Samantha: ವಿಚ್ಛೇದನ ಕೊಟ್ಟು ಹೋದ ಸಮಂತಾಗೆ ಅನಾರೋಗ್ಯ ಅಂತ ತಿಳಿದಾಗ ಮಾಜಿ ಪತಿ ನಾಗ ಚೈತನ್ಯ ಹೀಗೆಲ್ಲ ಮಾಡಿದ್ರಾ?

Samantha Health Problem: ಸಮಂತಾಗೆ ಆರೋಗ್ಯ ಕೈ ಕೊಟ್ಟಿದೆ ಎಂಬ ವಿಚಾರ ತಿಳಿದ ಬಳಿಕ ಅಭಿಮಾನಿಗಳಿಗೆ ಬೇಸರ ಆಗಿದೆ. ಅಲ್ಲದೇ, ಮಾಜಿ ಪತಿ ನಾಗ ಚೈತನ್ಯ ಬಗ್ಗೆಯೂ ಒಂದಷ್ಟು ಅಂತೆ-ಕಂತೆಗಳು ಹಬ್ಬಿವೆ.

Samantha: ವಿಚ್ಛೇದನ ಕೊಟ್ಟು ಹೋದ ಸಮಂತಾಗೆ ಅನಾರೋಗ್ಯ ಅಂತ ತಿಳಿದಾಗ ಮಾಜಿ ಪತಿ ನಾಗ ಚೈತನ್ಯ ಹೀಗೆಲ್ಲ ಮಾಡಿದ್ರಾ?
ಸಮಂತಾ, ನಾಗ ಚೈತನ್ಯ
Follow us
| Updated By: ಮದನ್​ ಕುಮಾರ್​

Updated on: Nov 04, 2022 | 9:27 AM

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರ ವೈಯಕ್ತಿಕ ಜೀವನದ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ಅವರಿಗೆ ಈಗ ಅನಾರೋಗ್ಯ ಕಾಡುತ್ತಿದೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ. ಈ ಸಂರ್ಭದಲ್ಲಿ ಅವರ ಮಾಜಿ ಪತಿ ನಾಗ ಚೈತನ್ಯ (Naga Chaitanya) ಬಗ್ಗೆಯೂ ಒಂದಷ್ಟು ಅಂತೆ-ಕಂತೆಗಳು ಹರಿದಾಡುತ್ತಿವೆ. ಈ ಸೆಲೆಬ್ರಿಟಿಗಳು ವಿಚ್ಛೇದನ ಪಡೆದು ಬಹಳ ತಿಂಗಳುಗಳು ಕಳೆದಿವೆ. ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಳಿಕ ಪರಸ್ಪರ ಅವರಿಬ್ಬರು ಮುಖ ನೋಡಿಕೊಂಡಿಲ್ಲ. ಸಾರ್ವಜನಿಕವಾಗಿ ಒಬ್ಬರ ಬಗ್ಗೆ ಮತ್ತೊಬ್ಬರು ಮಾತನಾಡಿಲ್ಲ. ಆದರೆ ಸಮಂತಾಗೆ ಅನಾರೋಗ್ಯದ (Samantha Health Condition) ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ನಾಗ ಚೈತನ್ಯ ಬಗ್ಗೆ ಗಾಸಿಪ್​ ಮಂದಿ ಇಲ್ಲಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ಅವರು ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದವರು. ಆದರೆ ನಾಲ್ಕೇ ವರ್ಷಕ್ಕೆ ಅವರ ಸಂಸಾರ ಅಂತ್ಯವಾಯ್ತು. ಇಬ್ಬರ ನಡುವೆ ವೈಮನಸ್ಸು ಮೂಡಿದ್ದರಿಂದ ವಿಚ್ಛೇದನ ಪಡೆದುಕೊಂಡರು. ಮಾಜಿ ಪತ್ನಿ ಬಗ್ಗೆ ನಾಗ ಚೈತನ್ಯ ಅವರು ಈಗಲೂ ಕರುಣೆ ತೋರುತ್ತಿದ್ದಾರೆ ಎಂಬ ಗಾಸಿಪ್​ ಹರಡಿದೆ. ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆಯೇ ನಾಗ ಚೈತನ್ಯ ಫೋನ್​ ಮಾಡಿದ್ರಂತೆ, ಆಸ್ಪತ್ರೆಗೆ ಹೋಗಿ ನೋಡಿಕೊಂಡು ಬಂದ್ರಂತೆ, ಆರೋಗ್ಯ ವಿಚಾರಿಸಿ ಕಾಳಜಿ ತೋರಿಸಿದ್ರಂತೆ ಎಂದೆಲ್ಲ ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಆಸ್ಪತ್ರೆಯಲ್ಲಿ ಸಮಂತಾ ಅವರನ್ನು ನಾಗ ಚೈತನ್ಯ ಭೇಟಿ ಆಗಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿ ಯಾವುದೇ ಫೋಟೋ ಅಥವಾ ವಿಡಿಯೋ ಸಿಕ್ಕಿಲ್ಲ. ಹಾಗಾಗಿ ಇಂಥ ವರದಿಯಲ್ಲಿ ಹುರುಳಿಲ್ಲ ಎಂದು ಅಭಿಮಾನಿಗಳು ಅರ್ಥ ಮಾಡಿಕೊಂಡಿದ್ದಾರೆ. ವೈಯಕ್ತಿಕ ವಿಚಾರಗಳ ಕುರಿತು ನಾಗ ಚೈತನ್ಯ ಸೈಲೆಂಟ್​ ಆಗಿದ್ದಾರೆ. ಮಾಜಿ ಪತ್ನಿ ಬಗ್ಗೆ ಅವರು ಯಾವುದೇ ರೀತಿಯ ಹೇಳಿಕೆಗಳನ್ನು ನೀಡುತ್ತಿಲ್ಲ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಸಮಂತಾ ಕೈಯಲ್ಲಿ ಹಲವು ಸಿನಿಮಾಗಳಿವೆ. ಅನಾರೋಗ್ಯದ ನಡುವೆಯೂ ಅವರು ಡಬ್ಬಿಂಗ್​ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಅವರು ಇತ್ತೀಚೆಗೆ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಅವರು ನಟಿಸಿರುವ ‘ಯಶೋದ’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಟ್ರೇಲರ್​ ಮೂಲಕ ಗಮನ ಸೆಳೆದಿರುವ ಈ ಸಿನಿಮಾ ನವೆಂಬರ್​ 11ರಂದು ತೆರೆಕಾಣಲಿದೆ.

ಬಹುನಿರೀಕ್ಷಿತ ‘ಶಾಕುಂತಲಂ’ ಸಿನಿಮಾದ ಕೆಲಸಗಳಲ್ಲೂ ಸಮಂತಾ ತೊಡಗಿಕೊಂಡಿದ್ದಾರೆ. ಇದಲ್ಲದೇ, ವಿಜಯ್​ ದೇವರಕೊಂಡ ಜೊತೆ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಮಾಂತಾ ಅವರ ಅನಾರೋಗ್ಯದ ಕಾರಣದಿಂದ ‘ಖುಷಿ’ ಚಿತ್ರದ ಶೂಟಿಂಗ್​ ಮುಂದೂಡಲ್ಪಟ್ಟಿದೆ. ಅವರು ಆದಷ್ಟು ಬೇಗ ಸಂಪೂರ್ಣವಾಗಿ ಚೇತರಿಸಿಕೊಂಡು ಮೊದಲಿನಂತಾಗಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು