AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು?

Pooja Hegde: ಪೂಜಾ ಹೆಗ್ಡೆಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮಾಡುವಾಗ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ನಟರೊಬ್ಬರು ನನಗಾಗಿ ಮೀಸಲಿದ್ದ ಕ್ಯಾರಾವ್ಯಾನ್ ಒಳಕ್ಕೆ ಬಲವಂತವಾಗಿ ನುಗ್ಗಿದರು, ಆಗ ನಾನು ಅವರ ಕಪಾಳಕ್ಕೆ ಹೊಡೆದೆ ಎಂದು ಹೇಳಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಸುದ್ದಿ ಮಾಧ್ಯಮಗಳಲ್ಲಿಯೂ ಹರಿದಾಡುತ್ತಿದೆ.

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು?
Prabhas Pooja Hegde
ಮಂಜುನಾಥ ಸಿ.
|

Updated on: Jan 20, 2026 | 3:40 PM

Share

ಸಿನಿಮಾ ರಂಗದಲ್ಲಿ (Cinema) ಮಹಿಳೆಯರ ಮೇಲೆ ದೌರ್ಜನ್ಯ ದಶಕಗಳಿಂದಲೂ ನಡೆದುಕೊಂಡು ಬರುತ್ತಲೇ ಇದೆ. ನಟಿಯರು, ಚಿತ್ರರಂಗದಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಆದರೆ ಮೀ ಟೂ ಚಳವಳಿ ಬಂದ ಬಳಿಕ ಹಲವು ನಟಿಯರು ಈ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದರು. ಆದರೆ ಕೆಲವರು ಇದೇ ಚಳವಳಿಯನ್ನು ಋಣಾತ್ಮಕವಾಗಿಯೂ ಬಳಸಿಕೊಂಡು, ಸುಳ್ಳು ಆರೋಪ, ತೇಜೋ ವಧೆಗಳನ್ನು ಸಹ ಮಾಡಿದರು. ಇನ್ನು ಕೆಲವರು ಮತ್ತೊಬ್ಬರ ಮೇಲೆ ತಪ್ಪು ಅಭಿಪ್ರಾಯ ಭಿತ್ತಲು ನಟಿಯರನ್ನು ಬಳಸಿಕೊಂಡರು. ಇತ್ತೀಚೆಗೆ ಪೂಜಾ ಹೆಗ್ಡೆ ಹೇಳಿದ್ದಾರೆ ಎನ್ನಲಾದ ಇದೇ ರೀತಿಯ ಸುದ್ದಿಯೊಂದು ಹರಿದಾಡುತ್ತಿದೆ.

ಕಳೆದ ಕೆಲ ದಿನಗಳಿಂದ ಪೂಜಾ ಹೆಗ್ಡೆಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮಾಡುವಾಗ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ನಟರೊಬ್ಬರು ನನಗಾಗಿ ಮೀಸಲಿದ್ದ ಕ್ಯಾರಾವ್ಯಾನ್ ಒಳಕ್ಕೆ ಬಲವಂತವಾಗಿ ನುಗ್ಗಿದರು, ಆಗ ನಾನು ಅವರ ಕಪಾಳಕ್ಕೆ ಹೊಡೆದೆ ಎಂದು ಹೇಳಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಸುದ್ದಿ ಮಾಧ್ಯಮಗಳಲ್ಲಿಯೂ ಹರಿದಾಡುತ್ತಿದೆ. ಹಲವರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ಸಹ ನೀಡಿದ್ದಾರೆ.

ಪೂಜಾ ಹೆಗ್ಡೆ ಹೇಳಿರುವಂತೆ ಅವರ ಕ್ಯಾರಾವ್ಯಾನ್​​ಗೆ ನುಗ್ಗಿರುವವರು ಯಾರು ಎಂಬ ಚರ್ಚೆಯನ್ನೂ ಮಾಡಿದ್ದು, ಹಲವರು ಅದು ಪ್ರಭಾಸ್ ಆಗಿರಬೇಕು ಎಂದಿದ್ದಾರೆ. ಏಕೆಂದರೆ ‘ರಾಧಾ-ಶ್ಯಾಮ್’ ಸಿನಿಮಾದ ಬಳಿಕ ಏಕಾ-ಏಕಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಿಂದ ಕಾಣೆ ಆದರು. ಆ ರೀತಿ ಕಾಣೆ ಆಗಿದ್ದಕ್ಕೆ ಪ್ರಭಾಸ್​​ ಅವರೇ ಕಾರಣ ಇರಬಹುದು ಎಂಬೆಲ್ಲ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು.

ಇದನ್ನೂ ಓದಿ:ಚಿರಂಜೀವಿ ಕ್ರೇಜ್: ಒಂದೇ ಕುಟುಂಬದ 140 ಮಂದಿಯಿಂದ ಸಿನಿಮಾ ವೀಕ್ಷಣೆ

ಆದರೆ ಇದು ಸುಳ್ಳಿ ಸುದ್ದಿಯಂತೆ. ಪೂಜಾ ಹೆಗ್ಡೆ ಹೀಗೊಂದು ಹೇಳಿಕೆಯನ್ನು ಎಲ್ಲಿಯೂ ನೀಡಿಲ್ಲ. ಯಾವ ಮಾಧ್ಯಮಗಳ ಬಳಿಯೂ ಮೇಲಿನಂತೆ ಪೂಜಾ ಹೆಗ್ಡೆ ಹೇಳಿಕೊಂಡಿಲ್ಲ. ಆದರೆ ಯಾರೋ ಕೆಲವು ಕಿಡಿಗೇಡಿಗಳು ಬೇಕೆಂದೇ ಪೂಜಾ ಹೆಗ್ಡೆ ಅವರ ಫೋಟೊ ಬಳಸಿ ಹೀಗೊಂದು ನಕಲಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ನಕಲಿ ಸುದ್ದಿಯನ್ನು ನಂಬಿಕ ಕೆಲವರು ಪ್ರಭಾಸ್ ಅವರ ಬಗ್ಗೆ ಋಣಾತ್ಮಕ ಪೋಸ್ಟ್​​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೂಜಾ ಹೆಗ್ಡೆ ಪ್ರಭಾಸ್ ಜೊತೆಗೆ ‘ರಾಧೆ-ಶ್ಯಾಮ್’ ಸಿನಿಮಾನಲ್ಲಿ ನಟಸಿದ್ದು, ಪ್ರಭಾಸ್ ಬಗ್ಗೆ ಗೌರವ ಹೊಂದಿದ್ದಾರೆ. ಪ್ರಭಾಸ್ ಬಗ್ಗೆ ಕೆಲ ಸಂದರ್ಶನಗಳಲ್ಲಿ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಪೂಜಾ ಹೆಗ್ಡೆ ಇದೀಗ ಮತ್ತೆ ತೆಲುಗು ಚಿತ್ರರಂಗಕ್ಕೆ ಮರಳಿದ್ದು ಎರಡು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ತಮಿಳಿನ ‘ಕಾಂಚನಾ 4’ ಸಿನಿಮಾನಲ್ಲಿಯೂ ನಟಿಸುತ್ತಿದ್ದಾರೆ. ಕೈಯಲ್ಲಿ ಒಂದೆರಡು ಹಿಂದಿ ಸಿನಿಮಾಗಳು ಸಹ ಪೂಜಾ ಹೆಗ್ಡೆಗೆ ಇವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!