AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ

ಧನುಷ್ ಅವರ ‘ಇಡ್ಲಿ ಕಡಾಯಿ’ ಚಿತ್ರವು ಅಕ್ಟೋಬರ್ 1 ರಂದು ಬಿಡುಗಡೆಯಾಗುತ್ತಿದೆ. ಅದೇ ಸಮಯದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಿಡುಗಡೆಯೂ ಇದೆ. ಈ ಎರಡು ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಸ್ಪರ್ಧೆ ಏರ್ಪಡೋ ಸಾಧ್ಯತೆ ಇದೆ. ಧನುಷ್ ಅವರು ನಿರ್ದೇಶಿಸಿರುವ ಈ ಚಿತ್ರದಲ್ಲಿ ದುಶಾರಾ ವಿಜಯನ್ ನಾಯಕಿಯಾಗಿ ನಟಿಸಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ
ರಿಷಬ್
ರಾಜೇಶ್ ದುಗ್ಗುಮನೆ
|

Updated on:Sep 04, 2025 | 8:23 AM

Share

ಯಾವುದಾದರೂ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಆ ಸಂದರ್ಭದಲ್ಲಿ ಬೇರೆ ಸಿನಿಮಾಗಳನ್ನು ರಿಲೀಸ್ ಮಾಡಲು ಅಷ್ಟಾಗಿ ಆದ್ಯತೆ ನೀಡೋದಿಲ್ಲ. ಹಾಗೆ ಮಾಡಿದರೆ ಬಿಸ್ನೆಸ್​ಗೆ ದೊಡ್ಡ ಹೊಡೆತ ಉಂಟಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಇಂಥ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಈಗ ತಮಿಳು ನಟ ಧನುಶ್ ಅವರು ‘ಕಾಂತಾರ: ಚಾಪ್ಟರ್ 1’ (Kantara: Chapter 1) ಎದುರು ತಮ್ಮ ‘ಇಡ್ಲಿ ಕಡಾಯಿ’ ಸಿನಿಮಾ ರಿಲೀಸ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನವೂ ಇದೆ.

ಧನುಶ್ ಅವರು ಹಲವು ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.    ಕಳೆದ ವರ್ಷ ಅವರ ನಿರ್ದೇಶನದ ಮೊದಲ ಚಿತ್ರ ‘ರಾಯನ್’ ತೆರೆಗೆ ಬಂದಿತ್ತು. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಈ ಬೆನ್ನಲ್ಲೇ ಅವರು ‘ಇಡ್ಲಿ ಕಡಾಯಿ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಧನುಶ್ ಅವರು ಅಕ್ಟೋಬರ್ 1ಕ್ಕೆ ‘ಇಡ್ಲಿ ಕಡಾಯಿ’ ಸಿನಿಮಾ ರಿಲೀಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ದುಶಾರಾ ವಿಜಯನ್ ನಾಯಕಿ. ಇದಕ್ಕೆ ಧನುಶ್ ಅವರದ್ದೇ ನಿರ್ದೇಶನ ಇರುವುದರಿಂದ ನಿರೀಕ್ಷೆ ಸೃಷ್ಟಿಸಿದೆ. ಈ ಮಧ್ಯೆ ‘ಕಾಂತಾರ: ಚಾಪ್ಟರ್ 1’ ಸ್ಪರ್ಧೆಯನ್ನು ಈ ಚಿತ್ರ ಸಹಿಸಿಕೊಳ್ಳಲು ಸಾಧ್ಯವಾದೀತೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು
Image
ಸಕ್ಸಸ್ ಅನ್ನೋದು ಇಂದಿಗೂ ನಂಗೆ ದೊಡ್ಡ ಯಕ್ಷ ಪ್ರಶ್ನೆ; ಸೃಜನ್ ಲೋಕೇಶ್
Image
ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್

‘ಕಾಂತಾರ’ ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಗಮನ ಸೆಳೆದಿತ್ತು. ಈಗ ಅದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬರುತ್ತಿದ್ದು, ಅಕ್ಟೋಬರ್ 2ಕ್ಕೆ ರಿಲೀಸ್. ಈ ಸಿನಿಮಾದ ಬಗ್ಗೆ ತಮಿಳು ಮಂದಿಗೂ ನಿರೀಕ್ಷೆ ಇದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಅಬ್ಬರದ ಮಧ್ಯೆ ‘ಇಡ್ಲಿ ಕಡಾಯಿ’ ಸಿನಿಮಾ ಕಳೆದು ಹೋದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ತೆಲುಗು ರಾಜ್ಯಗಳಲ್ಲಿ ‘ಕಾಂತಾರ ಚಾಪ್ಟರ್ 1’ಗೆ ಭಾರಿ ಬೇಡಿಕೆ, ಸೇಲ್ ಆಗಿದ್ದೆಷ್ಟಕ್ಕೆ?

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಇದೆ. ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ. ಹಲವು ಪರಭಾಷಾ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Thu, 4 September 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ