AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ

ಧನುಷ್ ಅವರ ‘ಇಡ್ಲಿ ಕಡಾಯಿ’ ಚಿತ್ರವು ಅಕ್ಟೋಬರ್ 1 ರಂದು ಬಿಡುಗಡೆಯಾಗುತ್ತಿದೆ. ಅದೇ ಸಮಯದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಿಡುಗಡೆಯೂ ಇದೆ. ಈ ಎರಡು ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಸ್ಪರ್ಧೆ ಏರ್ಪಡೋ ಸಾಧ್ಯತೆ ಇದೆ. ಧನುಷ್ ಅವರು ನಿರ್ದೇಶಿಸಿರುವ ಈ ಚಿತ್ರದಲ್ಲಿ ದುಶಾರಾ ವಿಜಯನ್ ನಾಯಕಿಯಾಗಿ ನಟಿಸಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ
ರಿಷಬ್
ರಾಜೇಶ್ ದುಗ್ಗುಮನೆ
|

Updated on:Sep 04, 2025 | 8:23 AM

Share

ಯಾವುದಾದರೂ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಆ ಸಂದರ್ಭದಲ್ಲಿ ಬೇರೆ ಸಿನಿಮಾಗಳನ್ನು ರಿಲೀಸ್ ಮಾಡಲು ಅಷ್ಟಾಗಿ ಆದ್ಯತೆ ನೀಡೋದಿಲ್ಲ. ಹಾಗೆ ಮಾಡಿದರೆ ಬಿಸ್ನೆಸ್​ಗೆ ದೊಡ್ಡ ಹೊಡೆತ ಉಂಟಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಇಂಥ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಈಗ ತಮಿಳು ನಟ ಧನುಶ್ ಅವರು ‘ಕಾಂತಾರ: ಚಾಪ್ಟರ್ 1’ (Kantara: Chapter 1) ಎದುರು ತಮ್ಮ ‘ಇಡ್ಲಿ ಕಡಾಯಿ’ ಸಿನಿಮಾ ರಿಲೀಸ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನವೂ ಇದೆ.

ಧನುಶ್ ಅವರು ಹಲವು ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.    ಕಳೆದ ವರ್ಷ ಅವರ ನಿರ್ದೇಶನದ ಮೊದಲ ಚಿತ್ರ ‘ರಾಯನ್’ ತೆರೆಗೆ ಬಂದಿತ್ತು. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಈ ಬೆನ್ನಲ್ಲೇ ಅವರು ‘ಇಡ್ಲಿ ಕಡಾಯಿ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಧನುಶ್ ಅವರು ಅಕ್ಟೋಬರ್ 1ಕ್ಕೆ ‘ಇಡ್ಲಿ ಕಡಾಯಿ’ ಸಿನಿಮಾ ರಿಲೀಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ದುಶಾರಾ ವಿಜಯನ್ ನಾಯಕಿ. ಇದಕ್ಕೆ ಧನುಶ್ ಅವರದ್ದೇ ನಿರ್ದೇಶನ ಇರುವುದರಿಂದ ನಿರೀಕ್ಷೆ ಸೃಷ್ಟಿಸಿದೆ. ಈ ಮಧ್ಯೆ ‘ಕಾಂತಾರ: ಚಾಪ್ಟರ್ 1’ ಸ್ಪರ್ಧೆಯನ್ನು ಈ ಚಿತ್ರ ಸಹಿಸಿಕೊಳ್ಳಲು ಸಾಧ್ಯವಾದೀತೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು
Image
ಸಕ್ಸಸ್ ಅನ್ನೋದು ಇಂದಿಗೂ ನಂಗೆ ದೊಡ್ಡ ಯಕ್ಷ ಪ್ರಶ್ನೆ; ಸೃಜನ್ ಲೋಕೇಶ್
Image
ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್

‘ಕಾಂತಾರ’ ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಗಮನ ಸೆಳೆದಿತ್ತು. ಈಗ ಅದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬರುತ್ತಿದ್ದು, ಅಕ್ಟೋಬರ್ 2ಕ್ಕೆ ರಿಲೀಸ್. ಈ ಸಿನಿಮಾದ ಬಗ್ಗೆ ತಮಿಳು ಮಂದಿಗೂ ನಿರೀಕ್ಷೆ ಇದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಅಬ್ಬರದ ಮಧ್ಯೆ ‘ಇಡ್ಲಿ ಕಡಾಯಿ’ ಸಿನಿಮಾ ಕಳೆದು ಹೋದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ತೆಲುಗು ರಾಜ್ಯಗಳಲ್ಲಿ ‘ಕಾಂತಾರ ಚಾಪ್ಟರ್ 1’ಗೆ ಭಾರಿ ಬೇಡಿಕೆ, ಸೇಲ್ ಆಗಿದ್ದೆಷ್ಟಕ್ಕೆ?

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಇದೆ. ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ. ಹಲವು ಪರಭಾಷಾ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Thu, 4 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ