AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ಗೆ ಸಿನಿಮಾ ನಿರ್ದೇಶನ ಮಾಡುವ ಆಸೆ ಹೊರಹಾಕಿದ ಧನುಷ್

ಧನುಷ್ ಅವರು 'ರಾಯನ್' ಚಿತ್ರದ ಯಶಸ್ಸಿನ ನಂತರ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಜೂನ್ 20ರಂದು 'ಕುಬೇರ' ಸಿನಿಮಾ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ, ಪವನ್ ಕಲ್ಯಾಣ್ ಅವರ ಚಿತ್ರವನ್ನು ತೆಲುಗಿನಲ್ಲಿ ನಿರ್ದೇಶನ ಮಾಡುವ ಆಸೆಯನ್ನು ಧನುಷ್ ವ್ಯಕ್ತಪಡಿಸಿದ್ದಾರೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿರುವುದರಿಂದ ಈ ಯೋಜನೆ ಯಶಸ್ವಿಯಾಗುವುದೇ ಎಂಬುದು ಕಾದು ನೋಡಬೇಕಿದೆ.

ಪವನ್ ಕಲ್ಯಾಣ್​ಗೆ ಸಿನಿಮಾ ನಿರ್ದೇಶನ ಮಾಡುವ ಆಸೆ ಹೊರಹಾಕಿದ ಧನುಷ್
ಧನುಷ್-ಪವನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 17, 2025 | 11:10 AM

Share

ನಟ ಧನುಷ್ (Dhanush) ಅವರು ಈಗ ಕೇವಲ ನಟ ಮಾತ್ರ ಅಲ್ಲ. ಅವರು ಈಗ ಖ್ಯಾತ ನಿರ್ದೇಶಕರು ಕೂಡ ಹೌದು. ಈ ಮೊದಲು ಅವರು ನಿರ್ದೇಶನ ಮಾಡಿದ್ದ ‘ರಾಯನ್’ ಚಿತ್ರವು ಯಶಸ್ಸು ಕಂಡಿತು. ಇದರಿಂದ ಧನುಷ್ ಒಳ್ಳೆಯ ನಿರ್ದೇಶಕ ಎನಿಸಿಕೊಂಡರು. 2024ರಲ್ಲಿ ಈ ಚಿತ್ರವು ರಿಲೀಸ್ ಆಯಿತು. ಈಗ ಅವರ ನಟನೆಯ ‘ಕುಬೇರ’ ಸಿನಿಮಾ ಜೂನ್ 20ರಂದು ರಿಲೀಸ್ ಆಗಲಿದೆ. ಶೇಖರ್ ಕಮ್ಮುಲ್ಲಾ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಬ್ಯುಸಿ ಇದ್ದಾರೆ.  ಈ ವೇಳೆ ಪವನ್ ಕಲ್ಯಾಣ್​ಗೆ ಸಿನಿಮಾ ಮಾಡುವ ಆಸೆಯನ್ನು ಅವರು ಹೊರಹಾಕಿದ್ದಾರೆ.

ಇತ್ತೀಚೆಗೆ ‘ಕುಬೇರ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ನಡೆಯಿತು. ಈ ಚಿತ್ರದಲ್ಲಿ ನಾಗಾರ್ಜುನ ಕೂಡ ನಟಿಸಿದ್ದಾರೆ. ಹೀಗಾಗಿ, ಅದ್ದೂರಿಯಾಗಿ ಈವೆಂಟ್ ನಡೆದಿದೆ. ಧನುಷ್ ಅವರು ಪವನ್ ಕಲ್ಯಾಣ್​ಗೆ ನಟನೆಯ ಸಿನಿಮಾಗೆ ನಿರ್ದೇಶನ ಮಾಡುವ ಆಸೆಯನ್ನು ಹೊರಹಾಕಿದ್ದಾರೆ.

‘ನಾನು ಪವನ್ ಕಲ್ಯಾಣ್ ಸಿನಿಮಾಗೆ ತೆಲುಗಿನಲ್ಲೇ ನಿರ್ದೇಶನ ಮಾಡಬೇಕು’ ಎಂದು ಹೇಳಿದರು. ಇದನ್ನು ಕೇಳಿ ಅಲ್ಲಿದ್ದ ಎಲ್ಲರಿಗೂ ಅಚ್ಚರಿ ಆಯಿತು. ಇದಕ್ಕೆ ಯಾವಾಗ ಕಾಲ ಕೂಡಿ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
ಸಿನಿಮಾ ಸೆಟ್​ನಲ್ಲೇ ಹೀರೋನಾ ಮದುವೆ ಆಗಿದ್ರಾ ಜೆನಿಲಿಯಾ? ಉತ್ತರಿಸದ ನಟಿ
Image
ಶೋಭಿತಾ ಹಾಗೂ ನಾಗ ಚೈತನ್ಯರನ್ನು ನಿರ್ಲಕ್ಷಿಸಿದ್ರಾ ಮಹೇಶ್ ಬಾಬು?
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ
Image
ರವಿಚಂದ್ರನ್​ಗೆ ನೋವಾಗದಂತೆ ಸಿನಿಮಾ ಚೆನ್ನಾಗಿಲ್ಲ ಎಂದಿದ್ದ ತಂದೆ ವೀರಸ್ವಾಮಿ

ಪವನ್ ಕಲ್ಯಾಣ್ ಖ್ಯಾತ ಹೀರೋ. ಈಗಾಗಲೇ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳನ್ನು ಮಾಡೋದು ಕಷ್ಟ ಆಗುತ್ತಿದೆ. ಹೀಗಾಗಿ, ಮುಂದಿನ ಸಿನಿಮಾಗಳಿಗೆ ಅವರು ಕಾಲ್​ಶೀಟ್ ಕೊಡುವಾಗ ಆಲೋಚನೆ ಮಾಡುತ್ತಾರೆ.

ಪವನ್ ಕಲ್ಯಾಣ್ ಅವರು ಖ್ಯಾತ ಹೀರೋ. ಅವರ ಸಿನಿಮಾಗಳಿಗೆ ನಿರ್ದೇಶನ ಮಾಡಬೇಕು ಎಂದರೆ ಸಾಕಷ್ಟು ಅನುಭವ ಬೇಕು. ಧನುಷ್ ಹಿರೋ ಆಗಿ ಯಶಸ್ಸು ಕಂಡಿರಬಹುದು. ಆದರೆ, ನಿರ್ದೇಶಕನಾಗಿ ಪವನ್​ ಕಲ್ಯಾಣ್​ನ ಹ್ಯಾಂಡಲ್ ಮಾಡೋದು ಕಷ್ಟ ಆಗಲಿದೆ.

ಇದನ್ನೂ ಓದಿ: ‘ಕುಬೇರ’ ಪ್ರಚಾರ: ರಶ್ಮಿಕಾ ಮಂದಣ್ಣ ಕಾಲೆಳೆದ ನಟ ಧನುಶ್

‘ಕುಬೇರ’ ಚಿತ್ರವು ಜೂನ್ 20ರಂದು ರಿಲೀಸ್ ಆಗಲಿದೆ. ಈ ಸಿನಿಮಾಗೆ ಧನುಷ್ ಹೀರೋ. ಅವರ ಜೊತೆ ನಾಗಾರ್ಜುನ, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ವಾರಿಸು’ ಬಳಿಕ ರಶ್ಮಿಕಾ ಮತ್ತೆ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!