ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

ಸೋಶಿಯಲ್​ ಮೀಡಿಯಾದಲ್ಲಿ ಅಲ್ಲು ಅರ್ಜುನ್​ ಅವರ ಈ ಫೋಟೋ ವೈರಲ್​ ಆಗಿದೆ. ಅಧಿಕಾರಿಗಳ ಎದುರಿನಲ್ಲಿ ಅವರು ನಿಂತುಕೊಂಡ ಸಹಿ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಈ ಫೋಟೋ ನೋಡಿದ ಅಭಿಮಾನಿಗಳಿಗೆ ಗಾಬರಿ ಆಗಿದೆ. ಅಲ್ಲು ಅರ್ಜುನ್​ ಅರ್ಜುನ್​ ಅರೆಸ್ಟ್​ ಆಗಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಆದರೆ ಅದು ಸುಳ್ಳು ಎಂಬುದು ಗೊತ್ತಾಗಿದೆ.

ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ
ಅಲ್ಲು ಅರ್ಜುನ್ ವೈರಲ್​ ಫೋಟೋ
Follow us
|

Updated on: Mar 21, 2024 | 5:52 PM

ನಟ ಅಲ್ಲು ಅರ್ಜುನ್​ (Allu Arjun) ಅವರು ಪ್ರತಿ ದಿನ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂದು (ಮಾರ್ಚ್​ 21) ಅವರನ್ನು ಹೈದರಾಬಾದ್​ ಪೊಲೀಸರು ಬಂಧಿಸಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಆ ವಿಷಯ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಅಷ್ಟಕ್ಕೂ ಅರೆಸ್ಟ್​ (Arrest) ಆಗುವಂತಹ ಯಾವ ತಪ್ಪನ್ನು ಅಲ್ಲು ಅರ್ಜುನ್ ಮಾಡಿದರು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿತು. ಆದರೆ ಅಸಲಿ ಸಂಗತಿಯೇ ಬೇರೆ. ಅಲ್ಲು ಅರ್ಜುನ್​ ಅವರು ಆರ್​ಟಿಒ ಕಚೇರಿಗೆ ಭೇಟಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಡ್ರೈವಿಂಗ್​ ಲೈಸೆನ್ಸ್​ ಪಡೆಯುವ ಉದ್ದೇಶದಿಂದ ಅವರು ಆರ್​ಟಿಒ ಕಚೇರಿಗೆ ತೆರಳಿದ್ದಾರೆ ಅಷ್ಟೇ. ಆ ಸಂದರ್ಭದ ಫೋಟೋವನ್ನು (Allu Arjun Viral Photo) ಇಟ್ಟುಕೊಂಡು ಕಿಡಿಗೇಡಿಗಳು ಬಂಧನದ ಗಾಸಿಪ್​ ಹಬ್ಬಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಆರ್​ಟಿಒ ಅಧಿಕಾರಿಗಳ ಎದುರಿನಲ್ಲಿ ಅಲ್ಲು ಅರ್ಜುನ್​ ಅವರು ಸಹಿ ಮಾಡುತ್ತಿರುವ ದೃಶ್ಯ ಈ ಫೋಟೋದಲ್ಲಿದೆ. ಈ ಫೋಟೋ ನೋಡಿದ ಫ್ಯಾನ್ಸ್​ಗೆ ಗಾಬರಿ ಆಗಿದೆ. ಆದರೆ ಅವರು ಸಹಿ ಮಾಡುತ್ತಿರುವುದು ಅಂತಾರಾಷ್ಟ್ರೀಯ ಡ್ರೈವಿಂಗ್​ ಲೈಸೆನ್ಸ್​ ಅರ್ಜಿಗೆ. ಈ ವಿಷಯ ಗೊತ್ತಾದ ಬಳಿಕ ಅರೆಸ್ಟ್​ ವದಂತಿಗೆ ಬ್ರೇಕ್​ ಬಿದ್ದಿದೆ.

ಇದನ್ನೂ ಓದಿ: ‘ನಾವು ಸಹೋದರರು, ಪರಸ್ಪರ ಗೌರವ ಇದೆ’; ಬಾಲಿವುಡ್​ ಬಗ್ಗೆ ಅಲ್ಲು ಅರ್ಜುನ್​ ಮಾತು

ಅಷ್ಟಕ್ಕೂ ಅಲ್ಲು ಅರ್ಜುನ್​ ಅವರಿಗೆ ಇಂಟರ್​ನ್ಯಾಷನಲ್​ ಡ್ರೈವಿಂಗ್​ ಲೈಸೆನ್ಸ್​ ಅಗತ್ಯತೆ ಏನಿದೆ? ಆ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಸದ್ಯ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ವಿದೇಶದಲ್ಲೂ ಈ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಫಾರಿನ್​ನಲ್ಲಿ ನಡೆಯುವ ಭರ್ಜರಿ ಚೇಸಿಂಗ್​ ದೃಶ್ಯಗಳಲ್ಲಿ ಅಲ್ಲು ಅರ್ಜುನ್​ ಅವರು ವಾಹನ ಚಾಲನೆ ಮಾಡಬೇಕಿದೆ. ಆ ಸಂದರ್ಭದಲ್ಲಿ ಕಾನೂನಿನ ಅಡೆತಡೆ ಉಂಟಾಗುವುದು ಬೇಡ ಎಂಬ ಉದ್ದೇಶದಿಂದ ಅವರು ಮುಂಚಿತವಾಗಿ ಅಂತಾರಾಷ್ಟ್ರೀಯ ಡ್ರೈವಿಂಗ್​ ಲೈಸೆನ್ಸ್​ ಪಡೆದುಕೊಳ್ಳುತ್ತಿದ್ದಾರೆ.

ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ತೆರೆಕಾಣಲಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಇತ್ತೀಚೆಗೆ ಶೂಟಿಂಗ್​ ಸೆಟ್​ನಿಂದ ಒಂದು ವಿಡಿಯೋ ಲೀಕ್​ ಆಗಿತ್ತು. ರಶ್ಮಿಕಾ ಮಂದಣ್ಣ ಅವರು ಶ್ರೀವಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ವಿಡಿಯೋ ಲೀಕ್​ ಮೂಲಕ ಆ ಪಾತ್ರದ ಗೆಟಪ್​ ಬಹಿರಂಗ ಆಗಿದೆ. ಹೀಗೆ ಒಂದಲ್ಲ ಒಂದು ಕಾರಣದಿಂದ ಈ ಸಿನಿಮಾ ಸುದ್ದಿ ಆಗುತ್ತಿದೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ