AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್
ರೆಹಮಾನ್- ಧನುಷ್
ರಾಜೇಶ್ ದುಗ್ಗುಮನೆ
|

Updated on: Jul 20, 2023 | 11:56 AM

Share

ನಟ ಧನುಷ್ (Dhanush) ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ಅವರು ಚಿತ್ರದಿಂದ ಚಿತ್ರಕ್ಕೆ ಹೊಸ ಅವತಾರ ತಾಳುತ್ತಾರೆ. ಸದ್ಯ ‘ಕ್ಯಾಪ್ಟನ್ ಮಿಲ್ಲರ್’ (Captain Miller Movie) ಸಿನಿಮಾದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಜೊತೆಗೆ ಮುಂದಿನ ಚಿತ್ರ ‘D50’ ಕೆಲಸದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್ ಲೈವ್​ ಬಂದಿದ್ದರು. ಈ ವೇಳೆ ಅವರು ಅವರ ಮುಂದಿನ ಸಿನಿಮಾದ ಲುಕ್ ರಿವೀಲ್ ಮಾಡಲಾಗಿದೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.

ಧನುಷ್ ಹಾಗೂ ಎಆರ್​ ರೆಹಮಾನ್ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್ ಲೈವ್ ಬಂದಿದ್ದರು. 2013ರಲ್ಲಿ ರಿಲೀಸ್ ಆದ ‘ಮರಿಯಾನ್’ ಚಿತ್ರಕ್ಕೆ 10 ವರ್ಷಗಳ ಸಂಭ್ರಮ. ಇದರ ನೆನಪನ್ನು ಧನುಷ್ ಹಾಗೂ ರೆಹಮಾನ್ ಆಚರಿಸಿಕೊಂಡಿದ್ದರು. ಧನುಷ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದ ಈ ಚಿತ್ರಕ್ಕೆ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಇಬ್ಬರೂ ಲೈವ್ ಬಂದು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಧನುಷ್ ಅವರ ಲುಕ್ ಗಮನ ಸೆಳೆದಿದೆ.

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ. ಆದರೆ, ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈಗ ಅವರು ಲೈವ್ ಬಂದ ಸಂದರ್ಭದಲ್ಲಿ ತಲೆಗೆ ಟೋಪಿ ಹಾಕಿದ್ದರು. ಸದ್ಯ ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ

‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರ ಸ್ವಾತಂತ್ರ್ಯ ಪೂರ್ವ ಕಥೆಯನ್ನು ಹೊಂದಿದೆ. ಈ ಚಿತ್ರದಲ್ಲಿ ಕನ್ನಡದ ನಟ ಶಿವರಾಜ್​ಕುಮಾರ್ ಅಭಿನಯಿಸಿದ್ದಾರೆ. ಇಷ್ಟು ದಿನ ಕನ್ನಡ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಶಿವಣ್ಣ ಈಗ ತಮಿಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಕಾರಣಕ್ಕೂ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ