AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

ಸೋಶಿಯಲ್​ ಮೀಡಿಯಾದಲ್ಲಿ ಅಲ್ಲು ಅರ್ಜುನ್​ ಅವರ ಈ ಫೋಟೋ ವೈರಲ್​ ಆಗಿದೆ. ಅಧಿಕಾರಿಗಳ ಎದುರಿನಲ್ಲಿ ಅವರು ನಿಂತುಕೊಂಡ ಸಹಿ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಈ ಫೋಟೋ ನೋಡಿದ ಅಭಿಮಾನಿಗಳಿಗೆ ಗಾಬರಿ ಆಗಿದೆ. ಅಲ್ಲು ಅರ್ಜುನ್​ ಅರ್ಜುನ್​ ಅರೆಸ್ಟ್​ ಆಗಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಆದರೆ ಅದು ಸುಳ್ಳು ಎಂಬುದು ಗೊತ್ತಾಗಿದೆ.

ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ
ಅಲ್ಲು ಅರ್ಜುನ್ ವೈರಲ್​ ಫೋಟೋ
ಮದನ್​ ಕುಮಾರ್​
|

Updated on: Mar 21, 2024 | 5:52 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ಪ್ರತಿ ದಿನ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂದು (ಮಾರ್ಚ್​ 21) ಅವರನ್ನು ಹೈದರಾಬಾದ್​ ಪೊಲೀಸರು ಬಂಧಿಸಿದ್ದಾರೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಆ ವಿಷಯ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಅಷ್ಟಕ್ಕೂ ಅರೆಸ್ಟ್​ (Arrest) ಆಗುವಂತಹ ಯಾವ ತಪ್ಪನ್ನು ಅಲ್ಲು ಅರ್ಜುನ್ ಮಾಡಿದರು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿತು. ಆದರೆ ಅಸಲಿ ಸಂಗತಿಯೇ ಬೇರೆ. ಅಲ್ಲು ಅರ್ಜುನ್​ ಅವರು ಆರ್​ಟಿಒ ಕಚೇರಿಗೆ ಭೇಟಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಡ್ರೈವಿಂಗ್​ ಲೈಸೆನ್ಸ್​ ಪಡೆಯುವ ಉದ್ದೇಶದಿಂದ ಅವರು ಆರ್​ಟಿಒ ಕಚೇರಿಗೆ ತೆರಳಿದ್ದಾರೆ ಅಷ್ಟೇ. ಆ ಸಂದರ್ಭದ ಫೋಟೋವನ್ನು (Allu Arjun Viral Photo) ಇಟ್ಟುಕೊಂಡು ಕಿಡಿಗೇಡಿಗಳು ಬಂಧನದ ಗಾಸಿಪ್​ ಹಬ್ಬಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಆರ್​ಟಿಒ ಅಧಿಕಾರಿಗಳ ಎದುರಿನಲ್ಲಿ ಅಲ್ಲು ಅರ್ಜುನ್​ ಅವರು ಸಹಿ ಮಾಡುತ್ತಿರುವ ದೃಶ್ಯ ಈ ಫೋಟೋದಲ್ಲಿದೆ. ಈ ಫೋಟೋ ನೋಡಿದ ಫ್ಯಾನ್ಸ್​ಗೆ ಗಾಬರಿ ಆಗಿದೆ. ಆದರೆ ಅವರು ಸಹಿ ಮಾಡುತ್ತಿರುವುದು ಅಂತಾರಾಷ್ಟ್ರೀಯ ಡ್ರೈವಿಂಗ್​ ಲೈಸೆನ್ಸ್​ ಅರ್ಜಿಗೆ. ಈ ವಿಷಯ ಗೊತ್ತಾದ ಬಳಿಕ ಅರೆಸ್ಟ್​ ವದಂತಿಗೆ ಬ್ರೇಕ್​ ಬಿದ್ದಿದೆ.

ಇದನ್ನೂ ಓದಿ: ‘ನಾವು ಸಹೋದರರು, ಪರಸ್ಪರ ಗೌರವ ಇದೆ’; ಬಾಲಿವುಡ್​ ಬಗ್ಗೆ ಅಲ್ಲು ಅರ್ಜುನ್​ ಮಾತು

ಅಷ್ಟಕ್ಕೂ ಅಲ್ಲು ಅರ್ಜುನ್​ ಅವರಿಗೆ ಇಂಟರ್​ನ್ಯಾಷನಲ್​ ಡ್ರೈವಿಂಗ್​ ಲೈಸೆನ್ಸ್​ ಅಗತ್ಯತೆ ಏನಿದೆ? ಆ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಸದ್ಯ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ವಿದೇಶದಲ್ಲೂ ಈ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಫಾರಿನ್​ನಲ್ಲಿ ನಡೆಯುವ ಭರ್ಜರಿ ಚೇಸಿಂಗ್​ ದೃಶ್ಯಗಳಲ್ಲಿ ಅಲ್ಲು ಅರ್ಜುನ್​ ಅವರು ವಾಹನ ಚಾಲನೆ ಮಾಡಬೇಕಿದೆ. ಆ ಸಂದರ್ಭದಲ್ಲಿ ಕಾನೂನಿನ ಅಡೆತಡೆ ಉಂಟಾಗುವುದು ಬೇಡ ಎಂಬ ಉದ್ದೇಶದಿಂದ ಅವರು ಮುಂಚಿತವಾಗಿ ಅಂತಾರಾಷ್ಟ್ರೀಯ ಡ್ರೈವಿಂಗ್​ ಲೈಸೆನ್ಸ್​ ಪಡೆದುಕೊಳ್ಳುತ್ತಿದ್ದಾರೆ.

ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ತೆರೆಕಾಣಲಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಇತ್ತೀಚೆಗೆ ಶೂಟಿಂಗ್​ ಸೆಟ್​ನಿಂದ ಒಂದು ವಿಡಿಯೋ ಲೀಕ್​ ಆಗಿತ್ತು. ರಶ್ಮಿಕಾ ಮಂದಣ್ಣ ಅವರು ಶ್ರೀವಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ವಿಡಿಯೋ ಲೀಕ್​ ಮೂಲಕ ಆ ಪಾತ್ರದ ಗೆಟಪ್​ ಬಹಿರಂಗ ಆಗಿದೆ. ಹೀಗೆ ಒಂದಲ್ಲ ಒಂದು ಕಾರಣದಿಂದ ಈ ಸಿನಿಮಾ ಸುದ್ದಿ ಆಗುತ್ತಿದೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್