AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯಾಚಾರ ದೃಶ್ಯದ ಬಳಿಕ ನಾನು ವಾಂತಿ ಮಾಡಿದೆ’; ಭಯಾನಕ ಅನುಭವ ಬಿಚ್ಚಿಟ್ಟ ನಟಿ ದಿಯಾ ಮಿರ್ಜಾ

ದಿಯಾ ಮಿರ್ಜಾ ಅವರು ತಮ್ಮ 'ಕಾಫಿರ್' ಚಿತ್ರದ ಶೂಟ್ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದ ಅತ್ಯಾಚಾರದ ದೃಶ್ಯದ ಚಿತ್ರೀಕರಣದ ನಂತರ ವಾಂತಿ ಮಾಡಿದ್ದಾರೆಂದು ಬಹಿರಂಗಪಡಿಸಿದ್ದಾರೆ. ಈ ದೃಶ್ಯದ ಚಿತ್ರೀಕರಣ ಅವರಿಗೆ ಅತ್ಯಂತ ಕಷ್ಟಕರವಾಗಿತ್ತು ಎಂದು ವಿವರಿಸಿದ್ದಾರೆ. ಚಿತ್ರವು ಪಾಕಿಸ್ತಾನದ ಮಹಿಳೆಯೊಬ್ಬಳ ಕಥೆಯನ್ನು ಹೇಳುತ್ತದೆ.

‘ಅತ್ಯಾಚಾರ ದೃಶ್ಯದ ಬಳಿಕ ನಾನು ವಾಂತಿ ಮಾಡಿದೆ’; ಭಯಾನಕ ಅನುಭವ ಬಿಚ್ಚಿಟ್ಟ ನಟಿ ದಿಯಾ ಮಿರ್ಜಾ
ದಿಯಾ ಮಿರ್ಜಾ
ರಾಜೇಶ್ ದುಗ್ಗುಮನೆ
|

Updated on:Apr 17, 2025 | 8:43 AM

Share

ಲೈಂಗಿಜ ದೌರ್ಜನ್ಯಕ್ಕೆ ಒಳಗಾಗುವುದು, ಕಿಸ್ಸಿಂಗ್ ದೃಶ್ಯ, ಅತ್ಯಾಚಾರದ ದೃಶ್ಯಗಳನ್ನು ಮಾಡುವಾಗ ಎಲ್ಲಾ ನಟಿಯರಿಗೂ ಅದು ಕಂಫರ್ಟ್ ಎನಿಸೋದಿಲ್ಲ. ಕೆಲವು ನಟಿಯರು ಈ ವೇಳೆ ಮುಜುಗರ ಅನುಭವಿಸುತ್ತಾರೆ. ನಟಿ ದಿಯಾ ಮಿರ್ಜಾ (Dia Mirza) ಅವರಿಗೂ ಹಾಗೆಯೇ ಆಗಿದೆ. ಅತ್ಯಾಚಾರ ದೃಶ್ಯದ ಬಳಿಕ ಅವರಿಗೆ ವಾಂತಿ ಆಗಿತ್ತು. ಈ ಬಗ್ಗೆ ಸಂದರ್ಶನ ಒಂದರಲ್ಲಿ ಅವರು ಹೇಳಿಕೊಂಡಿದ್ದರೆ.  ವೆಬ್ ಸೀರಿಸ್ ಒಂದು ರೀ ಎಡಿಟಿಂಗ್ ಆಗಿ ಸಿನಿಮಾ ರೂಪದಲ್ಲಿ ಬರುತ್ತಿದೆ. ಈ ಚಿತ್ರದ ಶೂಟ್ ವೇಳೆ ನಡೆದ ಘಟನೆ ಇದಾಗಿತ್ತು.

2019ರಲ್ಲಿ ‘ಕಾಫಿರ್’ ಹೆಸರಿನ ವೆಬ್ ಸೀರಿಸ್ ಬಂದಿತ್ತು. ಈ ಸರಣಿಯನ್ನು ಸೋನಂ ನಾಯರ್ ಅವರು ನಿರ್ದೇಶನ ಮಾಡಿದ್ದರು. ಈ ಸರಣಿ ಈಗ ಸಾಕಷ್ಟು ಎಡಿಟಿಂಗ್ ಬಳಿಕ ಸಿನಿಮಾ ರೂಪದಲ್ಲಿ ಹೊರ ಬರುತ್ತಿದೆ. ಪಾಕಿಸ್ತಾನದ ಮಹಿಳೆ ಕೈನಾಜ್ ಅಖ್ತರ್ (ದಿಯಾ ಮಿರ್ಜಾ) ಭಾರತದಲ್ಲಿ ಬಂದು ಸಿಲುಕುತ್ತಾಳೆ. ಆಕೆಯ ಮೇಲೆ ಭಯೋತ್ಪಾದನೆಯ ಆರೋಪ ಬರುತ್ತದೆ. ನಿಜಕ್ಕೂ ಆಕೆ ಭಯೋತ್ಪಾದಕಿಯಾ? ಅವಳ ಮೇಲೆ ಈ ಆರೋಪ ಬಂದಿದ್ದು ಹೇಗೆ ಎಂಬುದನ್ನು ಸಿನಿಮಾ ವಿವರಿಸುತ್ತದೆ. ಆಕೆಯ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಬಗ್ಗೆಯೂ ಸಿನಿಮಾದಲ್ಲಿ ಹೇಳಲಾಗಿದೆ.

‘ಅತ್ಯಾಚಾರದ ದೃಶ್ಯ ಮಾಡುವಾಗ ಸಾಕಷ್ಟು ಕಷ್ಟ ಆಯಿತು. ಆ ದೃಶ್ಯ ಶೂಟ್ ಮಾಡಿದ ಬಳಿಕ ನಾನು ನಡುಗುತ್ತಿದ್ದೆ. ಈ ದೃಶ್ಯದ ಶೂಟ್ ಬಳಿಕ ನನಗೆ ವಾಂತಿ ಆಯಿತು. ಈ ಸಂದರ್ಭದಲ್ಲಿ ನಾವು ಭಾವನಾತ್ಮಕವಾಗಿ ಹಾಗೂ ದೈಹಿಕವಾಗಿ ಗಟ್ಟಿ ಇರಬೇಕು. ನೀವು ನಿಮ್ಮ ಇಡೀ ದೇಹವನ್ನು ಆ ಕ್ಷಣದ ಸತ್ಯಕ್ಕೆ ತೆಗೆದುಕೊಂಡು ಹೋದಾಗ ನೀವು ಅದನ್ನು ಅನುಭವಿಸುತ್ತೀರಿ’ ಎಂದಿದ್ದಾರೆ ದಿಯಾ ಮಿರ್ಜಾ.

ಇದನ್ನೂ ಓದಿ
Image
ಸತತ ಸೋಲು, ಸಂಭಾವನೆಯಲ್ಲಿ ಇಳಿಕೆ; ಆದರೂ ನೂರಾರು ಕೋಟಿ ಒಡೆಯ ವಿಕ್ರಮ್
Image
ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ  
Image
ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ; ಸಮಂತಾ
Image
ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್

ಅತ್ಯಾಚಾರದ ದೃಶ್ಯವನ್ನು ಮಾಡುವಾಗ ದಿಯಾ ಮಿರ್ಜಾಗೆ ಕಷ್ಟ ಆಗಲು ಕಾರಣ ಆಗಿದ್ದು ಅವರು ನಟನೆಯಲ್ಲಿ ಮುಳುಗಿ ಹೋಗಿದ್ದು. ತಮ್ಮೆ ಮೇಲೆ ಅತ್ಯಾಚಾರ ಆಗುತ್ತಿದೆ ಎಂಬ ರೀತಿಯ ಭಾವನೆ ಅವರಿಗೆ ಕಾಡಿತು. ಇದರಿಂದ ಅವರ ಮನಸ್ಸಿಗೆ ಘಾಸಿ ಆಯಿತು. ಆದರೆ, ನಟನೆಗೆ ಸಂಪೂರ್ಣ ನ್ಯಾಯ ಒದಗಿಸಿದ ಭಾವನೆ ಅವರಲ್ಲಿ ಇದೆ.

ಇದನ್ನೂ ಓದಿ: ಗಂಡನ ಮಾಜಿ ಪತ್ನಿಯ ಪುತ್ರಿ ಸಮೈರಾಗೆ ಪ್ರೀತಿಯ ಬರ್ತ್​ಡೇ ವಿಶ್​ ಮಾಡಿದ ನಟಿ ದಿಯಾ ಮಿರ್ಜಾ

ಅಂದಹಾಗೆ, ‘ಕಾಫಿರ್’ ಸರಣಿ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಈಗ ಸಿನಿಮಾ ಕೂಡ ಅಲ್ಲಿಯೇ ರಿಲೀಸ್ ಆಗಲಿದೆ. ಇದು ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಮಾಡಿದ ಸಿನಿಮಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:41 am, Thu, 17 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು