AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್
ರೆಹಮಾನ್- ಧನುಷ್
ರಾಜೇಶ್ ದುಗ್ಗುಮನೆ
|

Updated on: Jul 20, 2023 | 11:56 AM

Share

ನಟ ಧನುಷ್ (Dhanush) ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ಅವರು ಚಿತ್ರದಿಂದ ಚಿತ್ರಕ್ಕೆ ಹೊಸ ಅವತಾರ ತಾಳುತ್ತಾರೆ. ಸದ್ಯ ‘ಕ್ಯಾಪ್ಟನ್ ಮಿಲ್ಲರ್’ (Captain Miller Movie) ಸಿನಿಮಾದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಜೊತೆಗೆ ಮುಂದಿನ ಚಿತ್ರ ‘D50’ ಕೆಲಸದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್ ಲೈವ್​ ಬಂದಿದ್ದರು. ಈ ವೇಳೆ ಅವರು ಅವರ ಮುಂದಿನ ಸಿನಿಮಾದ ಲುಕ್ ರಿವೀಲ್ ಮಾಡಲಾಗಿದೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.

ಧನುಷ್ ಹಾಗೂ ಎಆರ್​ ರೆಹಮಾನ್ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್ ಲೈವ್ ಬಂದಿದ್ದರು. 2013ರಲ್ಲಿ ರಿಲೀಸ್ ಆದ ‘ಮರಿಯಾನ್’ ಚಿತ್ರಕ್ಕೆ 10 ವರ್ಷಗಳ ಸಂಭ್ರಮ. ಇದರ ನೆನಪನ್ನು ಧನುಷ್ ಹಾಗೂ ರೆಹಮಾನ್ ಆಚರಿಸಿಕೊಂಡಿದ್ದರು. ಧನುಷ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದ ಈ ಚಿತ್ರಕ್ಕೆ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಇಬ್ಬರೂ ಲೈವ್ ಬಂದು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಧನುಷ್ ಅವರ ಲುಕ್ ಗಮನ ಸೆಳೆದಿದೆ.

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ. ಆದರೆ, ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈಗ ಅವರು ಲೈವ್ ಬಂದ ಸಂದರ್ಭದಲ್ಲಿ ತಲೆಗೆ ಟೋಪಿ ಹಾಕಿದ್ದರು. ಸದ್ಯ ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ

‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರ ಸ್ವಾತಂತ್ರ್ಯ ಪೂರ್ವ ಕಥೆಯನ್ನು ಹೊಂದಿದೆ. ಈ ಚಿತ್ರದಲ್ಲಿ ಕನ್ನಡದ ನಟ ಶಿವರಾಜ್​ಕುಮಾರ್ ಅಭಿನಯಿಸಿದ್ದಾರೆ. ಇಷ್ಟು ದಿನ ಕನ್ನಡ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಶಿವಣ್ಣ ಈಗ ತಮಿಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಕಾರಣಕ್ಕೂ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು