AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ

Dhurandhar 2: ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದಲೇ ಆರಂಭವಾಗಿದ್ದು, ದೇಶದ ನಾನಾ ನಗರಗಳಲ್ಲಿ ಮಲ್ಟಿಪ್ಲೆಕ್ಸ್​ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಹ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಂತೂ ಟಿಕೆಟ್ ಬೆಲೆ ಗಗನಕ್ಕೇರಿ ನಿಂತಿವೆ. ‘ಧುರಂಧರ್ 2’ ಸಿನಿಮಾಕ್ಕೆ ಇರುವ ಬೇಡಿಕೆಯನ್ನು ಲಾಭವನ್ನಾಗಿ ಬದಲಾವಣೆ ಮಾಡಿಕೊಳ್ಳಲು ಟೊಂಕ ಕಟ್ಟಿ ನಿಂತಿದ್ದಂತಿದೆ.

‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ
ಧುರಂಧರ್ 2
ಮಂಜುನಾಥ ಸಿ.
|

Updated on: Mar 07, 2026 | 6:10 PM

Share

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದಲೇ ಆರಂಭವಾಗಿದ್ದು, ದೇಶದ ನಾನಾ ನಗರಗಳಲ್ಲಿ ಮಲ್ಟಿಪ್ಲೆಕ್ಸ್​ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಹ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಂತೂ ಟಿಕೆಟ್ ಬೆಲೆ ಗಗನಕ್ಕೇರಿ ನಿಂತಿವೆ. ‘ಧುರಂಧರ್ 2’ ಸಿನಿಮಾಕ್ಕೆ ಇರುವ ಬೇಡಿಕೆಯನ್ನು ಲಾಭವನ್ನಾಗಿ ಬದಲಾವಣೆ ಮಾಡಿಕೊಳ್ಳಲು ಟೊಂಕ ಕಟ್ಟಿ ನಿಂತಿದ್ದಂತಿದೆ.

‘ಧುರಂಧರ್ 2’ ಸಿನಿಮಾ ಒಂದು ದಿನ ಮುಂಚಿತವಾಗಿ ಅಂದರೆ ಮಾರ್ಚ್ 18ರಂದು ಪ್ರೀಮಿಯರ್ ಶೋ ಆಯೋಜಿಸುತ್ತಿದ್ದು, ಬೆಂಗಳೂರಿನಲ್ಲಿ ಈ ಪ್ರೀಮಿಯರ್ ಶೋ ಟಿಕೆಟ್ ಬೆಲೆಗಳು ಬಲು ದುಬಾರಿಯಾಗಿದೆ. ಮಲ್ಟಿಪ್ಲೆಕ್ಸ್​​ಗಳಲ್ಲಿ ತೋಚಿದ ಬೆಲೆಯನ್ನು ಟಿಕೆಟ್​​ಗಳಿಗೆ ನಿಗದಿಪಡಿಸಲಾಗಿದೆ. 2500 ರೂಪಾಯಿ ಒಂದೆಡೆ ಇದ್ದರೆ, ಇನ್ನೊಂದೆಡೆ 1800 ರೂಪಾಯಿಗಳಿವೆ. 1500, 1200 ಹೀಗೆ ಒಂದೊಂದು ಮಲ್ಟಿಪ್ಲೆಕ್ಸ್​​ನಲ್ಲಿ ಒಂದೊಂದು ರೀತಿ ಬೆಲೆಗಳನ್ನು ನಿಗದಿ ಮಾಡಲಾಗಿದ್ದು, ಸಾಮಾನ್ಯ ಶೋಗಿಂತಲೂ ನಾಲ್ಕೈದು ಪಟ್ಟು ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

ಸಿನೆಪೊಲೀಸ್, ಗೋಪಾಲನ್ ಸಿನಿಮಾಸ್, ಕಿನೊ ಸಿನಿಮಾಸ್ ಇನ್ನಿತರೆ ಸಾಮಾನ್ಯ ಮಲ್ಟಿಪ್ಲೆಕ್ಸ್​​ಗಳಲ್ಲಿ ಸಹ 700 ರೂಪಾಯಿ ಟಿಕೆಟ್ ಬೆಲೆ ಇದೆ. ಅತಿ ಹೆಚ್ಚು ಬೆಲೆ ಇರುವುದು ಫೋರಂನ ಪಿವಿಆರ್ ಡೈರೆಕ್ಟರ್ಸ್ ಕಟ್​​ನಲ್ಲಿ ಇಲ್ಲಿ ಒಂದು ‘ಧುರಂಧರ್ 2’ ಸಿನಿಮಾದ ಟಿಕೆಟ್ ಬೆಲೆ 2500 ರೂಪಾಯಿ. ಬೆಂಗಳೂರಿನಲ್ಲಿ, ಪ್ರೀಮಿಯರ್ ಶೋಗೆ ನಿಗದಿ ಪಡಿಸಲಾಗಿರುವ ಅತಿ ಹೆಚ್ಚು ಬೆಲೆ ಇದೇ ಎನ್ನಬಹುದೇನೊ. ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀಮಿಯರ್ ಶೋಗೂ ಸಹ ಇಷ್ಟು ದುಬಾರಿ ಬೆಲೆ ಇರಿಸಲಾಗಿರಲಿಲ್ಲ.

ಹೋಲಿಕೆ ಮಾಡಿ ನೋಡಿದರೆ ಮುಂಬೈಗಿಂತಲೂ ಬೆಂಗಳೂರಿನಲ್ಲಿ ‘ಧುರಂಧರ್ 2’ ಸಿನಿಮಾಕ್ಕೆ ಟಿಕೆಟ್ ಬೆಲೆ ಹೆಚ್ಚು ಇರಿಸಲಾಗಿದೆ. ಮುಂಬೈನಲ್ಲಿಯೂ ಸಹ ಕೆಲ ಮಲ್ಟಿಪ್ಲೆಕ್ಸ್​​ಗಳಲ್ಲಿ ಹೆಚ್ಚಿನ ಬೆಲೆ ಇದೆಯಾದರೂ, ಕಡಿಮೆ ಬೆಲೆಯ ಹಲವಾರು ಮಲ್ಟಿಪ್ಲೆಕ್ಸ್​​ಗಳಿವೆ. ಸರಾಸರಿ ನೋಡಿದಲ್ಲಿ, ಮುಂಬೈಗಿಂತಲೂ ಬೆಂಗಳೂರಿನಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋನ ಟಿಕೆಟ್​ ಬೆಲೆಗಳು ಹೆಚ್ಚಿವೆ. ಅಲ್ಲದೆ, ‘ಧುರಂಧರ್ 2’ ಚಿತ್ರತಂಡ ಸಖತ್ ಪ್ಲ್ಯಾನ್ ಮಾಡಿದ್ದು, ಪ್ರಸ್ತುತ ‘ಧುರಂಧರ್ 2’ ಸಿನಿಮಾ 18ನೇ ಮಾರ್ಚ್​​ನ ಟಿಕೆಟ್​​ಗಳ ಮುಂಗಡ ಬುಕಿಂಗ್ ಮಾತ್ರವೇ ರಿಲೀಸ್ ಮಾಡಲಾಗಿದೆ. ಮಾರ್ಚ್ 19ರ ಶೋಗಳ ಮುಂಗಡ ಬುಕಿಂಗ್ ಓಪನ್ ಮಾಡಲಾಗಿಲ್ಲ.

ಇದನ್ನೂ ಓದಿ:‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್

‘ಧುರಂಧರ್ 2’ ಸಿನಿಮಾನಲ್ಲಿ ರಣ್ವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್ ಇನ್ನೂ ಹಲವರು ನಟಿಸಿದ್ದು, ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಇದೀಗ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!