Let’s Get Married Movie: ‘ಲೆಟ್ಸ್ ಗೆಟ್ ಮ್ಯಾರೀಡ್’ ಎಂದ ಎಂ.ಎಸ್​. ಧೋನಿ; ಇದು ಮೊದಲ ಸಿನಿಮಾ ಟೈಟಲ್

MS Dhoni Tamil Movie: ಧೋನಿ ಎಂಟರ್​​ಟೇನ್​ಮೆಂಟ್ ನಿರ್ಮಾಣದ ಮೊದಲ ಚಿತ್ರದ ಟೈಟಲ್ ರಿಲೀಸ್ ಮಾಡಲಾಗಿದೆ. ಕಾಡಿನ ಮಧ್ಯೆ ಇರುವ ರಸ್ತೆಯಲ್ಲಿ ವ್ಯಾನ್ ಒಂದು ಸಾಗುವ ರೀತಿಯಲ್ಲಿ ಗ್ರಾಫಿಕ್ಸ್ ಮಾಡಲಾಗಿದೆ.

Let's Get Married Movie: ‘ಲೆಟ್ಸ್ ಗೆಟ್ ಮ್ಯಾರೀಡ್’ ಎಂದ ಎಂ.ಎಸ್​. ಧೋನಿ; ಇದು ಮೊದಲ ಸಿನಿಮಾ ಟೈಟಲ್
ಎಲ್​ಜಿಎಂ ಟೈಟಲ್
Follow us
| Updated By: Digi Tech Desk

Updated on:Jan 27, 2023 | 6:02 PM

ಕ್ರಿಕೆಟರ್​ ಎಂ.ಎಸ್​. ಧೋನಿ (MS Dhoni) ಅವರು ಸಿನಿಮಾ ನಿರ್ಮಾಣಕ್ಕೆ ಇಳಿಯಲಿದ್ದಾರೆ ಎನ್ನುವ ಸುದ್ದಿ ಖಚಿತವಾಗಿತ್ತು. ಆದರೆ, ಈ ಸಿನಿಮಾ ಯಾವುದು? ಇದನ್ನು ನಿರ್ದೇಶನ ಮಾಡೋದು ಯಾರು ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಈ ವಿಚಾರದಲ್ಲಿ ಧೋನಿ ಎಂಟರ್​ಟೇನ್​ಮೆಂಟ್ ಕಡೆಯಿಂದ ಘೋಷಣೆ ಆಗಿದೆ. ಅವರ ಮೊದಲ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್​’ (Lets  Get Married) ಎಂದು ಶೀರ್ಷಿಕೆ ಇಡಲಾಗಿದೆ.

ಧೋನಿಗೂ ತಮಿಳುನಾಡಿಗೂ ಉತ್ತಮ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

ಧೋನಿ ಎಂಟರ್​​ಟೇನ್​ಮೆಂಟ್ ನಿರ್ಮಾಣದ ಮೊದಲ ಚಿತ್ರದ ಟೈಟಲ್ ರಿಲೀಸ್ ಮಾಡಲಾಗಿದೆ. ಕಾಡಿನ ಮಧ್ಯೆ ಇರುವ ರಸ್ತೆಯಲ್ಲಿ ವ್ಯಾನ್ ಒಂದು ಸಾಗುವ ರೀತಿಯಲ್ಲಿ ಗ್ರಾಫಿಕ್ಸ್ ಮಾಡಲಾಗಿದೆ. ‘ಎಲ್​ಜಿಎಂ’ ಎಂಬುದು ಸಿನಿಮಾ ಟೈಟಲ್​ನ ಶಾರ್ಟ್​ಫಾರ್ಮ್​. ರಮೇಶ್ ತಮಿಳ್​ಮಣಿ ಅವರು ಚಿತ್ರವನ್ನು ನಿರ್ದೇಶನ ಮಾಡಿದರೆ, ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಕಥೆ ಬಗ್ಗೆ ಹೇಳಿದ್ದ ರಮೇಶ್

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:27 pm, Fri, 27 January 23

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್