AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಗಳಿಸಿದ ‘ಕುಬೇರ’ ಆದರೂ ಧನುಶ್​ಗೆ ಭಾರಿ ಮುಖಭಂಗ

Kubera movie box office: ತಮಿಳು ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರಾದ ಧನುಶ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕುಬೇರ’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ 100 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾದ ಗೆಲುವು ಸಹಜವಾಗಿಯೇ ಚಿತ್ರತಂಡಕ್ಕೆ ಖುಷಿ ನೀಡಿದೆ. ಆದರೆ ಸಿನಿಮಾ ಗೆದ್ದರೂ ಸಹ ಧನುಶ್​ಗೆ ಇದರಿಂದ ಭಾರಿ ಮುಖಭಂಗ ಉಂಟಾಗಿದೆ. ಕಾರಣ?

100 ಕೋಟಿ ಗಳಿಸಿದ ‘ಕುಬೇರ’ ಆದರೂ ಧನುಶ್​ಗೆ ಭಾರಿ ಮುಖಭಂಗ
Dhanush Kubera
ಮಂಜುನಾಥ ಸಿ.
|

Updated on: Jun 28, 2025 | 4:54 PM

Share

ಧನುಶ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕುಬೇರ’ ಸಿನಿಮಾ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿದೆ. ಬಿಡುಗಡೆ ಆದ ಒಂದು ವಾರಕ್ಕೂ ಮುಂಚೆಯೇ ಬಾಕ್ಸ್ ಆಫೀಸ್​​ನಲ್ಲಿ 100 ಕೋಟಿ ರೂಪಾಯಿ ಬಾಚಿಕೊಂಡಿದೆ. ಧನುಶ್ ನಟನೆಯ ಸಿನಿಮಾ ಒಂದು ನೂರು ಕೋಟಿ ಗಳಿಸಿ ಬಹಳ ಸಮಯವಾಗಿತ್ತು. ‘ಕುಬೇರ’ ಮೂಲಕ ಧನುಶ್​ಗೆ ಗೆಲುವು ದೊರೆತಂತಾಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆ ಮಾಡಿದ್ದರೂ ಸಹ ಧನುಶ್​ಗೆ ಇದರಿಂದ ಭಾರಿ ಮುಖಭಂಗವೇ ಆಗಿದೆ. ಅದಕ್ಕೆ ಕಾರಣವೂ ಇದೆ.

‘ಕುಬೇರ’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಿತ್ತು. ಇದು ಮೂಲ ತೆಲುಗು ಸಿನಿಮಾ ಆಗಿದ್ದರೂ ಸಹ ಧನುಶ್ ಇರುವ ಕಾರಣಕ್ಕೆ ತಮಿಳುನಾಡಿನಲ್ಲೂ ಸಹ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ ‘ಕುಬೇರ’ ಸಿನಿಮಾ ಆಂಧ್ರ ಮತ್ತು ತೆಲಂಗಾಣಗಳಲ್ಲಿ ದೊಡ್ಡ ಹಿಟ್ ಆಗಿದೆ. ಆದರೆ ತಮಿಳುನಾಡಿನಲ್ಲಿ ಸಿನಿಮಾ ಫ್ಲಾಪ್ ಎನಿಸಿಕೊಂಡಿದೆ!

ಹೌದು, ತಮಿಳಿನ ಸ್ಟಾರ್ ನಟ ಮುಖ್ಯ ಪಾತ್ರದಲ್ಲಿ ಇದ್ದ ಹೊರತಾಗಿ. ಧನುಶ್ ಅದ್ಭುತ ನಟನೆ ನೀಡಿ, ಶೇಖರ್ ಕಮ್ಮುಲ ಒಂದೊಳ್ಳೆ ಕತೆಯುಳ್ಳ ಸಿನಿಮಾ ಕೊಟ್ಟ ಹೊರತಾಗಿಯೂ ಸಹ ತಮಿಳುನಾಡಿನಲ್ಲಿ ಸಿನಿಮಾ ಒಳ್ಳೆಯ ಪ್ರದರ್ಶನ ಕಂಡಿಲ್ಲ. ಇದು ಧನುಶ್​ಗೆ ಇರುವ ಕಡಿಮೆ ಜನಪ್ರಿಯತೆ ಅಥವಾ ಸ್ಟಾರ್​ಡಂ ಅನ್ನು ಎತ್ತಿ ತೋರುತ್ತಿದೆ. ‘ಕುಬೇರ’ ಸಿನಿಮಾನಲ್ಲಿ ಧನುಶ್ ಜೊತೆಗೆ ಅಕ್ಕಿನೇನಿ ನಾಗಾರ್ಜುನ ಸಹ ನಟಿಸಿದ್ದರು. ಅಕ್ಕಿನೇನಿ ಅಭಿಮಾನಿಗಳು, ಶೇಖರ್ ಕಮ್ಮುಲ ಅಭಿಮಾನಿಗಳು ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ. ಆದರೆ ಒಳ್ಳೆಯ ಸಿನಿಮಾ ಆಗಿರುವ ಹೊರತಾಗಿಯೂ ಧನುಶ್​ಗೆ ತಮಿಳುನಾಡಿನಲ್ಲಿ ಸಿನಿಮಾ ಅನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:‘ಕುಬೇರ’ ಪ್ರಚಾರ: ರಶ್ಮಿಕಾ ಮಂದಣ್ಣ ಕಾಲೆಳೆದ ನಟ ಧನುಶ್

ಸಿನಿಮಾ ಬಿಡುಗಡೆ ಆದ ದಿನ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳು ಸೇರಿ 12 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ತಮಿಳು ಹೀರೋ ಸಿನಿಮಾ ಆಗಿದ್ದರೂ ಸಹ ತೆಲುಗು ರಾಜ್ಯಗಳ ಜನ ‘ಕುಬೇರ’ ಸಿನಿಮಾವನ್ನು ಮುಗಿಬಿದ್ದು ನೋಡಿದ್ದರು. ಅದೇ ದಿನ ತಮಿಳುನಾಡಿನಲ್ಲಿ ಗಳಿಕೆ ಆಗಿದ್ದು ಕೇವಲ 4 ಕೋಟಿ. ಈ ವರೆಗೂ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ‘ಕುಬೇರ’ ಸಿನಿಮಾ ಸುಮಾರು 60 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಆದರೆ ತಮಿಳುನಾಡಿನಲ್ಲಿ ‘ಕುಬೇರ’ ಸಿನಿಮಾ ಗಳಿಸಿರುವುದು 18 ಕೋಟಿ ಮಾತ್ರ.

ಇದೇ ಸಿನಿಮಾ ಕರ್ನಾಟಕದಲ್ಲಿ ಸುಮಾರು 9 ಕೋಟಿ ರೂಪಾಯಿಗಳು, ಕೇರಳದಲ್ಲಿ ಎರಡು ಕೋಟಿ ಮತ್ತು ಹೊರದೇಶಗಳಲ್ಲಿ ಸುಮಾರು 30 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದೆ. ‘ಕುಬೇರ’ ಸಿನಿಮಾ ಸಮಾಜದಲ್ಲಿರುವ ಬಡವ-ಶ್ರೀಮಂತರ ನಡುವಿನ ಭೇದದ ಬಗ್ಗೆ ಚರ್ಚೆ ಮಾಡುವ ಸಿನಿಮಾ ಆಗಿದೆ. ಸಿನಿಮಾನಲ್ಲಿ ಧನುಶ್ ನಾಯಕ. ಅಕ್ಕಿನೇನಿ ನಾಗಾರ್ಜುನ್ ಸಹ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?