AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ
ಧುರಂಧರ್ 2 ವಿಮರ್ಶೆ
ಧುರಂಧರ್ 2
A
  • Time - 229 Minutes
  • Released - ಮಾರ್ಚ್ 19, 2026
  • Language - ಹಿಂದಿ
  • Genre - ಆ್ಯಕ್ಷನ್, ಥ್ರಿಲ್ಲರ್
Cast - ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್
Director - ಆದಿತ್ಯ ಧಾರ್
3.5
Critic's Rating
ರಾಜೇಶ್ ದುಗ್ಗುಮನೆ
|

Updated on:Mar 19, 2026 | 7:40 AM

Share

‘ಧುರಂಧರ್’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದಾದ ಕೇವಲ ಮೂರೇ ತಿಂಗಳಿಗೆ ‘ಧುರಂಧರ್ 2’ ರಿಲೀಸ್ ಆಗಿದೆ. ಈ ಸಿನಿಮಾದ ರನ್​​ಟೈಮ್ 3 ಗಂಟೆ 49 ನಿಮಿಷ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಗಳನ್ನು ಸಿನಿಮಾ ತಲುಪಿತೇ? ಆ ಬಗ್ಗೆ ಇಲ್ಲಿದೆ ವಿವರ.

‘ಧುರಂಧರ್’ ಸಿನಿಮಾ ಕ್ಲೈಮ್ಯಾಕ್ಸ್​​​ನಲ್ಲಿ ಹಮ್ಜಾ ಅಲಿ ಮಜಾರಿ, ರೆಹ್ಮಾನ್ ಡಕಾಯಿತ್​​ನ ಹತ್ಯೆ ಮಾಡುತ್ತಾನೆ. ಆ ಬಳಿಕ ನಡೆಯುವ ಕಥೆಯೇ ‘ಧುರಂಧರ್ 2’. ಸಿನಿಮಾದ ಹೆಸರೇ ‘ಧುರಂಧರ್: ದಿ ರಿವೇಂಜ್’. ಹೀಗಾಗಿ, ಸಿನಿಮಾ ಉದ್ದಕ್ಕೂ ಸೇಡಿನ ಕಥೆ ಸಾಗುತ್ತದೆ. ರಕ್ತದೋಕುಳಿ ಹರಿಯುತ್ತದೆ. ಉರುಳುವ ತಲೆಗಳಿಗೆ ಲೆಕ್ಕ ಇಲ್ಲ. ಹಾಗಾದಾರೆ ಈ ಸೇಡಿನ ಹಿಂದಿನ ಕಾರಣವೇನು? ಜಸ್ಕಿರತ್ ಸಿಂಗ್, ಹಮ್ಜಾ ಆಗಿದ್ದೇಕೆ? ಅದನ್ನು ಸಿನಿಮಾದಲ್ಲೇ ನೋಡಬೇಕು.

‘ಧುರಂಧರ್’ ಸಿನಿಮಾದಲ್ಲಿ ಜಸ್ಕಿರತ್ ಸಿಂಗ್ ರಂಗಿ ಹೇಗೆ ಹಮ್ಜಾ ಆದ ಎಂಬುದನ್ನು ತೋರಿಸಿಲ್ಲ. ಆದರೆ, ಈ ಸಿನಿಮಾದಲ್ಲಿ ಜಸ್ಕಿರತ್ ಹಿನ್ನೆಲೆಯನ್ನು ವಿವರವಾಗಿ ಹೇಳಲಾಗಿದೆ. ಇದಕ್ಕಾಗಿ ನಿರ್ದೇಶಕರು ಆರಂಭದ ಅರ್ಧ ಗಂಟೆಯನ್ನು ಮೀಸಲಿಟ್ಟಿದ್ದಾರೆ. ಈ ಚಿತ್ರ ಪ್ರೀಕ್ವೆಲ್​​ನಿಂದ ಆರಂಭ ಆಗಿ, ಸೀಕ್ವೆಲ್​​ಗೆ ಸಾಗುತ್ತದೆ. ರಣವೀರ್ ಸಿಂಗ್ ಅವರು ಚಿತ್ರದುದ್ದಕ್ಕೂ ಕಾಣಿಸಿಕೊಂಡಿದ್ದಾರೆ. ಅವರದ್ದು ಒನ್ ಮ್ಯಾನ್ ಶೋ ಎಂದರೂ ತಪ್ಪಾಗಲಿಕ್ಕಿಲ್ಲ.

‘ಧುರಂಧರ್ 2’ ಸಿನಿಮಾದಲ್ಲಿ ಕೆಲವು ಟ್ವಿಸ್ಟ್​​ಗಳಿವೆ. ಆ ತಿರುವುಗಳನ್ನು ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ. ಈ ಕಾರಣಕ್ಕೆ ‘ಧುರಂಧರ್ 2’ ಸಿನಿಮಾ ಹೆಚ್ಚು ಮನರಂಜನೆ ಕೊಡುತ್ತದೆ. ರಣವೀರ್ ಸಿಂಗ್ ಅವರು ರಕ್ತದೋಕುಳಿಯಲ್ಲಿ ಮಿಂದೆದ್ದಿದ್ದಾರೆ. ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಒಮ್ಮೆ ಹಮ್ಜಾ ಆಗಿ, ಮತ್ತೊಮ್ಮೆ ಜಸ್ಕಿರತ್ ಆಗಿ ಅವರು ಇಷ್ಟ ಆಗುತ್ತಾರೆ. ಆ್ಯಕ್ಷನ್ ದೃಶ್ಯಗಳನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ.

ಇನ್ನು, ಈ ಚಿತ್ರದ ಮತ್ತೊಂದು ಹೈಲೈಟ್ ಎಂದರೆ ಅರ್ಜುನ್ ರಾಂಪಾಲ್. ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಹೇಗೋ, ಈ ಭಾಗದಲ್ಲಿ ಅರ್ಜುನ್. ಅವರು ಐಸಿಸ್ ಮೇಜರ್ ಇಕ್ಬಾಲ್ ಆಗಿ ಕಾಣಿಸಿಕೊಂಡಿದ್ದಾರೆ. ಇವರ ಪಾತ್ರಕ್ಕೂ ಸಾಕಷ್ಟು ತೂಕ ಇದೆ. ಎಸ್ಪಿ ಚೌದ್ರಿ ಅಸ್ಲಾಮ್ ಪಾತ್ರದಲ್ಲಿ ಸಂಜಯ್ ದತ್ ನಟಿಸಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರದ ಬಳಕೆ ಸರಿಯಾಗಿ ಆಗಿಲ್ಲ. ಆರ್​. ಮಾಧವನ್ ಅವರು ಅಜಯ್ ಸನ್ಯಾಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಾರಾ ಅರ್ಜುನ್, ರಾಕೇಶ್ ಬೇಡಿ ಮೊದಲಾದವರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಶಾಶ್ವತ್ ಸಚ್​​ದೇವ್ ಹಿನ್ನಲೆ ಸಂಗೀತ ಚಿತ್ರದ ತೂಕವನ್ನು ಹೆಚ್ಚಿಸಿದೆ. ಹಿನ್ನೆಲೆಯಲ್ಲಿ ಬರುವ ಹಾಡುಗಳು ಕೂಡ ಮನಸ್ಸಿನಲ್ಲಿ ಉಳಿಯುತ್ತವೆ. ವಿಕಾಶ್ ಛಾಯಾಗ್ರಹಣ ಸಿನಿಮಾವನ್ನು ಮತ್ತಷ್ಟು ಅಂದಗೊಳಿಸಿದೆ. ಸಿನಿಮಾ ತಾಂತ್ರಿಕವಾಗಿ ಸಾಕಷ್ಟು ಶ್ರೀಮಂತವಾಗಿದೆ. ಸೆಟ್​​ ಹಾಗು ವಿಎಫ್​ಎಕ್ಸ್ ಗಮನ ಸೆಳೆಯುತ್ತವೆ.

ನಿರ್ದೇಶಕ ಆದಿತ್ಯ ಧಾರ್ ಶ್ರಮವನ್ನು ಮೆಚ್ಚಲೇಬೇಕು. ಒಂದು ಅದ್ಭುತ ಚಿತ್ರವನ್ನು ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಈ ಚಿತ್ರವನ್ನು ‘ಧುರಂಧರ್​’ಗಿಂತ ಮತ್ತಷ್ಟು ರಾ ಆಗಿ ಕಟ್ಟಿಕೊಟ್ಟಿದ್ದಾರೆ. ಅವರ ಕಡೆಯಿಂದ ಒಂದೊಳ್ಳೆಯ ಸ್ಪೈ ಸಿನಿಮಾ ಸಿಕ್ಕಿದೆ. ಭಾವನಾತ್ಮಕ ವಿಷಯಗಳಿಗೂ ಹೆಚ್ಚು ಆದ್ಯತೆ ನೀಡಲಾಗಿದೆ. ಹಲವು ನೈಜ ಘಟನೆಗಳನ್ನು ಕಾಲ್ಪನಿಕ ಕಥೆಯಲ್ಲಿ ಹೊಸೆದಿದ್ದಾರೆ. ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ, ನೋಟ್​ ಬ್ಯಾನ್, ಸರ್ಜಿಕಲ್ ಸ್ಟ್ರೈಕ್ ಸಂದರ್ಭದಲ್ಲಿ ಮೋದಿ ಮಾತನಾಡಿದ ನೈಜ ವಿಡಿಯೋ ತೋರಿಸಿದ್ದಾರೆ ಆದಿತ್ಯ ಧಾರ್. ನೋಟ್ ಬ್ಯಾನ್ ಹಿಂದಿನ ಕಾರಣವನ್ನೂ ಕಥೆಗೆ ಲಿಂಕ್ ಕೊಟ್ಟಿದ್ದಾರೆ. ಈ ರೀತಿಯ ಹಲವು ಘಟನೆಗಳನ್ನು ತೋರಿಸಲಾಗಿದೆ. ಆದರೆ, ಇದರಲ್ಲಿ ಯಾವುದು ನೈಜ ಘಟನೆ? ಯಾವುದು ಕಾಲ್ಪನಿಕ ಎಂಬ ಗೊಂದಲಕ್ಕೆ ಉತ್ತರ ಸಿಗೋದಿಲ್ಲ. ಕೆಲವು ವಿಷಯಗಳನ್ನು ನೇರಾ ನೇರ ತೋರಿಸಿದ್ದು, ಒಂದು ಪಕ್ಷಕ್ಕೆ ಲಾಭ ಆಗುತ್ತದೆ ಎಂಬ ಅಪಸ್ವರ ಕೇಳಿ ಬಂದರೂ ಅಚ್ಚರಿ ಏನಿಲ್ಲ.

ಸಿನಿಮಾದ ಅವಧಿ ಬರೋಬ್ಬರಿ 3 ಗಂಟೆ ಹಾಗೂ 49 ನಿಮಿಷ. ಪ್ರತಿ ವಿಷಯವನ್ನು ವಿವರವಾಗಿ ಹೇಳುವ ಪ್ರಯತ್ನವನ್ನು ಮಾಡಿದ್ದಾರೆ. ಇದು ಕೆಲವು ಕಡೆಗಳಲ್ಲಿ ಪ್ರೇಕ್ಷಕನ ತಾಳ್ಮೆ ಪರೀಕ್ಷೆ ಮಾಡುತ್ತದೆ. ಪ್ರೀ ಕ್ಲೈಮ್ಯಾಕ್ಸ್​​ನಲ್ಲಿ ಬರೋ ಫೈಟ್​ ಬಹುದೀರ್ಘ ಎನಿಸುತ್ತದೆ. ಹೀಗಾಗಿ, ಹಲವು ದೃಶ್ಯಗಳಿಗೆ ಕತ್ತರಿ ಹಾಕಿದ್ದರೆ, ಸಿನಿಮಾ ಮತ್ತಷ್ಟು ಸುಂದರ ಆಗುತ್ತಿತ್ತು. ಬಡೆ ಸಾಬ್ ಪಾತ್ರದ ಸುತ್ತಲಿನ ಸಸ್ಪೆನ್ಸ್ ಸಂಪೂರ್ಣವಾಗಿ ಟೊಳ್ಳೆನಿಸುತ್ತದೆ. ಅಕ್ಷಯ್ ಖನ್ನಾ ಮೊದಲ ಭಾಗದಲ್ಲಿ ಶೋ ಸ್ಟೀಲರ್ ಆಗಿದ್ದರು. ಫ್ಲ್ಯಾಶ್​​ಬ್ಯಾಕ್ ಕಥೆಯಲ್ಲಿ ಅವರು ಬರುತ್ತಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾದಲ್ಲಿ ಅವರು ಪೋಸ್ಟರ್​​ಗೆ ಮಾತ್ರ ಸೀಮಿತ ಆಗಿದ್ದಾರೆ ಎಂಬುದು ಬೇಸರದ ವಿಷಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:06 pm, Wed, 18 March 26

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್