AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣಕ್ಕೆ ಕಾಲಿಟ್ಟ ಬಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆ

South Indian movie Industry: ಕರಣ್ ಜೋಹರ್ ಅವರ ತಂದೆ ಸ್ಥಾಪಿಸಿದ್ದ ಧರ್ಮಾ ಪ್ರೊಡಕ್ಷನ್ಸ್ ಬಾಲಿವುಡ್​ನ ಬಲು ದೊಡ್ಡ ನಿರ್ಮಾಣ ಸಂಸ್ಥೆ, ನೂರಾರು ಹಿಂದಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಈ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ಮೇಲೆ ನೇರವಾಗಿ ಬಂಡವಾಳ ತೊಡಗಿಸಿದೆ. ಕಳೆದ ಕೆಲ ವರ್ಷಗಳಿಂದ ದಕ್ಷಿಣದ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ವಿತರಣೆ ಮಾತ್ರ ಮಾಡುತ್ತಿದ್ದ ಧರ್ಮಾ, ಈಗ ನೇರವಾಗಿ ಚಿತ್ರ ನಿರ್ಮಾಣಕ್ಕೆ ಇಳಿದಿದೆ.

ದಕ್ಷಿಣಕ್ಕೆ ಕಾಲಿಟ್ಟ ಬಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆ
Dharma Productions
ಮಂಜುನಾಥ ಸಿ.
|

Updated on: Jun 16, 2026 | 6:29 PM

Share

ದಶಕಗಳಿಂದಲೂ ಹಿಂದಿ ಸಿನಿಮಾ (Cinema) ನಿರ್ಮಾಣದಲ್ಲಿ ತೊಡಗಿಕೊಂಡಿರುವ ದೊಡ್ಡ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ಕರಣ್ ಜೋಹರ್ ಅವರ ತಂದೆ ಸ್ಥಾಪಿಸಿದ್ದ ಧರ್ಮಾ ಪ್ರೊಡಕ್ಷನ್ಸ್ ಬಾಲಿವುಡ್​ನ ಬಲು ದೊಡ್ಡ ನಿರ್ಮಾಣ ಸಂಸ್ಥೆ, ನೂರಾರು ಹಿಂದಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಈ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ಮೇಲೆ ನೇರವಾಗಿ ಬಂಡವಾಳ ತೊಡಗಿಸಿದೆ. ಕಳೆದ ಕೆಲ ವರ್ಷಗಳಿಂದ ದಕ್ಷಿಣದ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ವಿತರಣೆ ಮಾತ್ರ ಮಾಡುತ್ತಿದ್ದ ಧರ್ಮಾ, ಈಗ ನೇರವಾಗಿ ಚಿತ್ರ ನಿರ್ಮಾಣಕ್ಕೆ ಇಳಿದಿದೆ.

ಧರ್ಮ ಪ್ರೊಡಕ್ಷನ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದೆ. ಪೃಥ್ವಿರಾಜ್ ಸುಕುಮಾರನ್ ಮತ್ತು ಮಂಜು ವಾರಿಯರ್ ನಟಿಸುತ್ತಿರುವ ‘ಒಡಿಯನ್ – ದಿ ಏಜ್ ಆಫ್ ಇಲ್ಯೂಷನ್’ ಹೆಸರಿನ ಹಾರರ್ ಸಿನಿಮಾಕ್ಕೆ ಧರ್ಮಾ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. 19ನೇ ಶತಮಾನದ ಜನಪದ ಹಾರರ್ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಬಾಲಿವುಡ್‌ನ ಅತ್ಯಂತ ಪ್ರಭಾವಶಾಲಿ ಬ್ಯಾನರ್‌ಗಳಲ್ಲಿ ಒಂದಾದ ಧರ್ಮ ಪ್ರೊಡಕ್ಷನ್ಸ್ ಮತ್ತು ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಪೃಥ್ವಿರಾಜ್ ಪ್ರೊಡಕ್ಷನ್ಸ್ ನಡುವಿನ ಈ ಸಹಯೋಗ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

‘ಭೂತಕಾಲಂ’ ಮತ್ತು ‘ಬ್ರಮಯುಗಂ’ನಂತಹ ಸೂಪರ್ ಹಿಟ್ ಮತ್ತು ವಿಮರ್ಶಕರಿಂದಲೂ ಸಾಕಷ್ಟು ಮೆಚ್ಚುಗೆ ಪಡೆದ ಹಾರರ್ ಚಿತ್ರಗಳನ್ನು ನಿರ್ದೇಶಿಸಿರುವ ರಾಹುಲ್ ಸದಾಶಿವನ್ ‘ಒಡಿಯನ್’ ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಚಿತ್ರದ ಪೋಸ್ಟರ್ ಬಹಳ ನಿಗೂಢವಾಗಿದ್ದು, ಪುರಾತನ ಕನ್ನಡಿಯೊಂದರ ಒಳಗೆ ಅಸ್ಥಿಪಂಜರದಂತಹ ಆಕೃತಿ ಕಾಣುವ ದೃಶ್ಯ ಪೋಸ್ಟರ್​​ನಲ್ಲಿದೆ. ಈ ಚಿತ್ರವು ಮಾಟ-ಮಂತ್ರ, ರೂಪ ಬದಲಿಸುವ ಶಕ್ತಿ ಮತ್ತು ಪ್ರಾಚೀನ ಜಾನಪದ ಕಥೆಗಳನ್ನು ಆಧರಿಸಿದೆ.

ಇದನ್ನೂ ಓದಿ:ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್

ಕೇರಳದ ಸುಪ್ರಸಿದ್ಧ ‘ಒಡಿಯನ್’ ಜನಪದ ಕಥೆಗಳನ್ನು ಆಧರಿಸಿದ ಈ ಚಿತ್ರವು, ಕತ್ತಲಲ್ಲಿ ಪ್ರಾಣಿಗಳಾಗಿ ರೂಪಾಂತರಗೊಳ್ಳುವ ಮತ್ತು ಮಾಟ-ಮಂತ್ರಗಳನ್ನು ಬಲ್ಲವರೆಂದು ನಂಬಲಾದ ಭಯಾನಕ ವ್ಯಕ್ತಿಗಳ ಕಥೆಯನ್ನು ಹೇಳಲಿದೆ. ತನ್ನ ವಿಶಿಷ್ಟ ಶೈಲಿಯ ನಿರೂಪಣೆಗೆ ಹೆಸರಾದ ರಾಹುಲ್ ಸದಾಶಿವನ್, ಈ ದಂತಕಥೆಯನ್ನು ಹಾರರ್ ಮೂಲಕ ಮತ್ತಷ್ಟು ರೋಚಕವಾಗಿ ತೆರೆಮೇಲೆ ತರಲು ಸಿದ್ಧರಾಗಿದ್ದಾರೆ.

ಕರಣ್ ಜೋಹರ್, ಅದಾರ್ ಪೂನಾವಾಲಾ, ಅಪೂರ್ವ ಮೆಹ್ತಾ ಮತ್ತು ಸುಪ್ರಿಯಾ ಮೆನನ್ ಅವರುಗಳು ಧರ್ಮಾ ಪ್ರೊಡಕ್ಷನ್ಸ್ ಮೂಲಕ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಭಾರಿ ಬಜೆಟ್​​ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಈ ಚಿತ್ರವು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ