AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕವೂ ಒಂದೇ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದಾರೆ ಧನುಷ್​-ಐಶ್ವರ್ಯಾ?

ಸಾಮಾನ್ಯವಾಗಿ ವಿಚ್ಛೇದನ ಪಡೆದ ನಂತರದಲ್ಲಿ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳೋಕೆ ಇಷ್ಟಪಡುವುದಿಲ್ಲ. ಆದರೆ, ಸೆಲೆಬ್ರಿಟಿ ವಲಯದಲ್ಲಿ ಹಾಗಾಗುವುದಿಲ್ಲ. ಒಂದೇ ಇಂಡಸ್ಟ್ರಿಯಲ್ಲಿ ಇದ್ದರೆ ಪರಸ್ಪರ ಭೇಟಿ ಆಗುವ ಸಂದರ್ಭ ಒದಗಿ ಬರುತ್ತದೆ. ಈಗ ಧನುಷ್​ ಹಾಗೂ ಐಶ್ವರ್ಯಾಗೆ ಹೀಗೆಯೇ ಆಗಿದೆ ಎನ್ನಲಾಗುತ್ತಿದೆ.

ವಿಚ್ಛೇದನದ ಬಳಿಕವೂ ಒಂದೇ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದಾರೆ ಧನುಷ್​-ಐಶ್ವರ್ಯಾ?
ಐಶ್ವರ್ಯಾ-ಧನುಷ್​
TV9 Web
| Edited By: |

Updated on: Jan 23, 2022 | 2:44 PM

Share

ಧನುಷ್​​ (Dhanush) ಹಾಗೂ ಐಶ್ವರ್ಯಾ ರಜನಿಕಾಂತ್​ (Aishwarya Rajinikanth) ವಿಚ್ಛೇದನ ಪಡೆದಿರುವ ವಿಚಾರ ಅವರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತಂದಿದೆ. ಹೀಗೊಂದು ಸುದ್ದಿ ಈ ದಂಪತಿಯಿಂದ ಬರಲಿದೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಈ ದಂಪತಿ ಬಗ್ಗೆ ನಾನಾ ವಿಚಾರಗಳು ಹೊರ ಬರುತ್ತಿವೆ. ಧನುಷ್​ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯಲು ಹೈದರಾಬಾದ್​ನಲ್ಲಿ ನಡೆದ ಒಂದು ಜಗಳ ಕಾರಣವಾಯಿತು ಎಂದು ಕೆಲ ಮಧ್ಯಮಗಳು ವರದಿ ಮಾಡಿವೆ. ರಜನಿಕಾಂತ್​ ಇವರ ನಡುವೆ ಸಂಧಾನಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈಗ ಈ ಮಾಜಿ ದಂಪತಿ ಬಗ್ಗೆ ಹೊಸ ಸುದ್ದಿ ಒಂದು ಕೇಳಿ ಬಂದಿದೆ. ಈ ವಿಚಾರ ಕೇಳಿ ಅನೇಕರು ಅಚ್ಚರಿ ಹೊರ ಹಾಕಿದ್ದಾರೆ.

ಸಾಮಾನ್ಯವಾಗಿ ವಿಚ್ಛೇದನ ಪಡೆದ ನಂತರದಲ್ಲಿ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳೋಕೆ ಇಷ್ಟಪಡುವುದಿಲ್ಲ. ಆದರೆ, ಸೆಲೆಬ್ರಿಟಿ ವಲಯದಲ್ಲಿ ಹಾಗಾಗುವುದಿಲ್ಲ. ಒಂದೇ ಇಂಡಸ್ಟ್ರಿಯಲ್ಲಿ ಇದ್ದರೆ ಪರಸ್ಪರ ಭೇಟಿ ಆಗುವ ಸಂದರ್ಭ ಒದಗಿ ಬರುತ್ತದೆ. ಈಗ ಧನುಷ್​ ಹಾಗೂ ಐಶ್ವರ್ಯಾಗೆ ಹೀಗೆಯೇ ಆಗಿದೆ ಎನ್ನಲಾಗುತ್ತಿದೆ. ಸದ್ಯ, ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಧನುಷ್​ ಇತ್ತೀಚೆಗೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ತಮಿಳು ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ತಮಿಳಿನಲ್ಲಿ ‘ವಾತಿ’ ಹಾಗೂ ತೆಲುಗಿನಲ್ಲಿ ‘ಸರ್’ ಎಂದು ಹೆಸರಿಡಲಾಗಿದೆ. ಸಿತಾರಾ ಎಂಟರ್​ಟೇನ್​ಮೆಂಟ್​​ನ​ ಸೂರ್ಯದೇವ ನಾಗವಂಶಿ ಹಾಗೂ ಫಾರ್ಚೂನ್ ಫೋರ್​ ಸಿನೇಮಾಸ್​​ನ ಸಾಯಿ ಸೌಜನ್ಯ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ರಂಗ್​ ದೇ’ ಖ್ಯಾತಿಯ ವೆಂಕಿ ಅಟ್ಲುರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಧನುಷ್​ ಹೈದರಾಬಾದ್​ಗೆ ತೆರಳಿದ್ದಾರೆ. ಸಿನಿಮಾ ಕೆಲಸವೊಂದರ ನಿಮಿತ್ತ ಐಶ್ವರ್ಯಾ ಕೂಡ ಹೈದರಾಬಾದ್​ನಲ್ಲಿದ್ದಾರೆ.

ಮೂಲಗಳ ಪ್ರಕಾರ ಇಬ್ಬರೂ ಒಂದೇ ಹೋಟೆಲ್​ನಲ್ಲಿ ತಂಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹೋಟೆಲ್​ನಲ್ಲಿಯೇ ಇಬ್ಬರ ನಡುವೆ ದೊಡ್ಡ ಮಟ್ಟದಲ್ಲಿ ಜಗಳ ಏರ್ಪಟ್ಟಿತ್ತು ಎಂದು ವರದಿ ಆಗಿದೆ. ಈ ಬಗ್ಗೆ ದಂಪತಿಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ. ವಿಶೇಷ ಎಂದರೆ, ಐಶ್ವರ್ಯಾ ಹಾಗೂ ಧನುಷ್​ ಅವರದ್ದು ಪ್ರೇಮ ವಿವಾಹ. 21ನೇ ವಯಸ್ಸಿಗೆ ಐಶ್ವರ್ಯಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು ಧನುಷ್​. 18 ವರ್ಷಗಳ ಕಾಲ ದಾಂಪತ್ಯ ನಡೆಸಿದ ಇಬ್ಬರೂ ಈಗ ಬೇರೆ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ತರಿಸಿದೆ. ಧನುಷ್​ ನಟನೆಯ ‘3’ ಚಿತ್ರವನ್ನು ಐಶ್ವರ್ಯಾ ರಜನಿಕಾಂತ್​ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರ ತೆರೆಗೆ ಬಂದ ನಂತರದಲ್ಲಿ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ವದಂತಿ ಹುಟ್ಟಿಕೊಂಡಿತ್ತು. ಆದರೆ, ಅದು ನಿಜವಾಗಿರಲಿಲ್ಲ. ಈ ಸಿನಿಮಾ ತೆರೆಕಂಡು ಸುಮಾರು 10 ವರ್ಷಗಳ ನಂತರದಲ್ಲಿ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

Dhanush: ವಿಚ್ಛೇದನದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಧನುಷ್​

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ