AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು

Dhanveer Gowda movie: ದರ್ಶನ್ ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ.

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು
Hayagreeva
ಮಂಜುನಾಥ ಸಿ.
|

Updated on: Feb 27, 2026 | 9:35 AM

Share

ದರ್ಶನ್ (Darshan) ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ.

‘ಹಯಗ್ರೀವ’ ಸಿನಿಮಾ ಇಂದು (ಫೆಬ್ರವರಿ 27) ಬಿಡುಗಡೆ ಆಗಬೇಕಿತ್ತು, ಆದರೆ ಸೆನ್ಸಾರ್ ಸಮಸ್ಯೆಯಿಂದಾಗಿ ಸಿನಿಮಾದ ಮೊದಲ ಎರಡು ಶೋಗಳು ಅಂದರೆ ಬೆಳಿಗ್ಗೆ 10:30 ಮತ್ತು ಮಧ್ಯಾಹ್ನ 1:30ಗೆ ಪ್ರದರ್ಶನ ಆಗಬೇಕಿದ್ದ ಶೋಗಳು ರದ್ದಾಗಿವೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಚಿತ್ರತಂಡ, ‘ಅನಿವಾರ್ಯ ಕಾರಣಗಳಿಂದ ನಮ್ಮ ಸಿನಿಮಾದ ದಿನದ ಮೊದಲ ಎರಡೂ ಶೋಗಳು ರದ್ದಾಗಿದ್ದು, ಸಂಜೆ 4:30ರ ಶೋನಿಂದ ರಾಜ್ಯದಾದ್ಯಂತ ಅದ್ಧೂರಿಯಾಗಿ ಪ್ರಾರಂಭ ಆಗುತ್ತವೆ, ನೋಡಿ ಹರಸಿ’ ಎಂದಿದ್ದಾರೆ ನಟ ಧನ್ವೀರ್.

ಧನ್ವೀರ್ ಗೌಡ ನಟಿಸಿರುವ ‘ಹಯಗ್ರೀವ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಎದುರಾಗಿರುವ ಕಾರಣದಿಂದಾಗಿ ಸಿನಿಮಾದ ಬಿಡುಗಡೆ ತಡವಾಗುತ್ತಿದೆ. ‘ಹಯಗ್ರೀವ’ ಸಿನಿಮಾನಲ್ಲಿ ಹಿಂದೂ ದೇವತೆಗಳ ಉಲ್ಲೇಖ ಇದೆಯಂತೆ. ಕೆಲವು ದೃಶ್ಯಗಳಲ್ಲಿ ಹಿಂದೂ ದೇವತೆಗಳ ಚಿತ್ರಗಳನ್ನು ಅಥವಾ ಮುಖವನ್ನು ತಿರುಚಿರುವ ದೃಶ್ಯಗಳು ಸಹ ಇವೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸೆನ್ಸಾರ್ ಮಂಡಳಿಯು ಸಿನಿಮಾವನ್ನು ರಿವೈಸ್ ಕಮಿಟಿಗೆ ಕಳಿಸಿದ್ದು, ರಿವೈಸ್ ಕಮಿಟಿ ಸಿನಿಮಾ ನೋಡಿದ ಬಳಿಕವಷ್ಟೆ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಗಲಿದೆ. ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ವಿಳಂಬ ಆಗುತ್ತಿದೆ.

ಇದನ್ನೂ ಓದಿ:ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ..

ನಿಯಮದ ಪ್ರಕಾರ ರಿವೈಸ್ ಕಮಿಟಿಯವರಿಗೆ ಸಿನಿಮಾವನ್ನು ನೋಡಿ ಕಟ್​​ಗಳನ್ನು ಸೂಚಿಸಲು ಅಥವಾ ಪ್ರಮಾಣ ಪತ್ರ ನೀಡಲು ಹದಿನೈದು ದಿನಗಳ ಕಾಲಾವಕಾಶ ಇರುತ್ತದೆ ಎನ್ನಲಾಗಿದೆ. ಆದರೆ ರಿವೈಸ್ ಕಮಿಟಿಯವರು ಇಂದೇ ಸೆನ್ಸಾರ್ ಪ್ರಮಾಣ ಪತ್ರ ನೀಡುವ ಭರವಸೆಯಲ್ಲಿರುವ ‘ಹಯಗ್ರೀವ’ ಚಿತ್ರತಂಡ ಇಂದು ಸಂಜೆಯಿಂದಲೇ ಪದರ್ಶನ ಆರಂಭಿಸುವುದಾಗಿ ಭರವಸೆ ನೀಡಿವೆ.

‘ಹಯಗ್ರೀವ’ ಸಿನಿಮಾನಲ್ಲಿ ಧನ್ವೀರ್ ಗೌಡ ಮತ್ತು ಸಂಜನಾ ಆನಂದ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರವುದು ರಘು ಕುಮಾರ್, ಸಿನಿಮಾನಲ್ಲಿ ಶರತ್ ಲೋಹಿತಾಶ್ವ, ಸಾಧುಕೋಕಿಲ, ಶೋಭರಾಜ್ ಇನ್ನೂ ಹಲವು ಕಲಾವಿದರು ನಟಿಸಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಸಮೃದ್ಧಿ ಮಂಜುನಾಥ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ