AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ

ಧನುಷ್ ಅವರ ‘ಇಡ್ಲಿ ಕಡಾಯಿ’ ಚಿತ್ರವು ಅಕ್ಟೋಬರ್ 1 ರಂದು ಬಿಡುಗಡೆಯಾಗುತ್ತಿದೆ. ಅದೇ ಸಮಯದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಿಡುಗಡೆಯೂ ಇದೆ. ಈ ಎರಡು ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಸ್ಪರ್ಧೆ ಏರ್ಪಡೋ ಸಾಧ್ಯತೆ ಇದೆ. ಧನುಷ್ ಅವರು ನಿರ್ದೇಶಿಸಿರುವ ಈ ಚಿತ್ರದಲ್ಲಿ ದುಶಾರಾ ವಿಜಯನ್ ನಾಯಕಿಯಾಗಿ ನಟಿಸಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ
ರಿಷಬ್
ರಾಜೇಶ್ ದುಗ್ಗುಮನೆ
|

Updated on:Sep 04, 2025 | 8:23 AM

Share

ಯಾವುದಾದರೂ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಆ ಸಂದರ್ಭದಲ್ಲಿ ಬೇರೆ ಸಿನಿಮಾಗಳನ್ನು ರಿಲೀಸ್ ಮಾಡಲು ಅಷ್ಟಾಗಿ ಆದ್ಯತೆ ನೀಡೋದಿಲ್ಲ. ಹಾಗೆ ಮಾಡಿದರೆ ಬಿಸ್ನೆಸ್​ಗೆ ದೊಡ್ಡ ಹೊಡೆತ ಉಂಟಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಇಂಥ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಈಗ ತಮಿಳು ನಟ ಧನುಶ್ ಅವರು ‘ಕಾಂತಾರ: ಚಾಪ್ಟರ್ 1’ (Kantara: Chapter 1) ಎದುರು ತಮ್ಮ ‘ಇಡ್ಲಿ ಕಡಾಯಿ’ ಸಿನಿಮಾ ರಿಲೀಸ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನವೂ ಇದೆ.

ಧನುಶ್ ಅವರು ಹಲವು ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.    ಕಳೆದ ವರ್ಷ ಅವರ ನಿರ್ದೇಶನದ ಮೊದಲ ಚಿತ್ರ ‘ರಾಯನ್’ ತೆರೆಗೆ ಬಂದಿತ್ತು. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಈ ಬೆನ್ನಲ್ಲೇ ಅವರು ‘ಇಡ್ಲಿ ಕಡಾಯಿ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಧನುಶ್ ಅವರು ಅಕ್ಟೋಬರ್ 1ಕ್ಕೆ ‘ಇಡ್ಲಿ ಕಡಾಯಿ’ ಸಿನಿಮಾ ರಿಲೀಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ದುಶಾರಾ ವಿಜಯನ್ ನಾಯಕಿ. ಇದಕ್ಕೆ ಧನುಶ್ ಅವರದ್ದೇ ನಿರ್ದೇಶನ ಇರುವುದರಿಂದ ನಿರೀಕ್ಷೆ ಸೃಷ್ಟಿಸಿದೆ. ಈ ಮಧ್ಯೆ ‘ಕಾಂತಾರ: ಚಾಪ್ಟರ್ 1’ ಸ್ಪರ್ಧೆಯನ್ನು ಈ ಚಿತ್ರ ಸಹಿಸಿಕೊಳ್ಳಲು ಸಾಧ್ಯವಾದೀತೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು
Image
ಸಕ್ಸಸ್ ಅನ್ನೋದು ಇಂದಿಗೂ ನಂಗೆ ದೊಡ್ಡ ಯಕ್ಷ ಪ್ರಶ್ನೆ; ಸೃಜನ್ ಲೋಕೇಶ್
Image
ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್

‘ಕಾಂತಾರ’ ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಗಮನ ಸೆಳೆದಿತ್ತು. ಈಗ ಅದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬರುತ್ತಿದ್ದು, ಅಕ್ಟೋಬರ್ 2ಕ್ಕೆ ರಿಲೀಸ್. ಈ ಸಿನಿಮಾದ ಬಗ್ಗೆ ತಮಿಳು ಮಂದಿಗೂ ನಿರೀಕ್ಷೆ ಇದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಅಬ್ಬರದ ಮಧ್ಯೆ ‘ಇಡ್ಲಿ ಕಡಾಯಿ’ ಸಿನಿಮಾ ಕಳೆದು ಹೋದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ತೆಲುಗು ರಾಜ್ಯಗಳಲ್ಲಿ ‘ಕಾಂತಾರ ಚಾಪ್ಟರ್ 1’ಗೆ ಭಾರಿ ಬೇಡಿಕೆ, ಸೇಲ್ ಆಗಿದ್ದೆಷ್ಟಕ್ಕೆ?

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಇದೆ. ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ. ಹಲವು ಪರಭಾಷಾ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Thu, 4 September 25

Follow Us
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ