AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್​​-ಐಶ್ವರ್ಯಾ ರಜನಿಕಾಂತ್​ ವಿಚ್ಛೇದನ ಕ್ಯಾನ್ಸಲ್​? ಮಾಜಿ ದಂಪತಿ ಬಗ್ಗೆ ಬಿಗ್​ ನ್ಯೂಸ್​

Dhanush | Aishwaryaa Rajinikanth: ಧನುಷ್​​ ಹಾಗೂ ಐಶ್ವರ್ಯಾ ಮತ್ತೆ ಒಂದಾಗುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ.

ಧನುಷ್​​-ಐಶ್ವರ್ಯಾ ರಜನಿಕಾಂತ್​ ವಿಚ್ಛೇದನ ಕ್ಯಾನ್ಸಲ್​? ಮಾಜಿ ದಂಪತಿ ಬಗ್ಗೆ ಬಿಗ್​ ನ್ಯೂಸ್​
ಐಶ್ವರ್ಯಾ- ಧನುಷ್
TV9 Web
| Edited By: |

Updated on: Oct 06, 2022 | 3:44 PM

Share

ಖ್ಯಾತ ನಟ ಧನುಷ್​​ (Dhanush) ಅವರ ದಾಂಪತ್ಯ ಜೀವನದ ಬಗ್ಗೆ ಮತ್ತೆ ಸುದ್ದಿ ಕೇಳಿಬಂದಿದೆ. ಒಂಬತ್ತು ತಿಂಗಳ ಹಿಂದೆ ಐಶ್ವರ್ಯಾ ರಜನಿಕಾಂತ್​ ಮತ್ತು ಧನುಷ್​ ಪರಸ್ಪರ ಬೇರೆ ಆಗುತ್ತಿರುವುದಾಗಿ ಘೋಷಿಸಿದ್ದರು. ಈಗ ಅವರಿಬ್ಬರು ಮತ್ತೆ ಒಂದಾಗುತ್ತಾರೆ ಎಂಬ ಸುದ್ದಿ ಹರಡಿದೆ. ಈ ಬಗ್ಗೆ ಅವರ ಕುಟುಂಬದಿಂದ ಯಾವುದೇ ಅಧಿಕೃತ ಹೇಳಿಕೆ ಪ್ರಕಟ ಆಗಿಲ್ಲ. ಹಾಗಿದ್ದರೂ ಕೂಡ ಕಾಲಿವುಡ್​ ಅಂಗಳದಲ್ಲಿ ಗುಸುಗುಸು ಕೇಳಿಬಂದಿದೆ. ಐಶ್ವರ್ಯಾ ರಜನಿಕಾಂತ್​ (Aishwaryaa Rajinikanth) ಮತ್ತು ಧನುಷ್​ ಅವರು ಮದುವೆ ಆಗಿದ್ದು 2004ರಲ್ಲಿ. ಸುಖವಾಗಿ ಸಂಸಾರ ನಡೆಸುತ್ತಿದ್ದ ಅವರ ದಾಂಪತ್ಯದಲ್ಲಿ ಬಿರುಗಾಳಿ ಏಳುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸಿರಲಿಲ್ಲ. 18 ವರ್ಷಗಳ ಕಾಲ ಜೊತೆಗಿದ್ದ ಈ ದಂಪತಿ 2022ರ ಜನವರಿಯಲ್ಲಿ ಬ್ಯಾಡ್​ ನ್ಯೂಸ್​ ನೀಡಿದ್ದರು. ಅದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು.

‘18 ವರ್ಷಗಳಿಂದ ಸ್ನೇಹಿತರಾಗಿ, ದಂಪತಿಗಳಾಗಿ, ಪೋಷಕರಾಗಿ ಪರಸ್ಪರ ಜತೆಗಿದ್ದೆವು. ಈ ಹಾದಿಯಲ್ಲಿ ಇಬ್ಬರೂ ಬೆಳೆದೆವು, ಅರ್ಥ ಮಾಡಿಕೊಂಡೆವು ಹಾಗೂ ಹೊಂದಿಕೆಯನ್ನು ಕಲಿತೆವು. ಈಗ ಇಬ್ಬರೂ ಭಿನ್ನ ದಾರಿಗಳಲ್ಲಿ ನಿಂತಿದ್ದೇವೆ. ಆದ್ದರಿಂದ ನಾನು ಮತ್ತು ಐಶ್ವರ್ಯಾ ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿದ್ದೇವೆ. ವೈಯಕ್ತಿಕವಾಗಿ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಳ್ಳುವೆವು’ ಎಂದು ಧನುಷ್​ ಟ್ವೀಟ್​ ಮಾಡಿದ್ದರು. ಈಗ ಅವರಿಬ್ಬರು ಒಂದಾಗುತ್ತಾರೆ ಎಂಬ ವಿಷಯ ಕೇಳಿ ಫ್ಯಾನ್ಸ್​ ಖುಷಿಯಾಗಿದ್ದಾರೆ.

ದಾಂಪತ್ಯ ಅಂತ್ಯ ಆಗುವ ಬಗ್ಗೆ ತಿಳಿಸಲು ಧನುಷ್​ ಮಾಡಿದ ಟ್ವೀಟ್​ನಲ್ಲಿ ಡಿವೋರ್ಸ್​ ಎಂಬ ಪದವನ್ನು ಬಳಸಿರಲಿಲ್ಲ. ಅದಕ್ಕೆ ಪೂರಕ ಎಂಬಂತೆ ಅವರ ತಂದೆ ಕಸ್ತೂರಿ ರಾಜ ಕೂಡ ಒಂದು ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿತ್ತು. ಮಗ-ಸೊಸೆಯ ಡಿವೋರ್ಸ್​ ಸುದ್ದಿಯನ್ನು ಕಸ್ತೂರಿ ರಾಜ ತಳ್ಳಿ ಹಾಕಿದ್ದರು. ‘ಪರಸ್ಪರ ವೈಮನಸ್ಸಿನ ಕಾರಣಕ್ಕೆ ಹೀಗೆ ಆಗಿದೆ. ಇದು ಒಂದು ಕುಟುಂಬದ ಜಗಳ ಅಷ್ಟೇ. ಗಂಡ-ಹೆಂಡತಿ ನಡುವೆ ಇದೆಲ್ಲ ಸಹಜ. ಇದು ಡಿವೋರ್ಸ್​ ಅಲ್ಲ. ಅವರಿಬ್ಬರು ಈಗ ಚೆನ್ನೈನಲ್ಲಿ ಇಲ್ಲ. ಹೈದರಾಬಾದ್​​ನಲ್ಲಿ ಇದ್ದಾರೆ. ಅವರಿಗೆ ನಾನು ಒಂದಷ್ಟು ಸಲಹೆ ನೀಡಿದ್ದೇನೆ’ ಎಂದು ಕಸ್ತೂರಿ ರಾಜ ಹೇಳಿದ್ದರು.

ಇದನ್ನೂ ಓದಿ
Image
ಧನುಷ್ ತಮ್ಮ ಮಗನೆಂದು ಹೇಳಿಕೊಂಡಿದ್ದ ದಂಪತಿಗೆ ಸಂಕಷ್ಟ; 10 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ ನಟ
Image
Dhanush: ಧನುಷ್ ತಮ್ಮ ಮಗ ಎಂದು ಹೇಳಿಕೊಂಡ ದಂಪತಿ; ಮದ್ರಾಸ್ ಹೈಕೋರ್ಟ್​​ನಿಂದ ನಟನಿಗೆ ಸಮನ್ಸ್- ಏನಿದು ಪ್ರಕರಣ?
Image
ವಿಚ್ಛೇದನ ಬಳಿಕ ಮೊದಲ ಬಾರಿಗೆ ಮಾಜಿ ಪತ್ನಿ ಐಶ್ವರ್ಯಾಗೆ ಶುಭಾಶಯ ತಿಳಿಸಿದ ಧನುಷ್
Image
ಧನುಷ್​​ರಿಂದ ಬೇರ್ಪಟ್ಟ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಐಶ್ವರ್ಯಾ; ಇಲ್ಲಿದೆ ಫೋಟೋ

ಐಶ್ವರ್ಯಾ ​ಮತ್ತು ಧನುಷ್​ ಅವರಿಗೆ ಯಾತ್ರ ರಾಜ್​ ಮತ್ತು ಲಿಂಗ ರಾಜ್​ ಎಂಬ ಇಬ್ಬರು ಗಂಡು ಮಕ್ಕಳು ಇದ್ದಾರೆ. ಮಾಜಿ ದಂಪತಿ ಒಂದಾಗುತ್ತಿರುವ ವಿಷಯದ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!