AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಥಗ್ ಲೈಫ್’ ಸಿನಿಮಾ ಮೊದಲ ದಿನದ ಗಳಿಕೆ ಹಿಂದಿಕ್ಕಲು ವಿಫಲವಾದ ‘ಕುಬೇರ’, ‘ಸಿತಾರೇ ಜಮೀನ್ ಪರ್’

ಜೂನ್ 20 ರಂದು ಬಿಡುಗಡೆಯಾದ ಧನುಷ್ ನಟನೆಯ ‘ಕುಬೇರ’ ಮತ್ತು ಆಮಿರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿವೆ. ಈ ಎರಡೂ ಚಿತ್ರಗಳು ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಉತ್ತಮ ಗಳಿಕೆ ಮಾಡುವ ನಿರೀಕ್ಷೆಯಿದೆ.

‘ಥಗ್ ಲೈಫ್’ ಸಿನಿಮಾ ಮೊದಲ ದಿನದ ಗಳಿಕೆ ಹಿಂದಿಕ್ಕಲು ವಿಫಲವಾದ ‘ಕುಬೇರ’, ‘ಸಿತಾರೇ ಜಮೀನ್ ಪರ್’
 ‘ಥಗ್ ಲೈಫ್’ ಸಿನಿಮಾ ಗಳಿಕೆ ಹಿಂದಿಕ್ಕಲು ವಿಫಲವಾದ ‘ಕುಬೇರ’, ‘ಸಿತಾರೇ ಜಮೀನ್ ಪರ್’
ರಾಜೇಶ್ ದುಗ್ಗುಮನೆ
|

Updated on: Jun 21, 2025 | 7:01 AM

Share

ಈ ಮೊದಲು ರಿಲೀಸ್ ಆಗಿ ಫ್ಲಾಪ್ ಎನಿಸಿಕೊಂಡಿದ್ದ ‘ಥಗ್ ಲೈಫ್’ (Thuf Life Movie) ಚಿತ್ರ ಮೊದಲ ದಿನ 15 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಸಿನಿಮಾ ನಂತರದ ದಿನಗಳಲ್ಲಿ ಹೀನಾಯ ಕಲೆಕ್ಷನ್ ಮಾಡಿತು. ಈ ಚಿತ್ರ ಇನ್ನೂ 50 ಕೋಟಿ ರೂಪಾಯಿ ಗಳಿಸಲು ಸಾಧ್ಯವಾಗಿಲ್ಲ. ಈ ಸಿನಿಮಾ ರಿಲೀಸ್ ಆದ ಎರಡು ವಾರಗಳ ಬಳಿಕ ಎರಡು ಸಿನಿಮಾಗಳು ರಿಲೀಸ್ ಆಗಿವೆ. ಜೂನ್ 20ರಂದು ಧನುಶ್ ನಟನೆಯ ‘ಕುಬೇರ’ ಹಾಗೂ ಆಮಿರ್ ಖಾನ್ ಅಭಿನಯದ ‘ಸಿತಾರೇ ಜಮೀನ್ ಪರ್’ ಸಿನಿಮಾಗಳು ತೆರೆಗೆ ಬಂದಿವೆ.  ಈ ಎರಡೂ ಸಿನಿಮಾಗಳ ಮೊದಲ ದಿನದ ಕಲೆಕ್ಷನ್​ನಲ್ಲಿ ‘ಥಗ್ ಲೈಫ್’ ಚಿತ್ರವನ್ನು ಹಿಂದಿಕ್ಕಿಲ್ಲ.

‘ಕುಬೇರ’ ಸಿನಿಮಾ ಗಳಿಕೆ

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮೊದಲಾದವರು ನಟಿಸಿರೋ ‘ಕುಬೇರ’ ಸಿನಿಮಾ ಜೂನ್ 20ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 13 ಕೋಟಿ ರೂಪಾಯಿ. ಈ ಮೂಲಕ ಧನುಶ್ ಚಿತ್ರ ಸಾಧಾರಣ ಓಪನಿಂಗ್ ಪಡೆದುಕೊಂಡಿದೆ.

‘ಕುಬೇರ’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ರೇಟಿಂಗ್ ನೀಡಿದ್ದು, 8.7 ರೇಟಿಂಗ್ ಸಿಕ್ಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಸಿನಿಮಾ ಒಳ್ಳೆಯ ಗಳಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ಚಿತ್ರ ಅನಾಯಾಸವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್​ಬೈ; ಹೊಸ ಕಲಾವಿದೆ ಇವರೇ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ಇದನ್ನೂ ಓದಿ: ಭಿಕ್ಷುಕನ ವೇಷ ಧರಿಸಲು ಕೋಟಿ ಕೋಟಿ ಸಂಭಾವನೆ ಪಡೆದ ಧನುಶ್

‘ಸಿತಾರೇ ಜಮೀನ್ ಪರ್’

ಆಮಿರ್ ಖಾನ್ ನಟನೆಯ ‘ಸಿತಾರೇ ಜಮೀನ್ ಪರ್’ ಚಿತ್ರ ಕೂಡ ಶುಕ್ರವಾರ ತೆರೆಗೆ ಬಂದಿದೆ. ಈ ಸಿನಿಮಾ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಈ ಸಿನಿಮಾ ಮೊದ ದಿನ 11.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆಮಿರ್ ಖಾನ್ ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ಈ ರೀತಿಯ ಭಿನ್ನ ಪ್ರಯೋಗ ಮಾಡಿದಾಗ ಸಿನಿಮಾದ ಗಳಿಕೆ ಆಗಲು ಹೆಚ್ಚಿನ ಸಮಯ ಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!