AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ‘ಧುರಂಧರ್’ ಅಬ್ಬರ; ‘ಟಾಕ್ಸಿಕ್’​ ಚಿತ್ರಕ್ಕೆ ಸಿಗಲಿದೆ ಟಫ್ ಫೈಟ್

ಡಿಸೆಂಬರ್ 9ರವರೆಗೆ ಸಿನಿಮಾ 153 ಕೋಟಿ ರೂಪಾಯಿ ಗಳಿಸಿತ್ತು. ಈಗ ಬುಧವಾರ ಸಿನಿಮಾ ಅಬ್ಬರಿಸಿದೆ. ಈ ಚಿತ್ರ 27 ಕೋಟಿ ರೂಪಾಯಿ ಗಳಿಸಿದ್ದು, ಒಟ್ಟೂ ಕಲೆಕ್ಷನ್ 180 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾ ಇಂದೇ (ಡಿಸೆಂಬರ್ 11) ಒಳ್ಳೆಯ ಕಲೆಕ್ಷನ್ ಮಾಡಿ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಮುಂದುವರಿದ ‘ಧುರಂಧರ್’ ಅಬ್ಬರ; ‘ಟಾಕ್ಸಿಕ್’​ ಚಿತ್ರಕ್ಕೆ ಸಿಗಲಿದೆ ಟಫ್ ಫೈಟ್
ಧುರಂಧರ್
ರಾಜೇಶ್ ದುಗ್ಗುಮನೆ
|

Updated on: Dec 11, 2025 | 9:04 AM

Share

‘ಧುರಂಧರ್’ ಸಿನಿಮಾದ ಅಬ್ಬರ ಮುಂದುವರಿದಿದೆ. ಸಿನಿಮಾಗೆ ಪಾಸಿಟಿವ್ ವಿಮರ್ಶೆ ಸಿಕ್ಕಿರುವುದರಿಂದ ಜನರು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಾರದ ದಿನಗಳಲ್ಲೂ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದೆ. ಸಿನಿಮಾ ಬುಧವಾರ (ಡಿಸೆಂಬರ್ 10) 27 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಿಂದ ಸಿನಿಮಾ ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ‘ಧುರಂಧರ್’ ಸೀಕ್ವೆಲ್ ಬಗ್ಗೆಯೂ ನಿರೀಕ್ಷೆ ಮೂಡಿದ್ದು, ‘ಟಾಕ್ಸಿಕ್’ ಚಿತ್ರಕ್ಕೆ ಟಫ್ ಫೈಟ್ ಸಿಗಲಿದೆ.

‘ಧುರಂಧರ್’ ಸಿನಿಮಾ ಮಾಡಿಕೊಂಡ ವಿವಾದಗಳು ಒಂದೆರಡಲ್ಲ. ಪ್ರಮುಖವಾಗಿ ರಣವೀರ್ ಸಿಂಗ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರ ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದರು. ಅವರ ಆ್ಯಕ್ಷನ್ ದೈವವನ್ನು ಟೀಕಿಸಿದಂತೆ ಇತ್ತು. ಇದರಿಂದ ರಣವೀರ್ ಸಿಂಗ್ ಚಿತ್ರಕ್ಕೆ ಹಿನ್ನಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಸುಳ್ಳಾಗಿತ್ತು. ಈಗ ಧುರಂಧರ್ ರಿಲೀಸ್ ಆಗಿ ಸೂಪರ್ ಹಿಟ್ ಆಗಿದೆ.

ಡಿಸೆಂಬರ್ 9ರವರೆಗೆ ಸಿನಿಮಾ 153 ಕೋಟಿ ರೂಪಾಯಿ ಗಳಿಸಿತ್ತು. ಈಗ ಬುಧವಾರ ಸಿನಿಮಾ ಅಬ್ಬರಿಸಿದೆ. ಈ ಚಿತ್ರ 27 ಕೋಟಿ ರೂಪಾಯಿ ಗಳಿಸಿದ್ದು, ಒಟ್ಟೂ ಕಲೆಕ್ಷನ್ 180 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾ ಇಂದೇ (ಡಿಸೆಂಬರ್ 11) ಒಳ್ಳೆಯ ಕಲೆಕ್ಷನ್ ಮಾಡಿ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಇದನ್ನೂ ಓದಿ: ಊಹೆಗೂ ಮೀರಿ ಧುರಂಧರ್ ಕಲೆಕ್ಷನ್; ಸೋಮವಾರಕ್ಕಿಂತ ಮಂಗಳವಾರದ ಗಳಿಕೆ ಜೋರು

ಟಾಕ್ಸಿಕ್​​ ಜೊತೆ ಫೈಟ್

‘ಟಾಕ್ಸಿಕ್’ ಸಿನಿಮಾ 2026ರ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಇದು ಯಶ್ ನಟನೆಯ ಚಿತ್ರ. ಹೀಗಾಗಿ, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾಗೆ ‘ಧುರಂಧರ್ 2’ ಫೈಟ್ ಕೊಡಲಿದೆ. ‘ಧುರಂಧರ್’ ಚಿತ್ರದ ಕಥೆ ಮುಂದುವರಿಯಲಿದೆ. ಎರಡನೇ ಪಾರ್ಟ್ ಮಾರ್ಚ್ 19ಕ್ಕೆ ಬಿಡುಗಡೆ ಕಾಣಲಿದೆ ಎಂದು ತಂಡ ಘೋಷಿಸಿದೆ. ಹೀಗಾಗಿ, ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ