AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್
ರೆಹಮಾನ್- ಧನುಷ್
Follow us
ರಾಜೇಶ್ ದುಗ್ಗುಮನೆ
|

Updated on: Jul 20, 2023 | 11:56 AM

ನಟ ಧನುಷ್ (Dhanush) ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ಅವರು ಚಿತ್ರದಿಂದ ಚಿತ್ರಕ್ಕೆ ಹೊಸ ಅವತಾರ ತಾಳುತ್ತಾರೆ. ಸದ್ಯ ‘ಕ್ಯಾಪ್ಟನ್ ಮಿಲ್ಲರ್’ (Captain Miller Movie) ಸಿನಿಮಾದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಜೊತೆಗೆ ಮುಂದಿನ ಚಿತ್ರ ‘D50’ ಕೆಲಸದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್ ಲೈವ್​ ಬಂದಿದ್ದರು. ಈ ವೇಳೆ ಅವರು ಅವರ ಮುಂದಿನ ಸಿನಿಮಾದ ಲುಕ್ ರಿವೀಲ್ ಮಾಡಲಾಗಿದೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.

ಧನುಷ್ ಹಾಗೂ ಎಆರ್​ ರೆಹಮಾನ್ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್ ಲೈವ್ ಬಂದಿದ್ದರು. 2013ರಲ್ಲಿ ರಿಲೀಸ್ ಆದ ‘ಮರಿಯಾನ್’ ಚಿತ್ರಕ್ಕೆ 10 ವರ್ಷಗಳ ಸಂಭ್ರಮ. ಇದರ ನೆನಪನ್ನು ಧನುಷ್ ಹಾಗೂ ರೆಹಮಾನ್ ಆಚರಿಸಿಕೊಂಡಿದ್ದರು. ಧನುಷ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದ ಈ ಚಿತ್ರಕ್ಕೆ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಇಬ್ಬರೂ ಲೈವ್ ಬಂದು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಧನುಷ್ ಅವರ ಲುಕ್ ಗಮನ ಸೆಳೆದಿದೆ.

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ. ಆದರೆ, ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈಗ ಅವರು ಲೈವ್ ಬಂದ ಸಂದರ್ಭದಲ್ಲಿ ತಲೆಗೆ ಟೋಪಿ ಹಾಕಿದ್ದರು. ಸದ್ಯ ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ

‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರ ಸ್ವಾತಂತ್ರ್ಯ ಪೂರ್ವ ಕಥೆಯನ್ನು ಹೊಂದಿದೆ. ಈ ಚಿತ್ರದಲ್ಲಿ ಕನ್ನಡದ ನಟ ಶಿವರಾಜ್​ಕುಮಾರ್ ಅಭಿನಯಿಸಿದ್ದಾರೆ. ಇಷ್ಟು ದಿನ ಕನ್ನಡ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಶಿವಣ್ಣ ಈಗ ತಮಿಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಕಾರಣಕ್ಕೂ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ