AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​​ಟಿಆರ್ ಎದುರಾಗಿ ಸಿನಿಮಾ ಘೋಷಿಸಿದ ಧನುಶ್

Dhanush and Jr NTR: ಜೂ ಎನ್​​ಟಿಆರ್ ಸಿನಿಮಾಕ್ಕೆ ‘ಗಾಡ್ ಆಫ್ ವಾರ್’ ಎಂದು ಹೆಸರಿಡಲಾಗಿದೆ. ಆದರೆ ಈ ಸಿನಿಮಾದ ಟೀಸರ್ ಮತ್ತು ಪೋಸ್ಟರ್ ವಿವಾದ ಹುಟ್ಟುಹಾಕಿತ್ತು. ಸಿನಿಮಾಕ್ಕೆ ತಮಿಳುನಾಡಿನ ಜನ ಆಕ್ಷೇಪ ಎತ್ತಿದ್ದರು. ರಾಜಕಾರಣಿ ಸೀಮನ್ ಸಹ ಈ ಬಗ್ಗೆ ಕಟು ಟೀಕೆ, ನಿಂದೆಗಳನ್ನು ಮಾಡಿದ್ದರು. ಅದೆಲ್ಲ ಆದ ಬೆನ್ನಲ್ಲೆ ತಮಿಳು ನಟ ಧನುಶ್, ಜೂ ಎನ್​​ಟಿಆರ್ ಸಿನಿಮಾಕ್ಕೆ ಎದುರಾಗಿ ಮುರುಗನ್ ಕುರಿತಾಗಿಯೇ ಸಿನಿಮಾ ಘೋಷಿಸಿದ್ದಾರೆ.

ಜೂ ಎನ್​​ಟಿಆರ್ ಎದುರಾಗಿ ಸಿನಿಮಾ ಘೋಷಿಸಿದ ಧನುಶ್
Dhanush Jr Ntr
ಮಂಜುನಾಥ ಸಿ.
|

Updated on: Jul 29, 2026 | 7:18 PM

Share

ನಟ ಜೂ ಎನ್​​ಟಿಆರ್ (Jr NTR) ಪ್ರಸ್ತುತ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಜೂ ಎನ್​​ಟಿಆರ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಲಿರುವ ಸಿನಿಮಾನಲ್ಲಿ ಜೂ ಎನ್​​ಟಿಆರ್ ನಟಿಸಲಿದ್ದು, ಸಿನಿಮಾವು ಮುರುಗನ್ ದೇವರ ಕುರಿತು ಆಧರಿಸಿದ್ದಾಗಿದೆ. ಸಿನಿಮಾಕ್ಕೆ ‘ಗಾಡ್ ಆಫ್ ವಾರ್’ ಎಂದು ಹೆಸರಿಡಲಾಗಿದೆ. ಆದರೆ ಈ ಸಿನಿಮಾದ ಟೀಸರ್ ಮತ್ತು ಪೋಸ್ಟರ್ ವಿವಾದ ಹುಟ್ಟುಹಾಕಿತ್ತು. ಸಿನಿಮಾಕ್ಕೆ ತಮಿಳುನಾಡಿನ ಜನ ಆಕ್ಷೇಪ ಎತ್ತಿದ್ದರು. ರಾಜಕಾರಣಿ ಸೀಮನ್ ಸಹ ಈ ಬಗ್ಗೆ ಕಟು ಟೀಕೆ, ನಿಂದೆಗಳನ್ನು ಮಾಡಿದ್ದರು. ಅದೆಲ್ಲ ಆದ ಬೆನ್ನಲ್ಲೆ ತಮಿಳು ನಟ ಧನುಶ್, ಜೂ ಎನ್​​ಟಿಆರ್ ಸಿನಿಮಾಕ್ಕೆ ಎದುರಾಗಿ ಮುರುಗನ್ ಕುರಿತಾಗಿಯೇ ಸಿನಿಮಾ ಘೋಷಿಸಿದ್ದಾರೆ.

ಜೂ ಎನ್​​ಟಿಆರ್ ಅವರ ಸಿನಿಮಾನಲ್ಲಿ ಮುರುಗನ್ ಅನ್ನು ಉತ್ತರ ಭಾರತದ ಮೂಲದ ದೇವರು ಎಂದು ಹೇಳಲಾಗಿತ್ತು. ಇದಕ್ಕೆ ತೀವ್ರ ಆಕ್ಷೇಪವನ್ನು ಮುರುಗನ್ ಅನ್ನು ಆರಾಧ್ಯ ದೈವವಾಗಿ ಪೂಜಿಸುವ ತಮಿಳರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಧನುಶ್ ಅವರು ‘ತಮಿಳ್ ಮುರುಗನ್’ ಹೆಸರಿನಲ್ಲಿ ಸಿನಿಮಾ ಘೋಷಿಸಿದ್ದಾರೆ. ಧನುಶ್ ಅವರ ಸಿನಿಮಾ ಸಹ ಮುರುಗನ್ ದೇವರ ಕುರಿತಾಗಿಯೇ ಆಗಿದೆ. ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಧನುಶ್, ಕೈಯಲ್ಲಿ ಮುರುಗನ್ ದೇವರ ಆಯುಧ ಹಿಡಿದು ಆನೆಯ ಕೂತಿರುವ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ಮುರುಗನ್, ದಕ್ಷಿಣ ಭಾರತೀಯ, ಆತ ತಮಿಳುನಾಡಿನಲ್ಲೇ ಜನಿಸಿದ, ಇಲ್ಲಿಯೇ ನೆಲೆಸಿದ ದೇವರು ಎಂದು ತಮಿಳರು ವಾದಿಸಿದ್ದರು. ಆದರೆ ಜೂ ಎನ್​​ಟಿಆರ್ ಅವರ ಸಿನಿಮಾ ತಂಡದಿಂದ ಅಥವಾ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಅವರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅದರ ಬೆನ್ನಲ್ಲೆ ಈಗ ಧನುಶ್ ಸಿನಿಮಾ ಘೋಷಿಸಿದ್ದಾರೆ. ಮಾತ್ರವಲ್ಲದೆ, ಮುರುಗನ್, ತಮಿಳ ಎಂದು ಒತ್ತಿ ಹೇಳುವ ಸಲುವಾಗಿ ‘ತಮಿಳ್ ಮುರುಗನ್’ ಎಂದೇ ಸಿನಿಮಾಕ್ಕೆ ಹೆಸರಿಡಲಾಗಿದೆ.

ಇದನ್ನೂ ಓದಿ:ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ

ಈ ಸಿನಿಮಾ ಮೂಲಕ ಐದನೇ ಭಾರಿ ವೆಟ್ರಿಮಾರನ್ ಮತ್ತು ಧನುಶ್ ಒಂದಾಗುತ್ತಿದ್ದಾರೆ. ಈ ಹಿಂದೆ ಇವರಿಬ್ಬರು ಒಟ್ಟಿಗೆ ಕೆಲಸ ಮಾಡಿದ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗಿರುವ ಜೊತೆಗೆ ರಾಷ್ಟ್ರಪ್ರಶಸ್ತಿಗಳನ್ನು ಸಹ ಬಾಚಿಕೊಂಡಿವೆ. ‘ಪೊಲ್ಲಾಧವನ್’, ‘ಆಡುಕುಲಂ’, ‘ವಡಾ ಚೆನ್ನೈ’ ಮತ್ತು ‘ಅಸುರನ್’ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ. ಇದೀಗ ‘ತಮಿಳ್ ಮುರುಗನ್’ ಸಿನಿಮಾಕ್ಕೆ ಮತ್ತೊಮ್ಮೆ ಇವರಿಬ್ಬರೂ ಒಂದಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!