AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಫೋಟೊ: ಒಂದೇ ಸಿನಿಮಾನಲ್ಲಿ ಚಿರಂಜೀವಿ-ಪವನ್ ಕಲ್ಯಾಣ್

Chiranjeevi-Pawan Kalyan: ಚಿರಂಜೀವಿ ಮತ್ತು ಪವನ್ ಕಲ್ಯಾಣ್ ಅವರುಗಳು ತೆಲುಗು ಚಿತ್ರರಂಗದ ಇಬ್ಬರು ಬಹು ದೊಡ್ಡ ಸೂಪರ್ ಸ್ಟಾರ್​ಗಳು. ಈ ಇಬ್ಬರು ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿದರೆ ಬಾಕ್ಸ್ ಆಫೀಸ್ ಛಿಂದಿ ಆಗುವುದು ಪಕ್ಕಾ. ಇದೀಗ ಈ ಇಬ್ಬರೂ ಒಟ್ಟಿಗೆ ಸಿನಿಮಾ ಸೆಟ್​​ನಲ್ಲಿ ಇರುವ ಚಿತ್ರ ವೈರಲ್ ಆಗಿದ್ದು, ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಯಾವುದು ಆ ಸಿನಿಮಾ?

ವೈರಲ್ ಫೋಟೊ: ಒಂದೇ ಸಿನಿಮಾನಲ್ಲಿ ಚಿರಂಜೀವಿ-ಪವನ್ ಕಲ್ಯಾಣ್
Megastar Chiranjeevi
ಮಂಜುನಾಥ ಸಿ.
|

Updated on: Jul 01, 2025 | 3:05 PM

Share

ಪವನ್ ಕಲ್ಯಾಣ್ (Pawan Kalyan) ಮತ್ತು ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ತೆಲುಗು ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್ ಹೀರೋಗಳು. ಇಬ್ಬರಿಗೂ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಹಾಕಿದ ಹಣವನ್ನು ಒಂದೇ ದಿನ ಮರಳಿ ಗಳಿಸಿಕೊಡುವ ತಾಕತ್ತಿರುವ ನಟರು ಈ ಇಬ್ಬರು. ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್, ರಾಜಕೀಯದ ನಡುವೆ ತಾವು ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿಕೊಡುತ್ತಿದ್ದಾರೆ. ಈಗಾಗಲೇ ‘ಹರಿ ಹರ ವೀರ ಮಲ್ಲು’ ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಈಗ ‘ಉಸ್ತಾದ್ ಭಗತ್​ ಸಿಂಗ್’ ಮತ್ತು ‘ಓಜಿ’ ಸಿನಿಮಾಗಳನ್ನು ಮುಗಿಸಿಕೊಡುತ್ತಿದ್ದಾರೆ.

ಇದೀಗ ಪವನ್ ಹಾಗೂ ಅವರ ಸಹೋದರ ಚಿರಂಜೀವಿ ಅವರು ಒಟ್ಟಿಗೆ ಇರುವ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರ ಹಲವು ಸುದ್ದಿಗಳಿಗೆ ಕಾರಣವಾಗಿದೆ. ಚಿತ್ರ ವೈರಲ್ ಆಗುತ್ತಿದ್ದಂತೆ ನಾನಾ ಸುದ್ದಿಗಳು ಹರಿದಾಡಲು ಆರಂಭಿಸಿದ್ದು, ಪವನ್ ಕಲ್ಯಾಣ್ ಹಾಗೂ ಚಿರಂಜೀವಿ ಒಂದೇ ಸಿನಿಮಾನಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡುತ್ತಿದೆ. ಈ ಇಬ್ಬರೂ ಒಂದೇ ಸಿನಿಮಾನಲ್ಲಿ ನಟಿಸಿದರೆ ಬಾಕ್ಸ್ ಆಫೀಸ್ ಅಲ್ಲೋಲ ಕಲ್ಲೋಲ ಆಗುವುದು ಪಕ್ಕಾ.

ಅಸಲಿಗೆ ನಡೆದಿರುವುದೇನೆಂದರೆ ಪವನ್ ಕಲ್ಯಾಣ್, ‘ಉಸ್ತಾದ್ ಭಗತ್​ಸಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದು, ಆ ಸಿನಿಮಾ ಸೆಟ್​ಗೆ ಚಿರಂಜೀವಿ ಇತ್ತೀಚೆಗಷ್ಟೆ ಭೇಟಿ ನೀಡಿದ್ದರು. ಚಿತ್ರ ನೋಡಿದವರು, ಚಿರಂಜೀವಿ ಅವರು ‘ಉಸ್ತಾದ್ ಭಗತ್​ಸಿಂಗ್’ ಸಿನಿಮಾದ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇದೇ ಕಾರಣಕ್ಕೆ ಅವರು ಸಿನಿಮಾ ಸೆಟ್​ಗೆ ಹೋಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ಮರು ಬಿಡುಗಡೆ

ಪವನ್ ಕಲ್ಯಾಣ್ ಈ ಹಿಂದೆ ಚಿರಂಜೀವಿ ಅವರ ಕೆಲವು ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಶಂಕರ್ ದಾದ ಎಂಬಿಬಿಎಸ್’ ಸಿನಿಮಾದ ಹಾಡೊಂದರಲ್ಲಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದರು, ಆ ಬಳಿಕ ಬಿಡುಗಡೆ ಆದ ‘ಶಂಕರ್ ದಾದ ಜಿಂದಾಬಾದ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಒಂದು ಫೈಟ್ ಸಹ ಅವರಿಗಾಗಿ ಇಡಲಾಗಿತ್ತು. ಇನ್ನು ಚಿರಂಜೀವಿ, ಈ ವರೆಗೆ ಯಾವುದೇ ಪವನ್ ಕಲ್ಯಾಣ್ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿಲ್ಲ. ಆದರೆ ಹಲವು ಪವನ್ ಕಲ್ಯಾಣ್ ಸಿನಿಮಾಗಳಲ್ಲಿ ಚಿರಂಜೀವಿ ಅವರ ಚಿತ್ರ, ಹೆಸರನ್ನು ಬಳಸಿಕೊಳ್ಳಲಾಗಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಹರೀಶ್ ಶಂಕರ್ ನಿರ್ದೇಶನ ಮಾಡುತ್ತಿದ್ದು, ಪಕ್ಕಾ ಕಮರ್ಶಿಯಲ್ ನಿರ್ದೇಶಕ ಆಗಿರುವ ಹರೀಶ್ ಶಂಕರ್, ಸಿನಿಮಾಕ್ಕಾಗಿ ಅತಿಥಿ ಪಾತ್ರಗಳನ್ನು ಬಳಸಿಕೊಳ್ಳುತ್ತಾರೆ. ಹಾಗಾಗಿ ಈಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಚಿರಂಜೀವಿ ಅವರನ್ನು ಅತಿಥಿ ಪಾತ್ರದಲ್ಲಿ ನಟಿಸಲು ಒಪ್ಪಿಸಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ