಯಾ ಅವರಿಗೆ ವಿಚ್ಛೇದನ ಮಂಜೂರಾಗಿದೆ. ಆ ಮೂಲಕ 20 ವರ್ಷಗಳ ಅವರ ದಾಂಪತ್ಯ ಜೀವನ ಅಂತ್ಯವಾಗಿದೆ.

2004 ರಲ್ಲಿ ಧನುಶ್ ಮತ್ತು ಐಶ್ವರ್ಯಾ ಅವರುಗಳು ವಿವಾಹವಾಗಿದ್ದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ವೃತ್ತಿ ಜೀವನದ ಆರಂಭದಲ್ಲಿದ್ದಾಗಲೇ ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿಯನ್ನು ಪ್ರೀತಿಸಿ ವಿವಾಹವಾಗಿದ್ದರು ಧನುಶ್. ಇವರ ಮದುವೆ ಆಗಿನ ಕಾಲಕ್ಕೆ ಭಾರಿ ಅದ್ಧೂರಿಯಾಗಿ ನಡೆದಿತ್ತು. ಈಗ ಬರೋಬ್ಬರಿ 20 ವರ್ಷದ ಬಳಿಕ ಈ ಜೋಡಿ ವಿಚ್ಛೇದನ ಪಡೆದುಕೊಂಡಿದೆ. ನವೆಂಬರ್ 27 ರಂದು ಅಧಿಕೃತವಾಗಿ ಇವರಿಗೆ ವಿಚ್ಛೇದನ ದೊರೆತಿದೆ.

2022 ರಲ್ಲಿ ಈ ಜೋಡಿ ತಾವು ಪರಸ್ಪರ ದೂರಾಗುತ್ತಿರುವುದಾಗಿ ಹೇಳಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು. ರಜನೀಕಾಂತ್​ಗೆ ಅನಾರೋಗ್ಯ ಇದ್ದ ಸಮಯದಲ್ಲಿಯೇ ಈ ಘೋಷನೆ ಬಂದಿತ್ತು. ಮಕ್ಕಳನ್ನು ಒಟ್ಟಿಗೆ ಸಾಕುವುದಾಗಿ ದಂಪತಿಗಳು ಘೋಷಿಸಿದ್ದರು. ಆದರೆ ಅದಾದ ಬಳಿಕ ಮತ್ತೆ ಈ ಜೋಡಿ ಒಂದಾಗಲಿದೆ. ರಜನೀಕಾಂತ್ ಸಂಧಾನ ನಡೆಸಿದ್ದು ಈ ಜೋಡಿ ಮತ್ತೆ ಒಟ್ಟಿಗೆ ಬಾಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಈಗ ಅದು ಸುಳ್ಳಾಗಿದೆ. ನವೆಂಬರ್ 21 ರಂದು ಕೊನೆಯ ವಿಚಾರಣೆಗಾಗಿ ಚೆನ್ನೈನ ಫ್ಯಾಮಿಲಿ ಕೋರ್ಟ್​ಗೆ ಈ ಜೋಡಿ ಹಾಜರಾಗಿತ್ತು. ನವೆಂಬರ್ 27 ರಂದು ನ್ಯಾಯಾಲಯವು ಈ ದಂಪತಿಗಳಗೆ ವಿಚ್ಛೇದನ ನೀಡಿದೆ.

ಇದನ್ನೂ ಓದಿ:ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅನ್ನೂ ಹಿಂದಿಕ್ಕಿದ ಅಲ್ಲು ಅರ್ಜುನ್

ಧನುಶ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಐಶ್ವರ್ಯಾ ಸಹ ಸಿನಿಮಾ ನಿರ್ದೇಶಕಿಯಾಗಿದ್ದು, ಧನುಶ್ ನಟನೆಯ ‘3’, ಇತ್ತೀಚೆಗೆ ಬಿಡುಗಡೆ ಆದ ರಜನೀಕಾಂತ್ ನಟನೆಯ ‘ಲಾಲ್ ಸಲಾಂ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಸ್ಟುಡಿಯೋ ಸೇರಿದಂತೆ ಕೆಲವು ಉದ್ಯಮಗಳನ್ನು ಸಹ ನಿಭಾಯಿಸುತ್ತಿದ್ದಾರೆ.

ಧನುಶ್​ ಹೆಸರು ಇತ್ತೀಚೆಗೆ ಸಿನಿಮಾಯೇತರ ಕಾರಣಕ್ಕೆ ಹೆಚ್ಚು ಸುದ್ದಿಗೆ ಬರುತ್ತಿದೆ. ನಯನತಾರಾ, ಧನುಶ್ ವಿರುದ್ಧ ಸುದೀರ್ಘ ಪತ್ರ ಬರೆದಿದ್ದು, ಧನುಶ್ ಅನ್ನು ನೀಚ ಇತ್ಯಾದಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಇದೀಗ ಧನುಶ್, ನಯನತಾರಾ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಧನುಶ್ ನಿರ್ಮಾಣ ಮಾಡಿದ್ದ ‘ನಾನುಂ ರೌಡಿ ದಾ’ ಸಿನಿಮಾದ ಕೆಲವು ದೃಶ್ಯಗಳನ್ನು ಡಾಕ್ಯುಮೆಂಟರಿಯಲ್ಲಿ ಬಳಸಿದ್ದಕ್ಕೆ ಧನುಶ್, ನಯನತಾರಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ನಡುವೆ ಈಗ ಧನುಶ್​ಗೆ ವಿಚ್ಛೇದನ ಸಹ ದೊರೆತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ