AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್’

ಜೂನ್ 20ರಂದು ಬಿಡುಗಡೆಯಾದ ‘ಕುಬೇರ’ ಮತ್ತು ‘ಸಿತಾರೆ ಜಮೀನ್ ಪರ್’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸು ಕಂಡಿದೆ. ಧನುಷ್ ನಟನೆಯ ‘ಕುಬೇರ’ ಚಿತ್ರವು ವಾರಾಂತ್ಯದಲ್ಲಿ ಅತ್ಯಧಿಕ ಗಳಿಕೆ ಮಾಡಿದೆ. ಆಮೀರ್ ಖಾನ್ ಅವರ ‘ಸಿತಾರೆ ಜಮೀನ್ ಪರ್’ ಚಿತ್ರವು ಕೂಡ ಪ್ರೇಕ್ಷಕರನ್ನು ಸೆಳೆದು ಒಳ್ಳೆಯ ಗಳಿಕೆಯನ್ನು ಮಾಡುತ್ತಿದೆ.

ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್’
ಆಮಿರ್-ಧನುಶ್
ರಾಜೇಶ್ ದುಗ್ಗುಮನೆ
|

Updated on: Jun 23, 2025 | 7:31 AM

Share

ಈಗಾಗಲೇ ಈ ವರ್ಷದ ಆರು ತಿಂಗಳು ಪೂರ್ಣಗೊಳ್ಳುತ್ತಿದೆ. ಆದರೆ, ಅತಿ ದೊಡ್ಡ ಗೆಲುವು ಎಂದು ಸಿಕ್ಕಿದ್ದು ಕಡಿಮೆ ಸಿನಿಮಾಗಳಿಗೆ. ಜೂನ್ 20ರಂದು ರಿಲೀಸ್ ಆದ ತಮಿಳಿನ ‘ಕುಬೇರ’ (Kubera Movie) ಹಾಗೂ ಹಿಂದಿಯ ‘ಸಿತಾರೆ ಜಮೀನ್ ಪರ್’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿವೆ. ಎರಡೂ ಸಿನಿಮಾಗಳು ವೀಕೆಂಡ್​ನಲ್ಲಿ ಜಾಕ್​ಪಾಟ್ ಹೊಡೆದಿವೆ. ವಾರದ ದಿನಗಳಲ್ಲೂ ಈ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಕುಬೇರನಾದ ‘ಕುಬೇರ’

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮೊದಲಾದವರು ನಟಿಸಿರೋ, ಶೇಖರ್ ಕಮ್ಮುಲ ನಿರ್ದೇಶನದ ‘ಕುಬೇರ’ ಸಿನಿಮಾ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಗಳಿಕೆ ಕೂಡ ಉತ್ತಮವಾಗುತ್ತಿದೆ. ಈ ಸಿನಿಮಾ ಮೊದಲ ದಿನ ಕೇವಲ 14.75 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಶನಿವಾರ ಹಾಗೂ ಭಾನುವಾರ ಸಿನಿಮಾ ಒಳ್ಳೆಯ ಕಮಾಯಿ ಮಾಡಿದೆ. ಶನಿವಾರ ಈ ಚಿತ್ರಕ್ಕೆ 16.5 ಕೋಟಿ ರೂಪಾಯಿ ಹಾಗೂ ಭಾನುವಾರ 17.25 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 48.50 ಆಗಿದೆ.

ಬುಕ್ ಮೈ ಶೋನಲ್ಲೂ ಸಿನಿಮಾ ಒಳ್ಳೆಯ ರೇಟಿಂಗ್ ಪಡೆದಿದೆ. ಈ ಸಿನಿಮಾಗೆ 35 ಸಾವಿರಕ್ಕೂ ಅಧಿಕ ಮಂದಿ ವೋಟ್ ಮಾಡಿದ್ದು, 8.6 ರೇಟಿಂಗ್ ಸಿಕ್ಕಿದೆ. ಬಾಯಿಮಾತಿನ ಪ್ರಚಾರದಿಂದ ಸಿನಿಮಾ ಕಲೆಕ್ಷನ್ ಹೆಚ್ಚುತ್ತಿದೆ.

ಇದನ್ನೂ ಓದಿ
Image
ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ
Image
ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಮೋದಿಗೆ ಸಲ್ಲುತ್ತೆ; ಪವನ್
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ

‘ಸಿತಾರೆ ಜಮೀನ್ ಪರ್’

‘ತಾರೇ ಜಮೀನ್ ಪರ್’ ಸಿನಿಮಾ ಈ ಮೊದಲು ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದೇ ನಂಬಿಕೆ ಮೇಲೆ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾ ಮಾಡಿದ್ದಾರೆ. ಹಾಸ್ಯ ಮತ್ತು ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಈ ಚಿತ್ರವನ್ನು ಆಮಿರ್ ಖಾನ್ ಮಾಡಿದ್ದಾರೆ. ಈ ಸಿನಿಮಾ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ಮೊದಲ ದಿನ ಆಮಿರ್ ಖಾನ್ ಸಿನಿಮಾ ‘ಸಿತಾರೆ ಜಮೀನ್ ಪರ್’ ಗಳಿಸಿದ್ದು ಎಷ್ಟು?

ಈ ಸಿನಿಮಾ ಮೊದಲ ದಿನ ಕೇವಲ 10.7 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಆದರೆ, ದಿನ ಕಳೆದಂತೆ ಸಿನಿಮಾದ ಗಳಿಕೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಶನಿವಾರ ಈ ಸಿನಿಮಾ 20.2 ಕೋಟಿ ರೂಪಾಯಿ ಹಾಗೂ ಬುಧವಾರ 29 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 60 ಕೋಟಿ ರೂಪಾಯಿಯಷ್ಟಾಗಿದೆ. ಈ ಚಿತ್ರದ ಮೂಲಕ ಆಮಿರ್ ಖಾನ್ ಅವರು ಗೆದ್ದು ಬೀಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ