AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?

Pawan Kalyan movie: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?
Pawan Kalyan
ಮಂಜುನಾಥ ಸಿ.
|

Updated on: Mar 24, 2026 | 11:58 AM

Share

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುಂಚೆ ಒಪ್ಪಿಕೊಂಡಿದ್ದ ಸಿನಿಮಾಗಳನ್ನು ಮುಗಿಸಿ ಆ ನಂತರ ಯಾವುದೂ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದಿದ್ದರು. ಆದರೆ ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡಲು ಆರಂಭಿಸಿವೆ. ಇದು ಅಭಿಮಾನಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಇದೀಗ ಪವನ್ ಕಲ್ಯಾಣ್ ತಂಡದವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಪವನ್ ಕಲ್ಯಾಣ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ ಎಂದಿದ್ದಾರೆ. ಪವನ್ ಕಲ್ಯಾಣ್ ಅವರು ಹೊಸ ನಿರ್ದೇಶಕರೊಂದಿಗೆ ಸಿನಿಮಾ ಮಾಡಲಿದ್ದಾರೆ ಮತ್ತು ಕೆಲವು ದೊಡ್ಡ ಬ್ಯಾನರ್‌ಗಳ ಅಡಿಯಲ್ಲಿ ಚಿತ್ರಗಳಿಗೆ ಒಪ್ಪಿಗೆ ನೀಡಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು. ಆದರೆ, ಸದ್ಯಕ್ಕೆ ಅವರು ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ ಎಂದು ಅವರ ತಂಡ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಶ್ರೀಲೀಲಾ ಜೊತೆ ಕಾಣಿಸಿಕೊಳ್ಳುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್: ಕಾರಣ?

ಪವನ್ ಕಲ್ಯಾಣ್ ಅವರು ಈ ಮೊದಲೇ ಒಪ್ಪಿಕೊಂಡಿದ್ದ ಕಾರಣಕ್ಕಾಗಿ ಮಾತ್ರವೇ ‘ಹರಿ ಹರ ವೀರ ಮಲ್ಲು’ ‘OG’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳನ್ನು ತಮ್ಮ ರಾಜಕೀಯದ ಜವಾಬ್ದಾರಿಗಳ ನಡುವೆಯೂ ಮುಗಿಸಿಕೊಟ್ಟಿದ್ದಾರೆ. ಆದರೆ ಇನ್ನು ಮುಂದೆ ಪವನ್ ಕಲ್ಯಾಣ್ ಅವರು ಸಂಪೂರ್ಣವಾಗಿ ಆಡಳಿತದಲ್ಲಿಯೇ ತೊಡಗಿಕೊಳ್ಳಲಿದ್ದಾರೆ ಎಂದು ಅವರ ಆಪ್ತವಲಯ ಸ್ಪಷ್ಟಪಡಿಸಿದೆ.

ಉಪಮುಖ್ಯಮಂತ್ರಿಯಾಗಿ ರಾಜ್ಯದ ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವುದರಿಂದ, ಸಿನಿಮಾಗಳಿಗೆ ಸಮಯ ಮೀಸಲಿಡುವುದು ಅವರಿಗೆ ಸವಾಲಾಗಿದೆ. ಯಾವುದೇ ಅಧಿಕೃತ ಘೋಷಣೆ ಹೊರಬರುವವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳನ್ನು ನಂಬಬೇಡಿ ಎಂದು ಪವನ್ ಅವರ ತಂಡ ಅಭಿಮಾನಿಗಳಲ್ಲಿ ವಿನಂತಿಸಿದೆ. ಪವನ್ ನಟಿಸಿದ್ದ ‘ಓಜಿ’ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸುವ ಆಸೆ ಅವರಿಗೆ ಇದ್ದು, ಒಂದೊಮ್ಮೆ ಪವನ್ ಕಲ್ಯಾಣ್ ಮುಂದಿನ ದಿನಗಳಲ್ಲಿ ನಟಿಸಿದರೆ ‘ಓಜಿ’ ಸಿನಿಮಾದ ಸೀಕ್ವೆಲ್ ಮಾತ್ರವೇ ಆಗಿರಲಿದೆ ಎನ್ನಲಾಗುತ್ತಿದೆ. ಆದರೆ ಪ್ರಸ್ತುತ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!
ಬೆಳಗಾವಿ: ಪೆಟ್ರೋಲ್, ಡಿಸೇಲ್ ಅಭಾವ? ಬಂಕ್​ಗಳಿಗೆ ಏಕಾಏಕಿ ಮುಗಿಬಿದ್ದ ಜನ
ಬೆಳಗಾವಿ: ಪೆಟ್ರೋಲ್, ಡಿಸೇಲ್ ಅಭಾವ? ಬಂಕ್​ಗಳಿಗೆ ಏಕಾಏಕಿ ಮುಗಿಬಿದ್ದ ಜನ
ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ಆಮೇಲೇನಾಯ್ತು?
ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ಆಮೇಲೇನಾಯ್ತು?
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ