AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ವರ್ಷ ಹಳೆಯ ‘ಬಾಹುಬಲಿ 2’ ದಾಖಲೆ ಮುರಿದ ‘ಧುರಂಧರ್ 2’

Dhurandhar 2 movie: ‘ಧುರಂಧರ್ 2’ ಸಿನಿಮಾ ದೇಶದಲ್ಲಿ ಮಾತ್ರವೇ ಅಲ್ಲದೆ, ವಿದೇಶಗಳಲ್ಲಿಯೂ ದೊಡ್ಡ ಮೊತ್ತವನ್ನು ಗಳಿಕೆ ಮಾಡುತ್ತಿದೆ. ಹಳೆಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿಗಟ್ಟುತ್ತಿದೆ ‘ಧುರಂಧರ್ 2’ ಸಿನಿಮಾ. ಇದೀಗ ಒಂಬತ್ತು ವರ್ಷ ಹಳೆಯ ‘ಬಾಹುಬಲಿ 2’ ದಾಖಲೆಯೊಂದನ್ನು ಸಿನಿಮಾ ಮುರಿದಿದ್ದು, ‘ಬಾಹುಬಲಿ 2’ ನಿರ್ಮಾಪಕ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

9 ವರ್ಷ ಹಳೆಯ ‘ಬಾಹುಬಲಿ 2’ ದಾಖಲೆ ಮುರಿದ ‘ಧುರಂಧರ್ 2’
Dhurandhar Bahubali
ಮಂಜುನಾಥ ಸಿ.
|

Updated on:Mar 29, 2026 | 11:00 PM

Share

ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಕ್ಷರಷಃ ಅಬ್ಬರಿಸುತ್ತಿದೆ. ಬಿಡುಗಡೆ ಆದ ಎಲ್ಲ ಸೆಂಟರ್​​ಗಳಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಹಿಂದಿ ಸಿನಿಮಾಗಳು ದಕ್ಷಿಣದಲ್ಲಿ ಓಡುವುದು ಕಡಿಮೆ, ಅದರಲ್ಲೂ ತಮಿಳುನಾಡು, ಆಂಧ್ರ, ಕೇರಳಗಳಲ್ಲಿ ಬಹಳ ಕಡಿಮೆ. ಆದರೆ ಅಲ್ಲಿಯೂ ಸಹ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದಲ್ಲಿ ಮಾತ್ರವೇ ಅಲ್ಲದೆ, ವಿದೇಶಗಳಲ್ಲಿಯೂ ದೊಡ್ಡ ಮೊತ್ತವನ್ನು ಗಳಿಕೆ ಮಾಡುತ್ತಿದೆ. ಹಳೆಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿಗಟ್ಟುತ್ತಿದೆ ‘ಧುರಂಧರ್ 2’ ಸಿನಿಮಾ. ಇದೀಗ ಒಂಬತ್ತು ವರ್ಷ ಹಳೆಯ ‘ಬಾಹುಬಲಿ 2’ ದಾಖಲೆಯೊಂದನ್ನು ಸಿನಿಮಾ ಮುರಿದಿದ್ದು, ‘ಬಾಹುಬಲಿ 2’ ನಿರ್ಮಾಪಕ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ‘ಬಾಹುಬಲಿ 2’ ಸಿನಿಮಾ ಭಾರತದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಹಲವು ವರ್ಷಗಳಿಂದಲ ಎರಡನೇ ಸ್ಥಾನದಲ್ಲಿದೆ. ಇನ್ನೂ ಈ ದಾಖಲೆಯನ್ನು ‘ಧುರಂಧರ್ 2’ ಸಿನಿಮಾಕ್ಕೆ ಮುರಿಯಲು ಆಗಿಲ್ಲ. ಆದರೆ ಉತ್ತರ ಅಮೆರಿಕದ ಬಾಕ್ಸ್ ಆಫೀಸ್‌ನಲ್ಲಿ ಕಳೆದ 9 ವರ್ಷಗಳಿಂದ ಅಚ್ಚಳಿಯದ ದಾಖಲೆ ಬರೆದಿದ್ದ ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರದ ದಾಖಲೆಯನ್ನು ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದ ರಿವೆಂಜ್’ ಮುರಿದಿದೆ.

ಎಸ್ಎಸ್ ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಉತ್ತರ ಅಮೆರಿಕದಲ್ಲಿ 20.19 ಮಿಲಿಯನ್ ಡಾಲರ್ (192 ಕೋಟಿ ರೂಪಾಯಿಗಳು) ಗಳಿಸಿ ದಾಖಲೆ ನಿರ್ಮಿಸಿತ್ತು. ಈಗ ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಈಗಾಗಲೇ 19.33 ಮಿಲಿಯನ್ ಡಾಲರ್ (183 ಕೋಟಿ ರೂಪಾಯಿಗಳು) ಗಳಿಸಿದ್ದು, ಅತಿ ಶೀಘ್ರದಲ್ಲೇ ಅಂದರೆ ಸೋಮವಾರದ ವೇಳೆಗೆ ಬಾಹುಬಲಿಯ ದಾಖಲೆಯನ್ನು ಹಿಂದಿಕ್ಕುವ ನಿರೀಕ್ಷೆಯಿದೆ. ‘ಬಾಹುಬಲಿ 2’ ಸಿನಿಮಾದ ಈ ಕಲೆಕ್ಷನ್ ದಾಖಲೆಯನ್ನು ಕಳೆದ ಒಂಬತ್ತು ವರ್ಷಗಳಿಂದ ಯಾರೂ ಸಹ ಮುರಿದಿರಲಿಲ್ಲ.

ಇದನ್ನೂ ಓದಿ:‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಈ ಸಾಧನೆಯ ಬಗ್ಗೆ ಟ್ವೀಟ್ ಮಾಡಿರುವ ‘ಬಾಹುಬಲಿ’ ಚಿತ್ರದ ನಿರ್ಮಾಪಕ ಶೋಭು ಯಾರ್ಲಗಡ್ಡ ಅವರು, ‘ನಿನ್ನೆ ನಾನು ‘ಧುರಂಧರ್ 2’ ಸಿನಿಮಾ ನೋಡಿದೆ, ಸಿನಿಮಾ ನನಗೆ ತುಂಬಾ ಇಷ್ಟವಾಯಿತು. ಈ ಚಿತ್ರವು ಭಾರತ ಮತ್ತು ವಿಶ್ವದಾದ್ಯಂತ ಹೊಸ ಬಾಕ್ಸ್ ಆಫೀಸ್ ದಾಖಲೆಗಳನ್ನು ನಿರ್ಮಿಸುತ್ತಿರುವುದು ಸಂತೋಷ ತಂದಿದೆ. ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಬರೆದಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಇದೇ ನಾರ್ತ್ ಅಮೆರಿಕನಲ್ಲಿ 19.70 ಮಿಲಿಯನ್ ಡಾಲರ್ ಅಂದರೆ ಸುಮಾರು 184 ಕೋಟಿ ರೂಪಾಯಿಗಳನ್ನು ಗಳಿಸಿತ್ತು. ಆದರೆ ‘ಬಾಹುಬಲಿ 2’ ದಾಖಲೆಯನ್ನು ಅದಕ್ಕೆ ಮುರಿಯಲು ಆಗಿರಲಿಲ್ಲ. ಆದರೆ ಈಗ ‘ಧುರಂಧರ್ 2’ ಸಿನಿಮಾ ಸುಲಭವಾಗಿ ಆ ದಾಖಲೆಯನ್ನು ಮುರಿದಿದೆ.

2017 ರಲ್ಲಿ ಬಿಡುಗಡೆ ಆಗಿದ್ದ ‘ಬಾಹುಬಲಿ 2’ ಸಿನಿಮಾ ವಿಶ್ವದಾದ್ಯಂತ ಒಟ್ಟು ಸುಮಾರು 1800 ಕೋಟಿಗೂ ಹೆಚ್ಚು ಹಣ ಗಳಿಸಿದೆ. ‘ಧುರಂಧರ್ 2’ ಸಿನಿಮಾ ಈ ದಾಖಲೆಯನ್ನು ಮುರಿಯಲು ಮುನ್ನುಗ್ಗುತ್ತಿದೆ. ಸಿನಿಮಾ ಬಿಡುಗಡೆ ಆಗಿ 11 ದಿನಗಳಾಗಿದ್ದು ಈ ವರೆಗೆ 1200 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ 1800 ಕೋಟಿ ಗಳಿಸುವ ನಿರೀಕ್ಷೆ ಇದೆ. ‘ಧುರಂಧರ್ 2’ ಸಿನಿಮಾ 1800 ಕೋಟಿ ಗಳಿಸಿದಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕದಲ್ಲಿ ಎರಡನೇ ಸ್ಥಾನಕ್ಕೇರಲಿದೆ. ಮೊದಲ ಸ್ಥಾನಕ್ಕೇರಲು ‘ದಂಗಲ್’ ಸಿನಿಮಾವನ್ನು ಹಿಂದಿಕ್ಕಬೇಕಿದೆ. ಆ ಸಿನಿಮಾ ವಿಶ್ವದಾದ್ಯಂತ 2200 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sun, 29 March 26

Follow Us
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!
ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!