AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂದ ‘ಧುರಂಧರ್’ ಸಿನಿಮಾ; ಕನ್ನಡ ಪ್ರೇಕ್ಷಕರಿಗೆ ನಿರಾಸೆ

ಥಿಯೇಟರ್‌ಗಳಲ್ಲಿ ಎರಡು ತಿಂಗಳು ಅಬ್ಬರಿಸಿದ ‘ಧುರಂಧರ್’ ಸಿನಿಮಾ ಈಗ ನೆಟ್‌ಫ್ಲಿಕ್ಸ್ ಮೂಲಕ ಪ್ರಸಾರವಾಗುತ್ತಿದೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ಈ ಸ್ಪೈ ಚಿತ್ರ ಒಟಿಟಿಯಲ್ಲಿ ತೆಲುಗು, ತಮಿಳಿಗೆ ಡಬ್ ಆಗಿದ್ದರೂ, ಕನ್ನಡದಲ್ಲಿ ಲಭ್ಯವಿಲ್ಲದಿರುವುದು ಕನ್ನಡಿಗರಿಗೆ ನಿರಾಸೆ ಮೂಡಿಸಿದೆ. ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡದಿರುವುದು ಬೇಸರದ ಸಂಗತಿ.

ಒಟಿಟಿಗೆ ಬಂದ ‘ಧುರಂಧರ್’ ಸಿನಿಮಾ; ಕನ್ನಡ ಪ್ರೇಕ್ಷಕರಿಗೆ ನಿರಾಸೆ
ಧುರಂಧರ್
ರಾಜೇಶ್ ದುಗ್ಗುಮನೆ
|

Updated on:Jan 30, 2026 | 10:16 AM

Share

ಒಟಿಟಿ ಯುಗದಲ್ಲೂ ಸುಮಾರು ಎರಡು ತಿಂಗಳುಗಳ ಕಾಲ ಥಿಯೇಟರ್​​​ನಲ್ಲಿ ಅಬ್ಬರಿಸಿದ ‘ಧುರಂಧರ್’ ಸಿನಿಮಾ ಈಗ ನೆಟ್​​ಫ್ಲಿಕ್ಸ್ ಮೂಲಕ ಪ್ರಸಾರ ಆರಂಭಿಸಿದೆ. ‘ಧರುಂಧರ್’ ಚಿತ್ರ (Dhurandhar Movie) ಡಿಸೆಂಬರ್ 5ರಂದು ಥಿಯೇಟರ್​​​ನಲ್ಲಿ ಬಿಡುಗಡೆ ಆಯಿತು. ಚಿತ್ರವನ್ನು ಎಲ್ಲರೂ ನೋಡಿ ಕೊಂಡಾಡಿದರು. ಈಗ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಒಟಿಟಿ ಪ್ರೇಕ್ಷಕರು ಈ ಚಿತ್ರವನ್ನು ಯಾವ ರೀತಿ ಸ್ವೀಕರಿಸುತ್ತಾರೆ ಎಂಬ ಕುತೂಹಲ ಮೂಡಿದೆ.

‘ಧುರಂಧರ್’ ಚಿತ್ರ ಥಿಯೇಟರ್​​​ನಲ್ಲಿ ಹಿಂದಿ ಭಾಷೆಯಲ್ಲಿ ಮಾತ್ರ ರಿಲೀಸ್ ಆಯಿತು. ಈಗ ಒಟಿಟಿಯಲ್ಲಿ ತಂಡದವರು ತಮಿಳು ಹಾಗೂ ತೆಲುಗು ಭಾಷೆಗೂ ಡಬ್ ಮಾಡಿ ರಿಲೀಸ್ ಮಾಡಿದ್ದಾರೆ. ಆದರೆ, ಕನ್ನಡಿಗರಿಗೆ ಈ ವಿಷಯದಲ್ಲಿ ನಿರಾಸೆ ಆಗಿದೆ. ಈ ಚಿತ್ರದ ಕನ್ನಡ ವರ್ಷನ್ ವೀಕ್ಷಣೆಗೆ ಲಭ್ಯವಿಲ್ಲ. ಇದು ಕನ್ನಡಿಗರ ಬೇಸರಕ್ಕೆ ಕಾರಣ ಆಗಿದೆ. ಬಹುತೇಕ ಒಟಿಟಿಗಳು ಕನ್ನಡಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿಲ್ಲ. ಇದು ಕರ್ನಾಟಕದ ಜನತೆಗೆ ನಿಜಕ್ಕೂ ಬೇಸರದ ವಿಷಯ.

‘ಧುರಂಧರ್’ ಸಿನಿಮಾದಲ್ಲಿ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಆದಿತ್ಯ ಧಾರ್ ಅವರ ನಿರ್ದೇಶನ ಇದೆ. ಈ ಚಿತ್ರ ರಿಲೀಸ್​​ಗೂ ಮೊದಲು ಸಾಕಷ್ಟು ನೆಗೆಟಿವ್ ಪ್ರಚಾರ ಪಡೆಯಿತು. ಆದರೆ, ಇದನ್ನು ಸಿನಿಮಾ ಮೆಟ್ಟಿ ನಿಂತಿತು. ಹಿಂದಿ ಚಿತ್ರರಂಗದ ಇತಿಹಾಸದಲ್ಲೇ ಅತಿ ದೀರ್ಘ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕೆ ಸಿಕ್ಕಿದೆ. ಸಿನಿಮಾದ ಅವಧಿ ಒಟಿಟಿಯಲ್ಲಿ ಮೂರುವರೆ ಗಂಟೆ ಇದೆ.

ಇದನ್ನೂ ಓದಿ: ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ಆದಿತ್ಯ ಧಾರ್ ನಿರ್ದೇಶನಕ್ಕೆ ಜನರು ಮರುಳಾಗಿದ್ದಾರೆ. ಈ ಚಿತ್ರ ಸ್ಪೈ ಕಥೆಯನ್ನು ಹೊಂದಿದೆ. ಈ ಸಿನಿಮಾನ ಥಿಯೇಟರ್​​​ನಲ್ಲಿ ಮಿಸ್ ಮಾಡಿಕೊಂಡವರು ಅಥವಾ ಸಿನಿಮಾನ ಚಿತ್ರಮಂದಿರದಲ್ಲಿ ನೋಡಿ ಮತ್ತೊಮ್ಮೆ, ಮಗದೊಮ್ಮೆ ನೋಡಬೇಕು ಎಂದುಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Fri, 30 January 26

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ